Breaking News

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ

Spread the love

ಚುನಾವಣೆ ಗೆಲ್ಲಲು ಯಡಿಯೂರಪ್ಪ ಪುತ್ರನ ಮೂಲಕ ಕೊನೆ ಕ್ಷಣದಲ್ಲಿ ಬಿಗ್ ಪ್ಲಾನ್ ಮಾಡಿದ ಬಿಜೆಪಿ

ಯುವ ಭಾರತ ಸುದ್ದಿ ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಂಡಿರುವ ಬಿಜೆಪಿ ಇದೀಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸುಪುತ್ರ ವಿಜಯೇಂದ್ರ ಅವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದೆ. ಜೊತೆಗೆ ಹೆಲಿಕಾಪ್ಟರ್ ಸೌಲಭ್ಯವನ್ನು ಸಹ ನೀಡಿದೆ.
ಯಡಿಯೂರಪ್ಪ ಅವರನ್ನು ಎಷ್ಟು ಸಾಧ್ಯವೋ ಅಷ್ಟು ಪ್ರಮಾಣದಲ್ಲಿ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತದೆ. ಲಿಂಗಾಯತ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆಯಲು ನಿಟ್ಟಿನಲ್ಲಿ ಇದೀಗ ವಿಜಯೇಂದ್ರ ಅವರಿಗೂ ಜವಾಬ್ದಾರಿ ವಹಿಸಲಾಗಿದೆ.

ಈ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಲಿಂಗಾಯತ ಮತಗಳ ಪ್ರಭಾವ ಇರುವ ಕ್ಷೇತ್ರಗಳಲ್ಲಿ ವಿಜಯೇಂದ್ರ ಅವರಿಂದ ಪ್ರಚಾರ ಮಾಡಿಸಲು ಬಿಗ್ ಪ್ಲಾನ್ ಮಾಡಿದೆ. ಸುಮಾರು 20 ಕ್ಷೇತ್ರದ ಪ್ರಚಾರಕ್ಕೆ ಜವಾಬ್ದಾರಿ ನೀಡಿದೆ. ತುಮಕೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ ಮುಂತಾದಡೆ ಪ್ರಚಾರಕ್ಕೆ ತೊಡಗಿಸಿಕೊಳ್ಳುವಂತೆ ಹೈಕಮಾಂಡ್ ಸೂಚಿಸಿದೆ. ಕ್ಯಾಂಪೇನರ್ ಅಲ್ಲದೆ ಇದ್ದರೂ ಕೊನೆ ಆ ಕ್ಷಣದಲ್ಲಿ ವಿಜಯೇಂದ್ರ ಕ್ಯಾಂಪೇನ್ ಮಾಡಿದರೆ ಲಿಂಗಾಯತ ಮತದಾರರನ್ನು ಸೆಳೆಯಬಹುದು ಎಂಬ ಲೆಕ್ಕಾಚಾರ ಬಿಜೆಪಿ ವರಿಷ್ಠರದ್ದು. ಹೀಗಾಗಿ, ಇದೀಗ ವರಿಷ್ಠರು ಯಡಿಯೂರಪ್ಪ ಅವರ ಸುಪುತ್ರ ವಿಜಯೇಂದ್ರ ಅವರನ್ನು ಕಳಿಸಲು ಮುಂದಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

10 − 9 =