Breaking News

ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ರಸಮಂಜರಿ ಕಾರ್ಯಕ್ರಮ

Spread the love

ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ರಸಮಂಜರಿ ಕಾರ್ಯಕ್ರಮ


ಗೋಕಾಕ: ಗೋಕಾಕ ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಠ ವತಿಯಿಂದ ಯುಗಾದಿ ಹಬ್ಬದ ನಿಮಿತ್ಯ ಆಯೋಜಿಸಿದಲಾದ ರಸಮಂಜರಿ ಕಾರ್ಯಕ್ರಮವನ್ನು ಶಾಸಕರ ಕಚೇರಿ ಸಹಾಯಕ ಸುರೇಶ ಸನದಿ ಚಾಲನೆ ನೀಡಿದರು.
ಶಾಸಕ ರಮೇಶ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಮಾರ್ಗದರ್ಶನದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲ ಸಾಂಸ್ಕೃತಿಕ ಪ್ರಕೋಷ್ಠದಿಂದ ಜರುಗಿದ ರಸಮಂಜರಿ ಕಾರ್ಯಕ್ರಮದಲ್ಲಿ ಮಧುರ ಸಂಗೀತ ಬಳಗದ ಮಂಜುನಾಥ ಹುಡೇದ, ಜಯಶ್ರೀ ನಾಯ್ಕ ಅವರು ಭಕ್ತಿಗೀತೆ ಹಾಗೂ ತತ್ವಗೀತೆ ಮತ್ತು ಚಿತ್ರಗೀತೆಗಳನ್ನು ಹಾಡುವ ಮೂಲಕ ನೆರೆದ ಜನರನ್ನು ರಂಜಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಬಿಜೆಪಿ ಜಿಲ್ಲಾ ಸಾಂಸ್ಕೃತಿಕ ಪ್ರಕೋಷ್ಠ ಅಧ್ಯಕ್ಷ ಮಹಾಂತೇಶ ತಾಂವಶಿ, ಕಾರ್ಯಕ್ರಮ ಸಂಘಟಕ ರಾಮಚಂದ್ರ ಕಾಕಡೆ, ಬಿಜೆಪಿ ಮುಖಂಡ ಶಶಿಧರ ದೇಮಶಟ್ಟಿ, ಬಸವರಾಜ ಉಣ್ಣಿ, ಅಡಿವೆಪ್ಪ ತೋಟಗಿ, ಪವನ ಮಹಾಲಿಂಗಪೂರ ಸೇರಿದಂತೆ ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

sixteen + 7 =