Breaking News

ರಾಯಬಾಗನಲ್ಲಿ ಬಿಜೆಪಿ ಟಿಕೆಟ್ ವಂಚಿತ ರಾಜು ಕಿರಣಗಿ ಅವರನ್ನು ಸಂಪರ್ಕಿಸಿದ ಕಾಂಗ್ರೆಸ್ ನಾಯಕರು !

Spread the love

ರಾಯಬಾಗನಲ್ಲಿ ಬಿಜೆಪಿ ಟಿಕೆಟ್ ವಂಚಿತ ರಾಜು ಕಿರಣಗಿ ಅವರನ್ನು ಸಂಪರ್ಕಿಸಿದ ಕಾಂಗ್ರೆಸ್ ನಾಯಕರು !

ಯುವ ಭಾರತ ಸುದ್ದಿ ರಾಯಬಾಗ :
ರಾಯಬಾಗ ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿತರಾಗಿದ್ದ ರಾಜು ಕಿರಣಗಿ ಅವರನ್ನು ಇದೀಗ ಕಾಂಗ್ರೆಸ್ ನಾಯಕರು ತಮ್ಮ ಪಕ್ಷಕ್ಕೆ ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ.

ರಾಜು ಕಿರಣಗಿ ಅವರು ರಾಯಬಾಗ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿತರಾಗಿದ್ದರು. ಆದರೆ, ಬಿಜೆಪಿ ಹಾಲಿ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಮತ್ತೆ ಮಣೆ ಹಾಕಿದೆ.
ಈ ಬೆಳವಣಿಗೆಯನ್ನು ಗಮನಿಸಿರುವ ಕಾಂಗ್ರೆಸ್ ಪಕ್ಷ ಯುವಕ ಹಾಗೂ ಅತ್ಯಂತ ಕ್ರಿಯಾಶೀಲವಾಗಿರುವ ರಾಜು ಕಿರಣಗಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ ಪ್ರಯತ್ನ ನಡೆಸಿದೆ. ಈ ಬಗ್ಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಅವರನ್ನು ಸಂಪರ್ಕಿಸಿದ್ದಾರೆ. ಕಾಂಗ್ರೆಸ್ ಇದುವರೆಗೆ ರಾಯಬಾಗ ಮತಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

18 − 13 =