Breaking News

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚಟುವಟಿಕೆ !

ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಚಟುವಟಿಕೆ ! ಬೆಂಗಳೂರು: ನೂತನವಾಗಿ ಆಯ್ಕೆಯಾದ ಕಾಂಗ್ರೆಸ್‌ ಶಾಸಕರ (ಸಿಎಲ್‌ಪಿ) ಸಭೆ ಇಂದು ಸಂಜೆ 6 ಗಂಟೆಗೆ ವಸಂತನಗರದಲ್ಲಿರುವ ಶಾಂಗ್ರಿ–ಲಾ ಹೋಟೆಲ್‌ನಲ್ಲಿ ನಡೆಯಲಿದೆ. ಮಧ್ಯಾಹ್ನ 1.30ರ ವಿಮಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಗೆ ತೆರಳಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿರುವ ಬೆನ್ನಲ್ಲೆ ಅವರು, ದೆಹಲಿಗೆ ತೆರಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ. ಸಿಎಲ್‌ಪಿ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಸಭಾ ಸದಸ್ಯರು, ವಿಧಾನ ಪರಿಷತ್‌ ಸದಸ್ಯರು ಮತ್ತು …

Read More »

ಚುನಾವಣೆಯಲ್ಲಿ ಶೇಕಡಾವಾರು ಮತ ಪಡೆದ ಪಕ್ಷಗಳು

  ಬೆಂಗಳೂರು: ಕಾಂಗ್ರೆಸ್‌ ಪಕ್ಷ ಈ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಶೇಕಡಾ 4 ಕ್ಕಿಂತಲೂ ಹೆಚ್ಚು ಮತ ಪಡೆಯುವಲ್ಲಿ ಯಶಸ್ವಿಯಾಗಿದೆ. ಶನಿವಾರ ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 66, ಜೆಡಿಎಸ್‌ 19 ಮತ್ತು ಇತರರು 4 ಸ್ಥಾನಗಳಲ್ಲಿ ಗೆದ್ದಿದ್ದಾರೆ.   ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಕಾಂಗ್ರೆಸ್‌ನ ಮತ ಗಳಿಕೆ ಕಳೆದ ಬಾರಿಗಿಂತಲೂ ಈ ಬಾರಿ ಶೇಕಡಾ 4ಕ್ಕಿಂತಲೂ ಹೆಚ್ಚು ಜಿಗಿದಿದ್ದರೆ, ಜೆಡಿ (ಎಸ್)ನ …

Read More »

ಸಿಬಿಐ ನಿರ್ದೇಶಕರ ಹೆಸರಿನ ಪಟ್ಟಿಯಲ್ಲಿ ಪ್ರವೀಣ ಸೂದ್ ಹೆಸರು

ಸಿಬಿಐ ನಿರ್ದೇಶಕರ ಹೆಸರಿನ ಪಟ್ಟಿಯಲ್ಲಿ ಪ್ರವೀಣ ಸೂದ್ ಹೆಸರು ಬೆಂಗಳೂರು: ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರ ಆಯ್ಕೆಗೆ ‌ಪ್ರಕ್ರಿಯೆ ಆರಂಭವಾಗಿದೆ. ಮೂವರು ಅರ್ಹ ಐಪಿಎಸ್ ಅಧಿಕಾರಿಗಳ ಪಟ್ಟಿಯನ್ನು ವಿಶೇಷ ಸಮಿತಿ ಸಿದ್ಧಪಡಿಸಿ ಸಚಿವ‌ ಸಂಪುಟಕ್ಕೆ ಶಿಫಾರಸು ‌ಮಾಡಿದೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್, ಮಧ್ಯಪ್ರದೇಶದ ಡಿಜಿ-ಐಜಿಪಿ ಸುಧೀರ್‌ಕುಮಾರ್ ಸಕ್ಸೆನಾ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಡಿ.ಜಿ ತಾಜ್ ಹಸನ್ ಅವರ ಹೆಸರು …

Read More »

ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು ಯಾರು ?

ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು ಯಾರು ? ಬೆಂಗಳೂರು : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅಂತರದಲ್ಲಿ ಸೋಲು ಕಂಡವರ ಸಂಖ್ಯೆ ಸಾಕಷ್ಟಿದೆ. ಬೆಂಗಳೂರಿನ ಜಯನಗರದಲ್ಲಿ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ವಿರುದ್ಧ ಕೇವಲ 16 ಮತಗಳ ಅಂತರದಿಂದ ಸೋತಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಕೊನೆಯವರೆಗೂ ನಡೆದ ಹಾವು ಏಣಿ ಆಟದಲ್ಲಿ ವಿಜಯದ ಅದೃಷ್ಟ ಲಕ್ಷ್ಮಿಯು ಅಂತಿಮವಾಗಿ ಒಬ್ಬರಿಗೆ ಒಲಿದಿದ್ದಾಳೆ. ಕಡಿಮೆ ಅಂತರದಲ್ಲಿ ಗೆಲುವು …

Read More »

ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು !

ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು ! ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗೊಂದಲಕ್ಕೆ ಚುನಾವಣಾಧಿಕಾರಿಗಳು ಶನಿವಾರ ಮಧ್ಯರಾತ್ರಿ ತೆರೆ ಎಳೆದಿದ್ದು, ಬಿಜೆಪಿಯ ಸಿ.ಕೆ.ರಾಮಮೂರ್ತಿ ಅವರು ವಿಜಯಿ ಎಂದು ಘೋಷಣೆ ಮಾಡಿದ್ದಾರೆ. ಇದರಿಂದ ಬೇಸರಗೊಂಡ ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರು ಕಣ್ಣೀರು ಹಾಕಿದ್ದಾರೆ. ಮತ ಎಣಿಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು, ಮುಖಂಡರು ಎಸ್‌ಎಸ್‌ಎಂಆರ್‌ವಿ ಕಾಲೇಜಿನ ಮತ ಎಣಿಕೆ …

Read More »

ಸಿದ್ದರಾಮಯ್ಯ,ಡಿಕೆಶಿ ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ

ಸಿದ್ದರಾಮಯ್ಯ,ಡಿಕೆಶಿ ನಿವಾಸದ ಮುಂದೆ ಬೆಂಬಲಿಗರಿಂದ ಮುಂದಿನ ಮುಖ್ಯಮಂತ್ರಿ ಫ್ಲೆಕ್ಸ್ ಅಳವಡಿಕೆ ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಹುದ್ದೆಗಾಗಿ ಪೈಪೋಟಿ ಆರಂಭವಾಗಿದೆ. ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಿಗರಲ್ಲಿ ಚರ್ಚೆ ಜೋರಾಗಿ ಶುರುವಾಗಿದೆ. ಅವರವರ ಬೆಂಬಲಿಗರು ತಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂದು ಫ್ಲೆಕ್ಸ್‌ ಅಳವಡಿಸಿದ್ದಾರೆ. ಸಿದ್ದರಾಮಯ್ಯ ಅಭಿಮಾನಿಗಳು ಬೆಂಗಳೂರಿನ ಅವರ ನಿವಾಸದ …

Read More »

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೊಮ್ಮಾಯಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೊಮ್ಮಾಯಿ ಯುವ ಭಾರತ ಸುದ್ದಿ ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Read More »

ನಿಜವಾಯ್ತು ಕೋಡಿಮಠದ ಶ್ರೀಗಳ ಭವಿಷ್ಯ..!

ನಿಜವಾಯ್ತು ಕೋಡಿಮಠದ ಶ್ರೀಗಳ ಭವಿಷ್ಯ..! ಯುವ ಭಾರತ ಸುದ್ದಿ ಅಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್​ಗೆ ಬಹುಮತ ಸಿಕ್ಕಿದೆ. ಚುನಾವಣಾ ಆಯೋಗದ ಇತ್ತೀಚಿನ ಮಾಹಿತಿ ಪ್ರಕಾರ, ಕಾಂಗ್ರೆಸ್ 113 ಸ್ಥಾನಗಳನ್ನು ಗೆದ್ದಿದೆ ಮತ್ತು 22 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿಯ ಚುನಾವಣೆ ಫಲಿತಾಂಶದ ಬಗ್ಗೆ ಕೋಡಿಮಠದ ಶ್ರೀಗಳು ಹೇಳಿದ ಭವಿಷ್ಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಯಾಕೆಂದರೆ ಈ ಬಾರಿ ಒಂದೇ ಪಕ್ಷ ಅಧಿಕಾರಕ್ಕೆ …

Read More »

ಕಾಂಗ್ರೆಸ್ಸಿಗೆ ಸಿಎಂ ಆಯ್ಕೆ ದೊಡ್ಡ ಸವಾಲು..!

ಕಾಂಗ್ರೆಸ್ಸಿಗೆ ಸಿಎಂ ಆಯ್ಕೆ ದೊಡ್ಡ ಸವಾಲು..! ಯುವ ಭಾರತ ಸುದ್ದಿ ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಕ್ಷಿಣ ಭಾರತದ ತನ್ನ ಏಕೈಕ ಭದ್ರಕೋಟೆ ಕರ್ನಾಟಕವನ್ನು ಕಳೆದುಕೊಂಡಿದ್ದು, ರಾಜ್ಯದ 223 ಸ್ಥಾನಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 65 ಮತ್ತು ಎಚ್‌ಡಿ ಕುಮಾರಸ್ವಾಮಿ ಅವರ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದೆ.30 ವರ್ಷಗಳ ನಂತರ ಸ್ಥಾನಗಳು ಮತ್ತು ಮತಗಳ ಹಂಚಿಕೆಯಲ್ಲಿ ಕಾಂಗ್ರೆಸ್‌ ದಾಖಲೆ ಮಾಡಿದೆ. ಕರ್ನಾಟಕದ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧವಾಗಿರುವ …

Read More »

ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ

ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ ಗಡಾದ ಅವರನ್ನು 74 ಸಾವಿರಕ್ಕೂ ಅಧಿಕ ಮತಗಳಿಂದ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ರಾಜ್ಯದಲ್ಲಿಯೇ ಆಡಳಿತಾರೂಢ ಬಿಜೆಪಿಯಿಂದ ಅತೀ ಹೆಚ್ಚಿನ ಮತಗಳ ಅಂತರದಿಂದ ಆಯ್ಕೆ ಯಾದ ಹೆಗ್ಗಳಿಕೆಗೆ ಪಾತ್ರರಾದ ಬಾಲಚಂದ್ರ ಜಾರಕಿಹೊಳಿ ಗೋಕಾಕ್ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ …

Read More »