Breaking News

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಶಿವನ ಪ್ರತಿಮೆ ಅನಾವರಣ !

ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಶಿವನ ಪ್ರತಿಮೆ ಅನಾವರಣ ! ಯುವ ಭಾರತ ಸುದ್ದಿ ಚಿಕ್ಕಬಳ್ಳಾಪುರ: ಯೋಗದ ಮೂಲವಾದ ಆದಿಯೋಗಿಯ 112 ಅಡಿ ಮೂರ್ತಿಯನ್ನು ಬೆಂಗಳೂರಿನ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರುಗಳ ಸಮ್ಮುಖದಲ್ಲಿ ಭಾನುವಾರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ನಾನು ಕೊಯಮತ್ತೂರಿಗೆ ಹೋಗಿದ್ದೇನೆ. ಆದಿಯೋಗಿ ಬಹಳ ಸಮಯದಿಂದ ಜನರನ್ನು ಪ್ರೇರೇಪಿಸಿದ್ದಾರೆ. ಕೆಲವು ಸೆಕೆಂಡುಗಳ ಕಾಲ ಆದಿಯೋಗಿಯನ್ನು …

Read More »

ಬದುಕಿನಲ್ಲಿ ಮಹಾನ್ ಪುರುಷರ ಜೀವನ ಆದರ್ಶ ಅಳವಡಿಸಿಕೊಳ್ಳಿ

ಬದುಕಿನಲ್ಲಿ ಮಹಾನ್ ಪುರುಷರ ಜೀವನ ಆದರ್ಶ ಅಳವಡಿಸಿಕೊಳ್ಳಿ ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಶಿವಯೋಗಿ ಸಿದ್ಧರಾಮೇಶ್ವರರು 12ನೇ ಶತಮಾನದಲ್ಲಿ ಜನಪಯೋಗಿ ಕೆರೆ ಕಟ್ಟಿಸುವ ಮೂಲಕ ಕಾಯಕಯೋಗಿಯಾಗಿ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಅವರು ರಚಿಸಿದ ವಚನಗಳು ಪ್ರತಿಯೊಬ್ಬರ ಜೀವನಕ್ಕೆ ದಾರಿದೀಪವಾಗಿವೆ ಇಂತಹ ಮಹಾನ್ ಪುರುಷರ ಜೀವನ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮಂಗಾನವರ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ …

Read More »

ಶಿರಸಿಯಲ್ಲಿ ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

ಶಿರಸಿಯಲ್ಲಿ ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ ಯುವ ಭಾರತ ಸುದ್ದಿ ಶಿರಸಿ: ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಶಿರಸಿಗೆ ಭಾನುವಾರ ಭೇಟಿ ನೀಡಿದ ವೇಳೆ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಇದಕ್ಕಾಗಿ ಅನುದಾನ ಮೀಸಲಿಡಲಾಗುವುದು. ಈಗಾಗಲೇ ತೋಟಗಾರಿಕೆ, ಅರಣ್ಯ ಕಾಲೇಜು ಶಿರಸಿಯಲ್ಲಿದೆ. …

Read More »

ಹೊಸ ಜಿಲ್ಲೆ ಅಸ್ತಿತ್ವಕ್ಕೆ ತರುವ ಸುಳಿವು ನೀಡಿದ ಸಿಎಂ

ಹೊಸ ಜಿಲ್ಲೆ ಅಸ್ತಿತ್ವಕ್ಕೆ ತರುವ ಸುಳಿವು ನೀಡಿದ ಸಿಎಂ ಯುವ ಭಾರತ ಸುದ್ದಿ ಶಿರಸಿ : ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ ಉದಯವಾಗುವ ಸಾಧ್ಯತೆ ಇದೆ. ಈ ಮೂಲಕ ಎರಡು ವರ್ಷಗಳ ನಂತರ ಕರ್ನಾಟಕದಲ್ಲಿ ಮತ್ತೊಂದು ಜಿಲ್ಲೆ ಅಸ್ತಿತ್ವಕ್ಕೆ ಬರುವ ಲಕ್ಷಣ ಗೋಚರಿಸಿದೆ. ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಶಿರಸಿ ಜಿಲ್ಲೆ ರಚಿಸುವ ಪ್ರಸ್ತಾಪವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದು ಹೊಸ ಜಿಲ್ಲೆ ರಚಿಸುವ ಬಗ್ಗೆ …

