Breaking News

ಇತ್ತಿಚಿನ್ ಸುದ್ದಿ

ಯಡಿಯೂರಪ್ಪ, ವಿಜಯೇಂದ್ರ, ಜೋಶಿ ಅವರನ್ನು ಭೇಟಿಯಾದ ಡಾ. ರಾಜು ಕಿರಣಗಿ !

ಯಡಿಯೂರಪ್ಪ, ವಿಜಯೇಂದ್ರ, ಜೋಶಿ ಅವರನ್ನು ಭೇಟಿಯಾದ ಡಾ. ರಾಜು ಕಿರಣಗಿ ! ಬೆಂಗಳೂರು : ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಭಾರತೀಯ ಜನತಾ ಪಕ್ಷ (ಬಿಜೆಪಿ)ಯಿಂದ ಕಣಕ್ಕಿಳಿಯಲು ಬಯಸಿರುವ ಯುವ ನಾಯಕ ಡಾ. ರಾಜು ಕಿರಣಗಿ ಅವರು ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿಯ ಘಟಾನುಘಟಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಸುಪುತ್ರ ಬಿಜೆಪಿ ರಾಜ್ಯ …

Read More »

ರುದ್ರಣ್ಣ ಚಂದರಗಿ ಕ್ರಿಕೆಟ್ ಪಂದ್ಯಾವಳಿ ಯಶಸ್ವಿ

ರುದ್ರಣ್ಣ ಚಂದರಗಿ ಕ್ರಿಕೆಟ್ ಪಂದ್ಯಾವಳಿ ಯಶಸ್ವಿ ಯುವ ಭಾರತ ಸುದ್ದಿ ಸವದತ್ತಿ : ರುದ್ರಣ್ಣ ಚಂದರಗಿ ಕ್ರಿಕೆಟ್ ಟ್ರೋಫಿ ಹಾಗೂ ಬಸವೇಶ್ವರ ಕ್ರಿಕೆಟ್ ಕ್ಲಬ್ ವತಿಯಿಂದ ಸವದತ್ತಿ ತಾಲೂಕಿನ ಇಟ್ನಾಳ ಗ್ರಾಮದಲ್ಲಿ ರುದ್ರಣ್ಣ ಚಂದರಗಿ ಕ್ರಿಕೆಟ್ ಟ್ರೋಫಿ ಯಶಸ್ವಿಯಾಗಿ ಸಂಪನ್ನಗೊಂಡಿತು. ಪಂದ್ಯಾವಳಿಯಲ್ಲಿ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ 40 ಹಳ್ಳಿಗಳ 40 ತಂಡಗಳು ಭಾಗವಹಿಸಿದ್ದವು. ಮೊದಲ ಮೂರು ಸ್ಥಾನ ಪಡೆದ ತಂಡಗಳಿಗೆ ಬಿಜೆಪಿ ನಾಯಕ ರುದ್ರಣ್ಣ ಚಂದರಗಿ ಅವರು ಪ್ರಶಸ್ತಿ ವಿತರಣೆ …

Read More »

ರಮೇಶ ಜಾರಕಿಹೊಳಿ ಬೆಂಬಲಕ್ಕೆ ಲಿಂಗಾಯತ ಸಮಾಜ

ರಮೇಶ ಜಾರಕಿಹೊಳಿ ಬೆಂಬಲಕ್ಕೆ ಲಿಂಗಾಯತ ಸಮಾಜ ಯುವ ಭಾರತ ಸುದ್ದಿ ಗೋಕಾಕ : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಲು ಇಲ್ಲಿನ ವೀರಶೈವ ಲಿಂಗಾಯತ ಸಮಾಜ ನಿರ್ಧರಿಸಿದೆ. ಶುಕ್ರವಾರ ಗೋಕಾಕನಲ್ಲಿ ನಡೆದ ವೀರಶೈವ ಲಿಂಗಾಯತ ಸಮಾಜದ ಸಭೆಯಲ್ಲಿ ಮಾತನಾಡಿದ ಲಿಂಗಾಯತ ಸಮಾಜದ ಮುಖಂಡರು ಈ ನಿರ್ಧಾರ ಪ್ರಕಟಿಸಿದ್ದಾರೆ. ಲಿಂಗಾಯತ ಸಮಾಜದ ಮುಖಂಡ ಹಾಗೂ ಘಟಪ್ರಭಾ ಶುಗರ್ಸ್ ಅಧ್ಯಕ್ಷ ಅಶೋಕ ಪಾಟೀಲ ಮಾತನಾಡಿ, ಕಳೆದ 40 …

Read More »

BIG BREAKING ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ !

