Breaking News

BREAKING ಬಿಜೆಪಿ ಪಟ್ಟಿ ಬಿಡುಗಡೆ : ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ

Spread the love

BREAKING ಬಿಜೆಪಿ ಪಟ್ಟಿ ಬಿಡುಗಡೆ : ಜಗದೀಶ ಶೆಟ್ಟರ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ

ಯುವ ಭಾರತ ಸುದ್ದಿ ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ ಇಂದು, ಸೋಮವಾರ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಬಾಕಿ 12 ಕ್ಷೇತ್ರಗಳಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳ ಮೂರನೇ ಪಟ್ಟಿ
ಕ್ಷೇತ್ರ ಅಭ್ಯರ್ಥಿ

ನಾಗಠಾಣ-ಸಂಜೀವ ಐಹೊಳೆ

ಸೇಡಂ-ರಾಜಕುಮಾರ ಪಾಟೀಲ

ಕೊಪ್ಪಳ-ಮಂಜುಳಾ ಅಮರೇಶ

ರೋಣ – ಕಳಕಪ್ಪ ಬಂಡಿ

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್-ಮಹೇಶ್ ಟೆಂಗಿನಕಾಯಿ

ಹಗರಿಬೊಮ್ಮನಹಳ್ಳಿ (ಎಸ್‌ಸಿ) -ಬಿ ರಾಮಣ್ಣ

ಬೆಂಗಳೂರಿನ ಹೆಬ್ಬಾಳ-ಕಟ್ಟಾ ಜಗದೀಶ

ಬೆಂಗಳೂರಿನ ಗೋವಿಂದರಾಜನಗರ-
ಉಮೇಶ್ ಶೆಟ್ಟಿ

ಮಹದೇವಪುರ (ಎಸ್‌ಸಿ)- ಮಂಜುಳ ಅರವಿಂದ ಲಿಂಬಾವಳಿ

ಕೃಷ್ಣರಾಜನಗರ-ಶ್ರೀವತ್ಸ
ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಜತೆಗೆ ಮಾನ್ವಿ ಕ್ಷೇತ್ರದ ಟಿಕೆಟ್​ ಅನ್ನೂ ಬಾಕಿ ಇರಿಸಿಕೊಂಡಿದೆ. ಶಿವಮೊಗ್ಗ ನಗರ ಕ್ಷೇತ್ರವನ್ನು ಈವರೆಗೆ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿದ್ದರು. ಇತ್ತೀಚೆಗಷ್ಟೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದರೆ, ತಮ್ಮ ಮಗ ಕಾಂತೇಶ್​ಗೆ ಟಿಕೆಟ್ ನೀಡಬೇಕೆಂಬ ಬೇಡಿಕೆಯನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ ಎನ್ನಲಾಗಿದೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

four × 2 =