Breaking News

ಗೋಕಾಕ

ಎಸ್‍ಡಿಎ, ಎಫ್‍ಡಿಎ ನೋಂದ ಅಭ್ಯರ್ಥಿಗಳಿಂದ ಶಾಸಕರಿಗೆ ಮನವಿ ಸಲ್ಲಿಕೆ

ಗೋಕಾಕ: 2017 ಸಾಲಿನ ಎಸ್‍ಡಿಎ ಹಾಗೂ ಎಫ್‍ಡಿಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ನಿರ್ದೇಶಿಸುವಂತೆ ಆಗ್ರಹಿಸಿ ಅರಭಾವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೊಂದ ಅಭ್ಯರ್ಥಿಗಳು ಮನವಿ ಸಲ್ಲಿಸಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೇರಿದ ಆಕಾಂಕ್ಷಿ ಅಭ್ಯರ್ಥಿಗಳು 2017ನೇ ಸಾಲಿನ ಎಸ್‍ಡಿಎ ಹಾಗೂ ಎಫ್‍ಡಿಎ ಪರೀಕ್ಷೆಗಳಲ್ಲಿ ಆಯ್ಕೆಯಾಗಿರುವ ನಮಗೆ ಕೂಡಲೇ ಆದೇಶ ಪತ್ರವನ್ನು ನೀಡಬೇಕೆಂದು ಅವರು ತಿಳಿಸಿದ್ದಾರೆ. ಎಲ್ಲ ಮೂಲ …

Read More »

ಪಕ್ಷಕ್ಕಾಗಿ ಯುವಕರು ಶ್ರಮಿಸಿ, ಸಂಘಟನೆಯತ್ತ ಒಲವು ತೋರಲಿ-ಡಾ: ಬಾಳಿಕಾಯಿ

ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಠಿಯ ನಾಯಕತ್ವದಿಂದ ಇಡೀ ಪ್ರಪಂಚವೇ ನಮ್ಮ ರಾಷ್ಟ್ರದತ್ತ ನೋಡುತ್ತಿದೆ, ಹೀಗಾಗಿ ಮೋದಿ ಅವರು ಪ್ರಪಂಚದ ಶಕ್ತಿಶಾಲಿ ಪ್ರಧಾನಿಯಾಗಿದ್ದಾರೆ. ರಾಷ್ಟ್ರದ ಉದ್ದಗಲಕ್ಕೂ ಬಿಜೆಪಿ ಬೇರೂರಿದ್ದು, ರಾಷ್ಟ್ರದ ಸಮಗ್ರ ಪ್ರಗತಿ ಅದು ಬಿಜೆಪಿಯಿಂದ ಮಾತ್ರವೇ ಸಾಧ್ಯವೆಂದು ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ: ಮಲ್ಲಿಕಾರ್ಜುನ ಬಾಳಿಕಾಯಿ ತಿಳಿಸಿದರು. ಶುಕ್ರವಾರದಂದು ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಬಿಜೆಪಿ ಯುವ ಮೋರ್ಚಾ ಅರಭಾವಿ ಮಂಡಲದ ಕಾರ್ಯಕಾರಣ …

Read More »

ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ

ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ …

Read More »

ಚುನಾವಣೆ ಗೆಲ್ಲಲು ಮಾಟ-ಮಂತ ಮಾಡಿದ ಕುತಂತ್ರಿ ಅಭ್ಯರ್ಥಿಗಳು

ಚುನಾವಣೆ ಗೆಲ್ಲಲು ಮಾಟ-ಮಂತ ಮಾಡಿದ ಕುತಂತ್ರಿ ಅಭ್ಯರ್ಥಿಗಳು ಯುವ ಭಾರತ ಸುದ್ದಿ,  ಗೋಕಾಕ್: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ …

Read More »

ಬಿಜೆಪಿ ಅತ್ಯಂತ ಶಿಸ್ತಿನ ಪಕ್ಷ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆ

ಗೋಕಾಕ : ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಈ ಪಕ್ಷದಲ್ಲಿ ಕಾರ್ಯಕರ್ತರಿಗಿರುವ ಗೌರವ ಯಾವ ಪಕ್ಷದಲ್ಲಿಯೂ ಇಲ್ಲ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ ಸಭಾ ಭವನದಲ್ಲಿ ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಜವಾಬ್ದಾರಿ ವಹಿಸಿಕೊಂಡಿರುವ ಹೊಸ ಪದಾಧಿಕಾರಿಗಳು ಸಂಘಟನಾತ್ಮಕವಾಗಿ ದುಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನು ಜನರ …

Read More »

ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್‍ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ..!!

