Breaking News

ಕದನ ಕುತೂಹಲ : ಸಿಎಂ ಭೇಟಿಯಾಗಿ ಗಹನ ಚರ್ಚೆ ನಡೆಸಿದ ಸಾಹುಕಾರ್ !

Spread the love

ಕದನ ಕುತೂಹಲ : ಸಿಎಂ ಭೇಟಿಯಾಗಿ ಗಹನ ಚರ್ಚೆ ನಡೆಸಿದ ಸಾಹುಕಾರ್ !

ಯುವ ಭಾರತ ಸುದ್ದಿ ಹುಬ್ಬಳ್ಳಿ :
ಮಹತ್ವದ ಬೆಳವಣಿಗೆ ಒಂದರಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿಯವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭಾನುವಾರ ಸಿಎಂ ನಿವಾಸದಲ್ಲಿ ಭೇಟಿಯಾಗಿ ನಡೆಸಿದ್ದಾರೆ.
ತಮ್ಮ ಬೆಂಬಲಿಗ ಹಾಲಿ ಬಿಜೆಪಿ ಶಾಸಕ ಮಹೇಶ ಕುಮಟಳ್ಳಿ ಅವರನ್ನು ಅಥಣಿ ವಿಧಾನಸಭಾ ಮತಕ್ಷೇತ್ರದಲ್ಲಿ ಮತ್ತೆ ಕಣಕ್ಕೆ ಇಳಿಸುವ ಸಂಬಂಧ ಅವರು ಸುಮಾರು ಒಂದು ಗಂಟೆ ಸಮಯ ಸಿಎಂ ಜೊತೆ ಅವರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಮೇಶ ಜಾರಕಿಹೊಳಿಯವರು ಇದು ನಮ್ಮ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಷಯ. ಈ ಕುರಿತು ನಮ್ಮ ಅಭಿಪ್ರಾಯ ಹೇಳಿದ್ದೇವೆ ಎಂದು ತಿಳಿಸಿದರು.

ಸರಕಾರ ಘೋಷಣೆ ಮಾಡಿರುವ ಮೀಸಲಾತಿ ಒಳ್ಳೆಯ ಕಾರ್ಯವಾಗಿದೆ. ಹಿಂದುಳಿದವರ ಮೀಸಲಾತಿಯನ್ನು ಕಸಿದು ಕೊಂಡಿಲ್ಲ. ಇಷ್ಟಕ್ಕೂ ಮೀಸಲಾತಿ ವಿವರವನ್ನು ಸಂಪೂರ್ಣವಾಗಿ ಓದಿ ಪ್ರತಿಕ್ರಿಯೆ ನೀಡುವೆ ಎಂದು ಹೇಳಿದರು.

ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು ಚುನಾವಣೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಈ ಸಂದರ್ಭದಲ್ಲಿ ರಮೇಶ ಜಾರಕಿಹೊಳಿ ಅವರು ಹುಬ್ಬಳ್ಳಿ ಸಿಎಂ ನಿವಾಸಕ್ಕೆ ತೆರಳಿ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.


Spread the love

About Yuva Bharatha

Check Also

ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್‌ಡಬ್ಲ್ಯುಕೆಆರ್‌ಟಿಸಿ

Spread the loveಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್‌ಡಬ್ಲ್ಯುಕೆಆರ್‌ಟಿಸಿ ಯುವ ಭಾರತ ಸುದ್ದಿ …

Leave a Reply

Your email address will not be published. Required fields are marked *

one − 1 =