BIG BREAKING ಕಾಂಗ್ರೆಸ್ ಪಕ್ಷದ ಟಿಕೆಟ್ ಘೋಷಣೆ ! ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರುಣಾದಲ್ಲಿ ಸ್ಪರ್ಧೆಗೆ ಅವಕಾಶ ಮಾಡಿಕೊಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಹಲವರಿಗೆ ಟಿಕೆಟ್ : ಚಿಕ್ಕೋಡಿ-ಗಣೇಶ ಹುಕ್ಕೇರಿ, ಕಾಗವಾಡ-ರಾಜು ಕಾಗೆ, ಕುಡಚಿ-ಮಹೇಂದ್ರ ತಮ್ಮಣ್ಣವರ, ಹುಕ್ಕೇರಿ-ಎ.ಬಿ. ಪಾಟೀಲ, ಯಮಕನಮರಡಿ-ಸತೀಶ ಜಾರಕಿಹೊಳಿ, ಬೆಳಗಾವಿ ಗ್ರಾಮೀಣ-ಲಕ್ಷ್ಮೀ ಹೆಬ್ಬಾಳಕರ್, ಖಾನಾಪುರ-ಡಾ. ಅಂಜಲಿ ನಿಂಬಾಳ್ಕರ್, …

Read More »

ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಯುವ ಭಾರತ ಸುದ್ದಿ ಬೆಂಗಳೂರು : ಎಲ್ಲ ವರ್ಗಗಳಲ್ಲಿಯೂ ಹಿಂದುಳಿದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಅವರು, ಈ ಸಮಾಜವು ಆರ್ಥಿಕ ವಾಗಿ …

Read More »

1.49 ಕೋಟಿ ನಗದು, ಮದ್ಯ ವಶ : ಡಿಸಿ ನಿತೇಶ ಪಾಟೀಲ

1.49 ಕೋಟಿ ನಗದು, ಮದ್ಯ ವಶ : ಡಿಸಿ ನಿತೇಶ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಗಡಿಭಾಗದಲ್ಲಿ ಸದ್ಯಕ್ಜೆ 24 ಅಂತರರಾಜ್ಯ ಗಡಿ ಚೆಕ್ ಪೋಸ್ಟ್ ಆರಂಭಿಸಲಾಗಿದೆ. ಗೋವಾ ಗಡಿಭಾಗದಲ್ಲಿ 4 ಮತ್ತು ಮಹಾರಾಷ್ಟ್ರ ಗಡಿಭಾಗದಲ್ಲಿ 20 ಚೆಕ್ ಪೋಸ್ಟ್ ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ನಲ್ಲಿ ನಗದು, ಮದ್ಯ ಸೇರಿದಂತೆ ಒಟ್ಟಾರೆ 1.49 ಕೋಟಿ …

Read More »

ಬೆಳಗಾವಿಯ ದೇಶಪಾಂಡೆಯವರಿಗೆ ಒಲಿದ ಕುಲಪತಿ ಹುದ್ದೆ

ಬೆಳಗಾವಿಯ ದೇಶಪಾಂಡೆಯವರಿಗೆ ಒಲಿದ ಕುಲಪತಿ ಹುದ್ದೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಕೆಲಸ ಮಾಡಿದ್ದ ಹಾಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಆನಂದ ಶರದ ದೇಶಪಾಂಡೆ ಅವರನ್ನು ರಾಜ್ಯ ಸರ್ಕಾರ ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಕೆಲ ತಿಂಗಳುಗಳ ಹಿಂದೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಹೊಸ ಕುಲಪತಿ ನೇಮಕ ವೇಳೆ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು. …

Read More »

ಸಿದ್ದರಾಮಯ್ಯ ಸ್ಪರ್ಧೆಗೆ ಹೊಸ ಕ್ಷೇತ್ರದ ಹೆಸರು ಸೇರ್ಪಡೆ

ಸಿದ್ದರಾಮಯ್ಯ ಸ್ಪರ್ಧೆಗೆ ಹೊಸ ಕ್ಷೇತ್ರದ ಹೆಸರು ಸೇರ್ಪಡೆ   ಯುವ ಭಾರತ ಸುದ್ದಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭಾ ಚುನಾವಣೆ ಸ್ಪರ್ಧೆ ಭಾರಿ ಕುತೂಹಲ ಕೆರಳಿಸಿದೆ. ಅವರು ಮತ್ತೊಮ್ಮೆ ಉತ್ತರ ಕರ್ನಾಟಕದಿಂದ ಸ್ಪರ್ಧೆ ನಡೆಸುತ್ತಾರೆ ಎಂಬ ಹೊಸ ಚರ್ಚೆ ಇದೀಗ ಆರಂಭವಾಗಿದೆ. ಅದರಲ್ಲೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ಮತಕ್ಷೇತ್ರದಿಂದ ಅವರು ಈ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆ ಎಂಬ ವದಂತಿ ಹರಡಿದೆ. ಕುಷ್ಟಗಿ ವಿಧಾನಸಭಾ ಮತಕ್ಷೇತ್ರದ …

Read More »