  ಮಂಜೂರಾಗದ ನೆರೆ ಸಂತ್ರಸ್ತರಿಗೆ ಪಿಎಮ್‍ಎವೈ ಯೋಜನೆಯಡಿ ಮನೆಗಳ ಮಂಜೂರಕ್ಕೆ ಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ..!!   ಯುವ ಭಾರತ ಸುದ್ದಿ. ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ನೆರೆ ಸಂತ್ರಸ್ತರ ಸಭೆ ನಡೆಸಿದ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ: ಕಳೆದ ವರ್ಷ ಪ್ರವಾಹದಿಂದ ಮನೆ ಹಾನಿಗೊಳಗಾದ ಪರಿಹಾರದ ಹಣ ಮಂಜೂರ ಆಗದೇ ಇರುವವರಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅನುದಾನ ಮಂಜೂರ …

Read More »

ವಸೂಲಿ ಮಾಡಿದ ಹಣದ ಜೊತೆ ಪರಾರಿಯಾದ ಸ್ಪಂದನಾ ಮೈಕ್ರೋ ಪೈನಾನ್ಸ್ ಸಿಬ್ಬಂದಿ

ಗೋಕಾಕದಲ್ಲಿರುವ ಸ್ಪಂದನಾ ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಮೂಲತ ರಾಮದುರ್ಗ ತಾಲೂಕಿನ ಪಕೀರಪ್ಪಾ ಕುರಿ ಎಂಬಾತನು ಕೊಣ್ಣೂರಲ್ಲಿನ ಇಪ್ಪತೈದು ಗ್ರಾಹಕರಿಂದ ತಿಂಗಳಿಗೊಮ್ಮೆ ತುಂಬುವ ಹಣವನ್ನು ಅಂದಾಜು 2 ಲಕ್ಷ ರೂ, ಹಣವನ್ನು ದೊಚಿಕೊಂಡು ಗೋಕಾಕದಲ್ಲಿನ‌ ಕಚೇರಿಗೆ ಹಣ ತುಂಬದೆ ಪರಾರಿಯಾಗಿದ್ದಾನೆ, ಪ್ರತಿ ಹದಿನೈದು ದಿನಕೊಮ್ಮೆ ಸ್ಪಂದನಾ ಮೈಕ್ರೋ ಪೈನಾನ್ಸ್ ಕಂಪನಿಯಿಂದ ತೆಗೆದುಕೊಂಡ ಹಣವನ್ನು ತುಂಬಿಸಿಕೊಳ್ಳಲು ಮ್ಯಾನೆಜರ ಕಳಿಸಿದ್ದಾರೆಂದು ಹೇಳಿದ್ದಲ್ಲದೆ ಈಗ ಕೊರಾನಾ ಹೆಚ್ಚಾಗುತಿದ್ದರಿಂದ ಯಾರು ಕಚೇರಿಗೆ ಬರಬಾರದೆಂದು …

Read More »

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ

ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್‍ಸಿ …

Read More »

ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿಂದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭ್ರಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿ 2019 …

Read More »

ಪ್ರಧಾನಿ ಹುಟ್ಟು ಹಬ್ಬಕ್ಕೆ ಗೋಕಾಕ ಬಿಜೆಪಿಯಿಂದ ಹಣ್ಣು ಹಂಪಲು ವಿತರಣೆ.!

ಪ್ರಧಾನಿ ಹುಟ್ಟು ಹಬ್ಬಕ್ಕೆ ಗೋಕಾಕ ಬಿಜೆಪಿಯಿಂದ ಹಣ್ಣು ಹಂಪಲು ವಿತರಣೆ.! ಯುವ ಭಾರತ ಸುದ್ದಿ, ಗೋಕಾಕ್: ನಮ್ಮ ನೆಚ್ಚಿನ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಕೋವಿಡ್ ನಿಯಮಗಳನ್ನು ಪಾಲನೆ ಮಾಡುವ ಜೊತೆಗೆ ವಿವಿಧ ರೀತಿಯ ಸೇವಾ ಕಾರ್ಯಗಳನ್ನು ಕೈಗೊಂಡು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು. ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನದ …

Read More »