Breaking News

ಇತ್ತೀಚಿನ ಸುದ್ದಿ

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕ

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ದೈವ ನರ್ತಕ ಯುವ ಭಾರತ ಸುದ್ದಿ ಮಂಗಳೂರು : ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಮೃತಪಟ್ಟ ಘಟನೆ ಗುರುವಾರ ಕಡಬ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕಿನ ಎಡಮಂಗಲ ಸಮೀಪದ ಇಡ್ಯಡ್ಕ ಎಂಬಲ್ಲಿ ನಡೆದಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ …

Read More »

ಜಾರಿಯಾಯ್ತು ನೀತಿ ಸಂಹಿತೆ : ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿ ಸುಳ್ಳು ಸುದ್ದಿ ಹಾಕಿದರೆ ಅಡ್ಮಿನ್‌ ಹೊಣೆ !

ಜಾರಿಯಾಯ್ತು ನೀತಿ ಸಂಹಿತೆ : ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿ ಸುಳ್ಳು ಸುದ್ದಿ ಹಾಕಿದರೆ ಅಡ್ಮಿನ್‌ ಹೊಣೆ ! ಯುವ ಭಾರತ ಸುದ್ದಿ ಹೊಸಪೇಟೆ : ಜಿಲ್ಲೆಯಾದ್ಯಂತ ಬುಧವಾರದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಅದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುವುದು. ಸಾಮಾಜಿಕ ಜಾಲತಾಣಗಳ ಮೇಲೆಯೂ ವಿಶೇಷ ನಿಗಾ ವಹಿಸಲಾಗುವುದು. ವಾಟ್ಸ್ಯಾಪ್‌ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿಸಿ ಸುಳ್ಳು ಸುದ್ದಿ ಹಾಕಿದರೆ ಅದಕ್ಕೆ ಅದರ ಅಡ್ಮಿನ್‌ ರನ್ನು ಹೊಣೆಗಾರರಾಗಿಸಿ …

Read More »

ಜಾಲತಾಣಗಳು ಕಾಲೇಜಿನ ಅಭಿವೃದ್ಧಿಗೆ ಪೂರಕವಾಗಿವೆ : ಕುಲಪತಿ ಪ್ರೊ. ರಾಮಚಂದ್ರ ಗೌಡ

ಜಾಲತಾಣಗಳು ಕಾಲೇಜಿನ ಅಭಿವೃದ್ಧಿಗೆ ಪೂರಕವಾಗಿವೆ : ಕುಲಪತಿ ಪ್ರೊ. ರಾಮಚಂದ್ರ ಗೌಡ ಯುವ ಭಾರತ ಸುದ್ದಿ ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಜಾಲತಾಣ(ವೆಬ್ಸೈಟ್) ಬಿಡುಗಡೆ ಹಮ್ಮಿಕೊಳ್ಳಲಾಗಿತ್ತು. ರಾಚವಿ ಕುಲಪತಿ ಪ್ರೊ. ರಾಮಚಂದ್ರ ಗೌಡ ಅವರು ಮಹಾವಿದ್ಯಾಲಯದ ಜಾಲತಾಣವನ್ನು ಬಿಡುಗಡೆ ಮಾಡಿ ಮಾತನಾಡಿ, ವಿದ್ಯಾರ್ಥಿಗಳ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಮಹಾವಿದ್ಯಾಲಯಕ್ಕೆ ಜಾಲತಾಣದ ಅವಶ್ಯಕತೆ ತುರ್ತಾಗಿತ್ತು. ಅದು ಈಗ …

Read More »

ಬೆಳಗಾವಿ ಜಿಲ್ಲೆಯಲ್ಲಿ ಕೊನೆಗೂ ಜಾರಿಯಾಯ್ತು ನೀತಿ ಸಂಹಿತೆ !

