Breaking News

ಇತ್ತೀಚಿನ ಸುದ್ದಿ

ಎರಡನೇ ದಿನವೂ ಬೆಳಗಾವಿಯಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್ ಶೋ !

ಎರಡನೇ ದಿನವೂ ಬೆಳಗಾವಿಯಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್ ಶೋ ! ಯುವ ಭಾರತ ಸುದ್ದಿ ಬೆಳಗಾವಿ : ಕೇಂದ್ರ ಗ್ರಹ ಸಚಿವ ಅಮಿತ್ ಶಾ ಭಾನುವಾರ ಬೆಳಗಾವಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಪರವಾಗಿ ದಕ್ಷಿಣ ಮತಕ್ಷೇತ್ರದ ವಿವಿಧ ಬೀದಿಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿ ಗಮನ ಸೆಳೆದರು. ಶನಿವಾರ ಬೆಳಗಾವಿ …

Read More »

ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿ

ಮತದಾನ ಜಾಗೃತಿ ಕಾರ್ಯಕ್ರಮ ಯಶಸ್ವಿ ಯುವ ಭಾರತ ಸುದ್ದಿ ಇಟಗಿ : ಪಾರವಾಡ ಗ್ರಾಮದಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಮತದಾನದ ಜಾಗೃತಿ ಮೂಡಿಸಲಾಯಿತು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಕಾರಿ ವಿರೇಶ ಸಜ್ಜನ ಮಾತನಾಡಿ, ಯಾವುದೇ ಆಮಿಷಗಳಿಗೆ ಒಳಗಾಗದೇ, ಎಲ್ಲರೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಿ. ಉತ್ತಮ ಜನಪ್ರತಿಗಳನ್ನು ಆರಿಸಿ ತರುವುದು ನಿಮ್ಮ ಕೈಯಲ್ಲಿದೆ ಎಂದರು. ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಮಿಥುನ್ ಸಾಂಬಳೆ, ಹರೀಶ ಗಾವಡೆ ಹಾಗೂ …

Read More »

ನಾಳೆ ಸಂಜೆ ಬಹಿರಂಗ ಪ್ರಚಾರ ಅಂತ್ಯ

ನಾಳೆ ಸಂಜೆ ಬಹಿರಂಗ ಪ್ರಚಾರ ಅಂತ್ಯ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೂರು ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ, ಮೇ 13 ರಂದು ಮತ ಎಣಿಕೆ ನಡೆಯಲಿದೆ. ನಾಳೆ ಸಂಜೆ 6 ಗಂಟೆಗೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಲಿದೆ.

Read More »

ಮೇದಕ್ ನಿಂದ ಪ್ರಿಯಾಂಕಾ ಸ್ಪರ್ಧೆ ?

ಮೇದಕ್ ನಿಂದ ಪ್ರಿಯಾಂಕಾ ಸ್ಪರ್ಧೆ ? ಹೈದರಾಬಾದ್: ತೆಲಂಗಾಣ ರಾಜಕೀಯ ಮತ್ತು ಕಾಂಗ್ರೆಸ್‌ನ ಆಂತರಿಕ ಚಲನವಲನದಲ್ಲಿ ಸಂಭಾವ್ಯ ಬದಲಾವಣೆಯಾಗಬಹುದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಮೆದಕ್ ಅಥವಾ ಮಹೆಬೂಬ್‌ನಗರ ಲೋಕಸಭೆಯಿಂದ ಕಣಕ್ಕಿಳಿಸುವ ಆಲೋಚನೆಯನ್ನು ಪಕ್ಷದ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿದುಬಂದಿದೆ. ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರ ಗಮನ ಸೆಳೆಯುವ ಸಾಧ್ಯತೆ ಇದೆ. ಇಂದಿರಾ ಅವರ ಹೆಜ್ಜೆಗಳು ಪಕ್ಷವು ತನ್ನ ಉಮೇದುವಾರಿಕೆಯನ್ನು ಅಂತಿಮಗೊಳಿಸಿದರೆ, ಪ್ರಿಯಾಂಕಾ …

Read More »

ಗೋಕಾಕ ಮತ ಕ್ಷೇತ್ರದಲ್ಲಿ ಧೂಳೆಬ್ಬಿಸಿದ ಚಾಣಕ್ಯ!!

