Breaking News

ಬಿಜೆಪಿ ಸೇವಾ ಹಿ ಸಂಘಟನ ನಿಮಿತ್ಯ ವಾರಿಯರ್ಸಗಳಿಗೆ ಮಾಸ್ಕ, ಸ್ಯಾನಿಟೈಸರ್ ವಿತರಣೆ.!

Spread the love

ಬಿಜೆಪಿ ಸೇವಾ ಹಿ ಸಂಘಟನ ನಿಮಿತ್ಯ ವಾರಿಯರ್ಸಗಳಿಗೆ ಮಾಸ್ಕ, ಸ್ಯಾನಿಟೈಸರ್ ವಿತರಣೆ.!

ಯುವ ಭಾರತ ಸುದ್ದಿ,  ಗೋಕಾಕ: ದೇಶದಲ್ಲಿ ಕಳೆದ ಏಳು ವರ್ಷಗಳಿಂದ ಸಾಕಷ್ಟು ನೋವು ನಲಿವು ಕಂಡು ದೇಶವನ್ನು ಅಭಿವೃದ್ಧಿಯ ಪಥದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿಯವರು ಯಶಸ್ವಿಯಾಗಿದ್ದಾರೆಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಹೇಳಿದರು.
ಸೋಮವಾರದಂದು ನಗರದಲ್ಲಿ ಕೇಂದ್ರದ ನರೇಂದ್ರ ಮೋದಿ ನೇತ್ರತ್ವದ ಸರಕಾರ ಏಳು ವರ್ಷಗಳನ್ನು ಪೂರೈಸಿದ ಹಿನ್ನಲೆ ಸೇವಾ ಹಿ ಸಂಘಟನ ಕಾರ್ಯಕ್ರಮದ ಅಂಗವಾಗಿ ಗೋಕಾಕ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ನಗರಸಭೆಯ ಪೌರಕಾರ್ಮಿಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಆರೋಗ್ಯ ಸಿಬ್ಬಂಧಿಗಳಿಗೆ ಮಾಸ್ಕ, ಸ್ಯಾನಿಟೈಸರ್ ಸೇರಿದಂತೆ ಕೊರೋನಾ ರಕ್ಷಣಾ ಕೀಟ್ ವಿತರಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು ದೇಶದ ಭದ್ರತೆ, ಆರ್ಥಿಕತೆ ಹಾಗೂ ದೇಶದ ಸರ್ವಾಂಗೀಣ ಅಭಿವ್ರದ್ಧಿಗಾಗಿ ದಿನದ ೧೮ ಗಂಟೆಗಳ ವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಕೊರೋನಾ ಮಾಹಾಮಾರಿಯ ವಿರುದ್ಧ ಹೋರಾಟ ಮಾಡಲು ವಾರಿಯರ್ಸಗಳ ಬೆನ್ನು ತಟ್ಟಿ ದೇಶದ ಹಿತಕ್ಕಾಗಿ ದುಡಿಯುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಶಾಸಕರ ಸಹಾಯಕ ಸುರೇಶ ಸನದಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ವಿಶಾಲ ಪಟಗುಂದಿ, ಪುನೀತ ಸೇರಿದಂತೆ ಇತರರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

18 + 1 =