Breaking News

ಡಿವೈಎಸ್‌ಪಿ ಪ್ರಭು ಡಿ ಟಿ ಹಾಗೂ ಸಿಪಿಐ ಶ್ರೀಶೈಲ ಬ್ಯಾಕೂಡ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ.!

Spread the love

ಸಿಪಿಐ ಶ್ರೀಶೈಲ ಬ್ಯಾಕೂಡ

ಡಿವೈಎಸ್‌ಪಿ ಪ್ರಭು ಡಿ ಟಿ

ಯುವ ಭಾರತ ಸುದ್ದಿ, ಗೋಕಾಕ್: ಪ್ರವಾಹ ಹಾಗೂ ಕರೋನಾ ಸಂಕಷ್ಟದ ಸಮಯದಲ್ಲಿ ಜನರಿಗೆ ಉತ್ತಮವಾದ ಸೇವೆಯನ್ನು ನೀಡಿದ ದಕ್ಷ ಅಧಿಕಾರಿ ಡಿವೈಎಸ್‌ಪಿ ಪ್ರಭು ಡಿ ಟಿ ಹಾಗೂ ಸಿಪಿಐ ಶ್ರೀಶೈಲ ಬ್ಯಾಕೂಡ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಭಾಜನರಾಗಿದ್ದಾರೆ.
ಹಿಂದೆAದೂ ಕಂಡರಿಯದ ಜಲ ಪ್ರವಾಹದಲ್ಲಿ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸಿ, ಕರೋನಾ ಸಂಕಷ್ಟದ ಸಮಯದಲ್ಲಿ ತಮ್ಮ ಕರ್ತವ್ಯದ ಜೊತೆ ಜೊತೆಗೆ ನಿರ್ಗತಿಕರಿಗೆ ಸ್ಥಳೀಯ ಯುವಕರ ಸಹಾಯದೊಂದಿಗೆ ಆಹಾರ ಸಾಮಗ್ರಿಗಳನ್ನು ನೀಡಿ, ಜನರಿಗೆ ಕರೋನಾ ಬಗ್ಗೆ ಜಾಗೃತಿ ಮೂಢಿಸಿ ಮನೆಯಿಂದ ಹೊರ ಬರದಂತೆ ಎಲ್ಲೆಡೆ ಸಂಚರಿಸಿ ಜಾಗೃತಿ ಮೂಢಿಸಿದ್ದ ದಕ್ಷ ಅಧಿಕಾರಿ ಡಿವೈಎಸ್‌ಪಿ ಪ್ರಭು ಡಿ ಟಿ ಪ್ರಭು ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಒಲಿದು ಬಂದಿದೆ. ಸದ್ಯ ಡಿವೈಎಸ್‌ಪಿ ಪ್ರಭು ಡಿ ಟಿ ಪ್ರಭು ಚಿಕ್ಕಮಗಲೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಈ ಹಿಂದೆ ಗೋಕಾಕ ಶಹರ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ದಕ್ಷ ಅಧಿಕಾರಿ ಶ್ರೀಶೈಲ ಬ್ಯಾಕೂಡ ಅವರು ಮಹಾಲಿಂಗಪೂರ-ಮುಧೋಳನಲ್ಲಿ ಜಲ ಪ್ರವಾಹದ ಎದುರಾದ ಸಂದರ್ಭದಲ್ಲಿ ಜನರ ಸುರಕ್ಷತೆಗಾಗಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಗಲಿರುಳು ಶ್ರಮಿಸಿ, ಮುಖ್ಯಮಂತ್ರಿಗಳ ಚಿನ್ನದ ಪದಕ ಒಲಿದು ಬಂದಿದೆ. ಈ ದಕ್ಷ ಅಧಿಕಾರಿಗಳಿಗೆ ಗೌರವ ಒದಗಿ ಬಂದಿರುವದಕ್ಕೆ ಗೋಕಾವಿ ಜನತೆ ಅಭಿನಂದಿಸಿದ್ದಾರೆ.


Spread the love

About Yuva Bharatha

Check Also

ಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ!

Spread the loveಮಧ್ಯಪ್ರದೇಶನಲ್ಲಿ ಮೃತಪಟ್ಟಿದ್ದವರ ಗೋಕಾಕದಲ್ಲಿ ಅಂತ್ಯಸ0ಸ್ಕಾರ! ಯುವ ಭಾರತ ಸುದ್ದಿ ಗೋಕಾಕ: ಪ್ರಯಾಗರಾಜನ ಕುಂಭಮೇಳದಲ್ಲಿ ಭಾಗವಹಿಸಿ ಮರಳಿ ಬರುತ್ತಿರುವಾಗ …

Leave a Reply

Your email address will not be published. Required fields are marked *

4 × four =