ಗೋಕಾಕ ಮತ ಕ್ಷೇತ್ರದಲ್ಲಿ ಧೂಳೆಬ್ಬಿಸಿದ ಚಾಣಕ್ಯ!! ಯುವ ಭಾರತ ಸುದ್ದಿ ಘಟಪ್ರಭಾ: ಗೋಕಾಕ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಪ್ರಚಾರಾರ್ಥ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರು ಮನೆ ಮನೆಗೆ ತೆರಳಿ ಬಿಜೆಪಿ ಸಾವಿರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಅಬ್ಬರದ ಪ್ರಚಾರ ನಡೆಸಿದರು. ಪಟ್ಟಣದಲ್ಲಿ ಶನಿವಾರ ರಸ್ತೆವುದ್ದಕೂ ಬಿಜೆಪಿ ಜಯ ಘೋಷದೊಂದಿಗೆ ದಿ.10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಮೇಶ ಜಾರಕಿಹೋಳಿಯವರಿಗೆ ಮತ ನೀಡಿ …

Read More »

ಬೆಳಗಾವಿಯಲ್ಲಿ ಶಾ ಅಬ್ಬರ !

ಬೆಳಗಾವಿಯಲ್ಲಿ ಶಾ ಅಬ್ಬರ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೃಹತ್ ರೋಡ್ ಶೋ ನಡೆಸಿದರು. ಶನಿವಾರ ಸಂಜೆ ನಗರದ ಪ್ರಮುಖ ಬೀದಿಗಳಾದ ಧರ್ಮವೀರ ಸಂಭಾಜಿ ಚೌಕ, ಕಿರ್ಲೋಸ್ಕರ್ ರಸ್ತೆ, ಮಾರುತಿ ಗಲ್ಲಿಗಳಲ್ಲಿ ಬೆಳಗಾವಿ ಉತ್ತರ ಅಭ್ಯರ್ಥಿ ಬೆಳಗಾವಿ ಉತ್ತರ ಬಿಜೆಪಿ ಅಭ್ಯರ್ಥಿ ಡಾ.ರವಿ ಪಾಟೀಲ ಅವರ ಪರವಾಗಿ ರೋಡ್ ಶೋ ನಡೆಸಿದರು. ಬಿಜೆಪಿಯ ಚಾಣಕ್ಯ ಹಾಗೂ ರಣತಂತ್ರಗಾರ ಎಂದೇ …

Read More »

ಅಬ್ಬರಿಸಿದ ಚಾಣಕ್ಯ : ಬಿಜೆಪಿಗೆ ಮೋಸ ಮಾಡಿದ ಸವದಿಯನ್ನು ಸೋಲಿಸಲು ಅಮಿತ್ ಶಾ ಕರೆ

ಅಬ್ಬರಿಸಿದ ಚಾಣಕ್ಯ : ಬಿಜೆಪಿಗೆ ಮೋಸ ಮಾಡಿದ ಸವದಿಯನ್ನು ಸೋಲಿಸಲು ಅಮಿತ್ ಶಾ ಕರೆ ಅಥಣಿ : ಬಿಜೆಪಿಗೆ ಮೋಸ ಮಾಡಿದ ಲಕ್ಷ್ಮಣ ಸವದಿ ಅವರನ್ನು ಈ ಸಲದ ಚುನಾವಣೆಯಲ್ಲಿ ಸೋಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರ ನೀಡಿದರು. ಇಲ್ಲಿಯ ಭೋಜರಾಜ ಕ್ರೀಡಾಂಗಣದಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಮಹೇಶ ಕುಮಟಳ್ಳಿ ಪರ ಚುನಾವಣಾ ಪ್ರಚಾರ ನಡೆಸಿ ಅವರು ಮಾತನಾಡಿದರು. ಕರ್ನಾಟಕ ಚುನಾವಣೆಯೇ ಬೇರೆ. ಅಥಣಿ ಚುನಾವಣೆಯೇ ಬೇರೆ. …

Read More »

ಕೇರಳ ಸ್ಟೋರಿ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ ಮಧ್ಯಪ್ರದೇಶ ಸಿಎಂ

ಕೇರಳ ಸ್ಟೋರಿ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ ಮಧ್ಯಪ್ರದೇಶ ಸಿಎಂ ಯುವ ಭಾರತ ಸುದ್ದಿ ಭೋಪಾಲ್: ದಿ ಕೇರಳ ಸ್ಟೋರಿ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಶನಿವಾರ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ‘ಸಿನಿಮಾವು ಭಯೋತ್ಪಾದಕರ ಮುಖವಾಡವನ್ನು ಕಳಚಿಹಾಕಿದೆ’ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಚೌಹಾಣ್ ಈ ನಿರ್ಧಾರ ಪ್ರಕಟಿಸಿದ್ದಾರೆ. ‘ರಾಜ್ಯದಲ್ಲಿ …

Read More »

ಮೋದಿ ಮೆಗಾ ರೋಡ್‌ ಶೋಗೆ ಜನ ಸಾಗರ ; ರಸ್ತೆ ಬದಿಗಳಲ್ಲಿ ಜನವೋ ಜನ !

ಮೋದಿ ಮೆಗಾ ರೋಡ್‌ ಶೋಗೆ ಜನ ಸಾಗರ ; ರಸ್ತೆ ಬದಿಗಳಲ್ಲಿ ಜನವೋ ಜನ ! ಬೆಂಗಳೂರು : ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಆರಂಭವಾಗಿದ್ದು, ಸಂಸದರಾದ ತೇಜಸ್ವಿ ಸೂರ್ಯ ಮತ್ತು ಪಿ.ಸಿ. ಮೋಹನ ಅವರು ಸಾಥ್ ನೀಡಿದ್ದಾರೆ. ಸೋಮೇಶ್ವರ ಸಭಾಭವನದಿಂದ ರೋಡ್ ಶೋ ಆರಂಭವಾಗಿದ್ದು 26 ಕಿಮೀ ವರೆಗೆ ನಡೆಯಲಿದೆ. ಪ್ರಧಾನಿ ಮೋದಿ ರೋಡ್ ಶೋ ಮಾರ್ಗದಲ್ಲಿ ಜನ ಕಿಕ್ಕಿರಿದು ಸೇರಿದ್ದು, ರಸ್ತೆಯುದ್ದಕ್ಕೂ ಪೊಲೀಸ್ …

Read More »

ಬೆಳಗಾವಿಯಲ್ಲಿಂದು ಚಾಣಕ್ಯ ಹವಾ !

ಬೆಳಗಾವಿಯಲ್ಲಿಂದು ಚಾಣಕ್ಯ ಹವಾ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಬೃಹತ್ ಚುನಾವಣಾ ಪ್ರಚಾರ ನಡೆಸಿಕೊಡಲಿದ್ದಾರೆ. ಬೆಳಗಾವಿ ನಗರದಲ್ಲಿ ಸಂಜೆ 6 ಗಂಟೆಗೆ ಸಮಾದೇವಿ ಮಂದಿರ, ಖಡೇ ಬಜಾರ, ಗಣಪತಿ ಗಲ್ಲಿ, ಮಾರುತಿ ಗಲ್ಲಿ, ಕಿರ್ಲೋಸ್ಕರ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಸಿಕೊಡಲಿದ್ದಾರೆ. ಇಂದು ಬೆಳಗ್ಗೆ 11:30 ಕ್ಕೆ ಸವದತ್ತಿ, 1:30 ಕ್ಕೆ ಅಥಣಿ, …

Read More »