ಬೆಳಗಾವಿ ಜಿಲ್ಲೆಯಲ್ಲಿ ಕೊನೆಗೂ ಜಾರಿಯಾಯ್ತು ನೀತಿ ಸಂಹಿತೆ ! ಯುವ ಭಾರತ ಸುದ್ದಿ ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಚುನಾವಣಾ ದಿನಾಂಕ ನಿಗದಿಯಾಗಿದ್ದು, ಮೆ.10 ಮತದಾನ ಹಾಗೂ ಮೆ.13 ರಂದು ಮತ ಎಣಿಕೆ ನಡೆಯಲಿವೆ ಹಾಗಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.29) ನಡೆದ ಕರ್ನಾಟಕ ವಿಧಾನಸಭಾ ಚುನಾವಣೆ-2023ರ …

Read More »

ಕಪರಟ್ಟಿಯಲ್ಲಿ ಫಲಾನುಭವಿಗಳಿಗೆ ಕಂದಾಯ ಗ್ರಾಮ ನಿವೇಶನ ಮಂಜೂರಾತಿ ಪ್ರಮಾಣ ಪತ್ರ ವಿತರಿಸಿದ ಬಾಲಚಂದ್ರ ಜಾರಕಿಹೊಳಿ

ಕಪರಟ್ಟಿಯಲ್ಲಿ ಫಲಾನುಭವಿಗಳಿಗೆ ಕಂದಾಯ ಗ್ರಾಮ ನಿವೇಶನ ಮಂಜೂರಾತಿ ಪ್ರಮಾಣ ಪತ್ರ ವಿತರಿಸಿದ ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಗೋಕಾಕ : ಮಜರೆ ಗ್ರಾಮದಿಂದ ಕಂದಾಯ ಗ್ರಾಮಗಳಾಗಿ ಮಾರ್ಪಟ್ಟಿರುವ ಗ್ರಾಮಗಳಿಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹಕ್ಕುಪತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ತಳಕಟ್ನಾಳ, ಸುಣಧೋಳಿ, ತಪಸಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿರುವ ಕಪರಟ್ಟಿ, ಖಂಡ್ರಟ್ಟಿ, ನಿಂಗಾಪೂರ ಮತ್ತು ಹೊನಕುಪ್ಪಿ ಗ್ರಾಮಗಳ ಫಲಾನುಭವಿಗಳಿಗೆ ಕಂದಾಯ ಗ್ರಾಮಗಳ …

Read More »

ಚುನಾವಣೆ ಹಿನ್ನೆಲೆಯಲ್ಲಿ ಚುರುಕುಗೊಂಡ ಕಾರ್ಯಾಚರಣೆ : ಅಪಾರ ಹಣ ವಶ

ಚುನಾವಣೆ ಹಿನ್ನೆಲೆಯಲ್ಲಿ ಚುರುಕುಗೊಂಡ ಕಾರ್ಯಾಚರಣೆ : ಅಪಾರ ಹಣ ವಶ ಯುವ ಭಾರತ ಸುದ್ದಿ ಬೆಳಗಾವಿ : ಚುನಾವಣೆ ಘೋಷಣೆ ಬೆನ್ನಲ್ಲೆ ಚಿಕ್ಕೋಡಿ ಉಪವಿಭಾಗದಲ್ಲಿ ಅಧಿಕಾರಿ ವರ್ಗವು ಚುರುಕು ಆಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ 70 ಲಕ್ಷ ರೂಪಾಯಿಗಳನ್ನು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಕಾಗವಾಡ ಚೆಕ್ ಪೋಸ್ಟ್ ನಲ್ಲಿ ಬುಧವಾರ ಸಂಜೆ ನಡೆದಿದ್ದು, ಈ ಬಗ್ಗೆ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ …

Read More »

ಹಾವೇರಿ ನೂತನ ವಿಶ್ವವಿದ್ಯಾಲಯದ ಕುಲ ಸಚಿವೆಯಾಗಿ ಬೆಳಗಾವಿಯ ವಿಜಯಲಕ್ಷ್ಮೀ ನೇಮಕ !

