Breaking News

ಮೇಲ್ಮನೆ ಚುನಾವಣೆಗೆ ದಿನಾಂಕ ಘೋಷಣೆ

Spread the love

ಮೇಲ್ಮನೆ ಚುನಾವಣೆಗೆ ದಿನಾಂಕ ಘೋಷಣೆ

ಬೆಂಗಳೂರು:
ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಸದಸ್ಯರ ರಾಜೀನಾಮೆಯಿಂದ ತೆರವಾಗಿರುವ ಮೂರು ಸ್ಥಾನಗಳ ಆಯ್ಕೆಗೆ, ಚುನಾವಣಾ ಆಯೋಗವು ಉಪ ಚುನಾವಣೆ ದಿನಾಂಕ ಪ್ರಕಟಿಸಿದೆ.

ಬಾಬೂರಾವ್ ಚಿಂಚನಸೂರ, ಆರ್.ಶಂಕರ್‌ ಹಾಗೂ ಲಕ್ಷ್ಮಣ ಸವದಿ ಅವರು ