Breaking News

ದೇಶದ ಅಭಿವೃದ್ಧಿಗಾಗಿ ಎಲ್ಲರೂ ಹೆಗಲಿಗೆ ಹೆಗಲು ಕೊಡಬೇಕು.- ಬಸವರಾಜ ಯಕಂಚಿ.!

Spread the love

ದೇಶದ ಅಭಿವೃದ್ಧಿಗಾಗಿ ಎಲ್ಲರೂ ಹೆಗಲಿಗೆ ಹೆಗಲು ಕೊಡಬೇಕು.- ಬಸವರಾಜ ಯಕಂಚಿ.!

 


ಯುವ ಭಾರತ ಸುದ್ದಿ  ಗೋಕಾಕ: ಭಾರತೀಯ ಜನತಾ ಪಕ್ಷವನ್ನು ಎಲ್ಲೆಡೆ ವಿಸ್ತರಿಸಲು ವಿಸ್ತಾರಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕರ್ತರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಳಗಾವಿ ವಿಭಾಗದ ಬಿಜೆಪಿ ಪಕ್ಷದ ಸಹ ಪ್ರಭಾರಿ ಬಸವರಾಜ ಯಕಂಚಿ ಹೇಳಿದರು.
ಅವರು, ಸೋಮವಾರದಂದು ನಗರದ ಸಿದ್ಧಿವಿನಾಯಕ ಸಭಾ ಭವನದಲ್ಲಿ ಜರುಗಿದ ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದ ಬಿಜೆಪಿ ವಿಸ್ತಾರಕ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ದೇಶವನ್ನು ಮುನ್ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ಮೋದಿಯವರ ಕಾರ್ಯದಲ್ಲಿ ನಾವೆಲ್ಲ ಕೈಜೋಡಿಸಬೇಕು. ದೇಶದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಮೋದಿಯವರು ಶ್ರಮಿಸುತ್ತಿದ್ದಾರೆ. ದೇಶದ ಅಭಿವೃದ್ಧಿಗಾಗಿ ಎಲ್ಲರೂ ಹೆಗಲಿಗೆ ಹೆಗಲು ಕೊಡಬೇಕು. ದೇಶದ ವಿಕಾಸಕ್ಕೆ ಪ್ರಧಾನಿಯವರು ಜಾರಿಗೆ ತಂದ ಹಲವಾರು ಮಹತ್ವಾಕಾಂಕ್ಷೆ ಯೋಜನೆಗಳು ಹಾಗೂ ಅವರ ಕಲ್ಪಣೆಗಳನ್ನು ಜನರಿಗೆ ಮನವರಿಕೆ ಮಾಡಿ ಕೋಡಬೇಕು. ಕಾರ್ಯಕರ್ತರ ಪರಿಶ್ರಮದ ಮೇಲೆ ಚುನಾವಣೆಗಳನ್ನು ಗೆಲ್ಲಬೇಕೆಂಬ ವರಿಷ್ಠರ ಅಭಿಲಾಷೆಯಿಂದ ಈ ವಿಸ್ತಾರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕರ್ತರು ಅಭಿಮಾನದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪಕ್ಷವನ್ನು ಮತ್ತಷ್ಟು ವಿಸ್ತರಿಸಲು ಕರೆ ನೀಡಿದರು.


ವೇದಿಕೆಯ ಮೇಲೆ ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಅರಭಾಂವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ, ರಾಷ್ಟಿçÃಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

11 + five =