ಹಾವೇರಿ ನೂತನ ವಿಶ್ವವಿದ್ಯಾಲಯದ ಕುಲ ಸಚಿವೆಯಾಗಿ ಬೆಳಗಾವಿಯ ವಿಜಯಲಕ್ಷ್ಮೀ ನೇಮಕ ! ಯುವ ಭಾರತ ಸುದ್ದಿ ಬೆಳಗಾವಿ : ಹಾವೇರಿಯ ನೂತನ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆಯಾಗಿ ಬೆಳಗಾವಿಯ ವಿಜಯಲಕ್ಷ್ಮೀ ತೀರ್ಲಾಪುರ (ಪುಟ್ಟಿ) ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಖಾನಾಪುರ ಮರಾಠಾ ಮಂಡಲ ಪದವಿ ಮಹಾವಿದ್ಯಾಲಯದ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿರುವ ಅವರು ಉಪನ್ಯಾಸಕಿಯಾಗಿ 30 ವರ್ಷಗಳ ಅನುಭವ ಹೊಂದಿದ್ದಾರೆ. ಇಂಗ್ಲಿಷ್ ಸಾಹಿತ್ಯದ ಜೊತೆ ಕನ್ನಡದಲ್ಲೂ ಆಳವಾಗಿ ಅಧ್ಯಯನ …

Read More »

ಬಂಜಾರ, ತುಳು ಭಾಷೆ : ಯಾವುದೇ ನಿರ್ದಿಷ್ಟ ಮಾನದಂಡಗಳಿಲ್ಲ

ಬಂಜಾರ, ತುಳು ಭಾಷೆ : ಯಾವುದೇ ನಿರ್ದಿಷ್ಟ ಮಾನದಂಡಗಳಿಲ್ಲ ಯುವ ಭಾರತ ಸುದ್ದಿ ನವದೆಹಲಿ: ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ತುಳು ಸೇರಿದಂತೆ ಹಲವು ಭಾಷೆಗಳ ಸೇರ್ಪಡೆಗೆ ಬೇಡಿಕೆ ಇದೆ. ಆದರೂ, ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಯಾವುದೇ ಭಾಷೆಯನ್ನು ಪರಿಗಣಿಸಲು ನಿಗದಿತ ಮಾನದಂಡಗಳಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಗೆ ಮಂಗಳವಾರ ತಿಳಿಸಿದರು. ತುಳು ಹಾಗೂ ಬಂಜಾರ ಭಾಷೆಗಳನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರ …

Read More »

ಸುವರ್ಣ ವಿಧಾನದಸೌಧ: ಡಾ.ಅಂಬೇಡ್ಕರ್, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಅನಾವರಣ

  ಯುವ ಭಾರತ ಸುದ್ದಿ ಬೆಳಗಾವಿ : ಸ್ವಾತಂತ್ರ್ಯ ಹೋರಾಟ ಹಾಗೂ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿರುವ ಬೆಳಗಾವಿ ಜಿಲ್ಲೆಯ ಸುವರ್ಣ ವಿಧಾನಸೌಧದ ಎದುರು ಡಾ.ಬಿ.ಆರ್.ಅಂಬೇಡ್ಕರ್, ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನವರ ಪುತ್ಥಳಿ ಸ್ಥಾಪಿಸಿರುವುದು ಎಲ್ಲರಿಗೂ ಸ್ಫೂರ್ತಿ ಹಾಗೂ ಪ್ರೇರಣಾದಾಯಕವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗದ ಆವರಣದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ …

Read More »

ಸದ್ಯವೇ ಚುನಾವಣೆ ಘೋಷಣೆ !

ಸದ್ಯವೇ ಚುನಾವಣೆ ಘೋಷಣೆ ! ಯುವ ಭಾರತ ಸುದ್ದಿ ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆಗೆ ಸದ್ಯವೇ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಸರಕಾರ ಬಹುತೇಕ ತನ್ನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದೆ. ತುರ್ತಾಗಿ ಮಾಡಬೇಕಾಗಿರುವ ಸರಕಾರಿ ಆದೇಶಗಳಿಗೆ ಮಂಗಳವಾರ ಪೂರಕ ಪ್ರಕ್ರಿಯೆ ನಡೆಸಿದೆ. ಕಳೆದ ಸಲ ಮೇ 12 ರಂದು ಒಂದೇ ಹಂತದ ನಡೆದು ಮೇ 15 ಕ್ಕೆ ಮತ ಎಣಿಕೆ ನಡೆದಿತ್ತು. ಈ ಸಲವು ಅದೇ ಆಸುಪಾಸಿನ …

Read More »