Read More »

ಇಂಡಿ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳ ಪದಗ್ರಹಣ

ಇಂಡಿ, ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಯುವ ಭಾರತ ಸುದ್ದಿ ಇಂಡಿ :ಪಕ್ಷಕ್ಕೆ ಮಾತನಾಡುವವರಿಗಿಂತ ಸಂಘಟನೆ ಮಾಡುವವರು ಮುಖ್ಯ.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ ಜೋಡೊ ರಾಯಚೂರು ಕಾರ್ಯಕ್ರಮಕ್ಕೆ,ಧಾವಣಗೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನ್ಮದಿನದ ಕಾರ್ಯಕ್ರಮಕ್ಕೆ ಹಾಗೂ ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ತಾಲೂಕಿಗಿಂತ ಹೆಚ್ಚಿನ ಕಾರ್ಯಕರ್ತರು ಇಂಡಿಯಿಂದ ಹೋಗಲಾಗಿತ್ತು,ಜ.೧೬ ರಂದು ನಡೆಯುವ ನಾ ನಾಯಕಿ …

Read More »

ಬೆಳಗಾವಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪ್ರಾಣ ಬೆದರಿಕೆ ಕರೆ

ಬೆಳಗಾವಿಯಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪ್ರಾಣ ಬೆದರಿಕೆ ಕರೆ ಯುವ ಭಾರತ ಸುದ್ದಿ ನಾಗಪುರ : ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರಲ್ಲಿ ಜೀವ ಬೆದರಿಕೆ ಕರೆ ಹೋಗಿವೆ.ಕರೆ ಮಾಡಿದ ವ್ಯಕ್ತಿ ಗಡ್ಕರಿ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಇರುವ ಕೈದಿ ಜೈಲಲ್ಲಿ ಮೊಬೈಲ್ ಸಂಪರ್ಕ ಹೊಂದಿದ್ದು ಈ ಕೃತ್ಯ ಎಸಗಿದ್ದಾನೆ …

Read More »

ಫೆಬ್ರವರಿ 4, 5 ರಂದು ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ

ಫೆಬ್ರವರಿ 4, 5 ರಂದು ವಿಜಯಪುರದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನ ಯುವ ಭಾರತ ಸುದ್ದಿ ಬೆಂಗಳೂರು : ಈ ಹಿಂದೆ ಮುಂದೂಡಿಕೆಯಾಗಿದ್ದ ರಾಜ್ಯಮಟ್ಟದ 37ನೇ ಪತ್ರಕರ್ತರ ಸಮ್ಮೇಳನವನ್ನು ಫೆಬ್ರವರಿ 4 ಮತ್ತು 5 ರಂದು ವಿಜಯಪುರದಲ್ಲಿ ನಗರದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಜನವರಿ 9,10 ರಂದು ನಿಗದಿಯಾಗಿದ್ದ ಸಮ್ಮೇಳನ ಮುಂದೂಡಲಾಗಿತ್ತು. ಈ ಹಿನ್ನೆಲೆಯಲ್ಲಿ ಒಪ್ಪಿಗೆ ಕಾಯುತ್ತಿರುವುದಾಗಿ ಪತ್ರಕರ್ತರ ಸಂಘ ಮುಖ್ಯಮಂತ್ರಿಗೆ ತಿಳಿಸಿದೆ. ಇದಕ್ಕೆ ಸಂಬಂಧಿಸಿ …

Read More »

ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮೂತ್ರಕೋಶ ವಿಭಾಗದಲ್ಲಿ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಸಂಪನ್ನ

ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಮೂತ್ರಕೋಶ ವಿಭಾಗದಲ್ಲಿ ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಸಂಪನ್ನ ಯುವ ಭಾರತ ಸುದ್ದಿ ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ವೈದ್ಯವಿಜ್ಞಾನ ಅಭಿವೃದ್ದಿ ಪಥದ ನಾಗಾಲೋಟದಲ್ಲಿ ಮುನ್ನಡೆಯುತ್ತಿದ್ದು, ಸಂಶೋಧನೆಗಳು ನಿರಂತರವಾಗಿ ನಡೆಯುತ್ತಿವೆ. ಅವುಗಳಿಂದ ಹೊರಬರುವ ಫಲಗಳು ಮದ್ಯಮ ವರ್ಗದ ಜನರಿಗೆ ಅನುಕೂಲ ಕಲ್ಪಿಸುವಂತಾಗಬೇಕು. ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಹಾಗೂ ಗುಣಮಟ್ಟದ ಚಿಕಿತ್ಸೆ ಲಭಿಸುವಂತಾಗಬೇಕೆಂದು ಕೆಎಲ್‌ಇ ಸಂಸ್ಥೆಯ ಡಾ. …

Read More »

ಪ್ರಭಾಕರ ಕೋರೆಯವರಿಂದ 55 ಸಾವಿರ ಸಾಮರ್ಥ್ಯದ ಡಿಸ್ಟಲರಿ ಘಟಕ ಉದ್ಘಾಟನೆ

ಪ್ರಭಾಕರ ಕೋರೆಯವರಿಂದ 55 ಸಾವಿರ ಸಾಮರ್ಥ್ಯದ ಡಿಸ್ಟಲರಿ ಘಟಕ ಉದ್ಘಾಟನೆ ಯುವ ಭಾರತ ಸುದ್ದಿ ಸಾಂಗಲಿ : ಸಾಂಗಲಿಯ ರಾಜಾರಾಮ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ 55 ಸಾವಿರ ಸಾಮರ್ಥ್ಯದ ಡಿಸ್ಟಲರಿ ಘಟಕವನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರು ಉದ್ಘಾಟಿಸಿದರು. ಮಹಾರಾಷ್ಟ್ರದ ಮಾಜಿ ಜಲಸಂಪನ್ಮೂಲ ಸಚಿವ ಜಯಂತರಾವ್ ಪಾಟೀಲ, ಕಾರಖಾನೆಯ ಚೇರಮನ್ ಪಿ.ಆರ್.ಪಾಟೀಲ, ವೈಸ್ ಚೇರಮನ್ ವಿಜಯ ಪಾಟೀಲ, ಕಾರ್ಯಕಾರಿ ಸಂಚಾಲಕ ಆರ್.ಡಿ.ಮಾಹೂಲಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More »

ವಿವೇಕಾನಂದ ಜನ್ಮದಿನ : ವಿವೇಕಾನಂದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಯಶವಂತರಾಯಗೌಡ

ವಿವೇಕಾನಂದ ಜನ್ಮದಿನ : ವಿವೇಕಾನಂದ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಯಶವಂತರಾಯಗೌಡ ಯುವ ಭಾರತ ಸುದ್ದಿ ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಮಿನಿ ವಿಧಾನಸೌಧ ಬಳಿ ಇರುವ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಮೂರ್ತಿ ಪ್ರತಿಷ್ಠಾಪನೆಗೆ ೭ ಲಕ್ಷ ರೂ.ಗಳನ್ನು ವಯಕ್ತಿಕವಾಗಿ ನೀಡಲಾಗುವುದು.ಬರುವ ಫೆ.೧೨ ರಂದು ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು. ಅವರು ಗುರುವಾರ ಪಟ್ಟಣದ ವಿವೇಕಾನಂದ ವೃತ್ತದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ನಿಮಿತ್ಯ …

Read More »