Breaking News

ರಮೇಶ ಜಾರಕಿಹೊಳಿ ಮೇಲೆ ಯಾವುದೇ ಅನುಮಾನ ಬೇಡ: ಬಾಲಚಂದ್ರ ಸಾಹುಕಾರ್!!

Spread the love

ರಮೇಶ ಜಾರಕಿಹೊಳಿ ಮೇಲೆ ಯಾವುದೇ ಅನುಮಾನ ಬೇಡ: ಬಾಲಚಂದ್ರ ಸಾಹುಕಾರ್

ಯುವ ಭಾರತ ಸುದ್ದಿ ಬೆಳಗಾವಿ: ಮಾಧ್ಯಮಗಳಲ್ಲಿ
ರಮೇಶ ಜಾರಕಿಹೊಳಿ ಬಗ್ಗೆ ವಿವಿಧ ರೀತಿ ಸುದ್ಧಿಗಳು 
ಬರುತ್ತಿವೆ.‌ ರಮೇಶ ಜಾರಕಿಹೊಳಿ ಇಲ್ಲಿರುವವರಿಗೆ 
ಯಾವುದೇ ಅನುಮಾನ ಬೇಡ. ಬಿಜೆಪಿ ಗೆಲ್ಲಿಸುವುದು,
ಕಾಂಗ್ರೆಸ್ ಸೋಲಿಸುವುದೇ ನಮ್ಮ‌ಗುರಿ ಎಂದುಕೆಎಂಎಫ್ 
ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ 
ಬೊಮ್ಮಾಯಿ ಎದುರು ಮನದಿಂಗಿತ ವ್ಯಕ್ತಪಡಿಸಿದರು.

ಬೆಳಗಾವಿ ಸಮೀಪದ‌ ರೆಸಾರ್ಟ್ ನಲ್ಲಿ ಮಂಗಳವಾರ ನಡೆದ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಅವರು, ಎರಡು ದಿನ ಮಾತ್ರ ಬಾಕಿ ಉಳಿದಿದೆ, ನಾವೆಲ್ಲ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ.‌ ಕಳೆದ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್ ನೀಡಿ ಸ್ವಂತ ಸಹೋದರನ್ನನ್ನೇ ಸೋಲಿಸಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಇಲ್ಲಿರುವ ಯಾರೂ ರಮೇಶ ಜಾರಕಿಹೋಳಿ ಬಗ್ಗೆ ಯಾರೂ ಅನುಮಾನಪಡುವ ಅಗತ್ಯವಿಲ್ಲ ಎಂದು ರಮೇಶ ಜಾರಕಿಹೋಳಿ ಪರ ಬಾಲಚಂದ್ರ ಜಾರಕಿಹೋಳಿ ಬ್ಯಾಟಿಂಗ್ ಮಾಡಿದರು.

ನಾವೆಲ್ಲ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಪ್ರಚಾರ ಮಾಡುತ್ತಿದ್ದೇವೆ. ಬಿಜೆಪಿ ಗೆಲ್ಲಿಸಿ, ಕಾಂಗ್ರೆಸ್ ಸೋಲಿಸಿ ಎನ್ನುವುದು ನಮ್ಮ ಬಯಕೆಯಾಗಿದೆ. ಮಹಾಂತೇಶ ಕವಟಗಿಮಠ ಈ ಚುನಾವಣೆಯಲ್ಲಿ ಗೆಲುವು ಸಾಧಿಸಲ್ಲಿದ್ದಾರೆ.


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

4 × five =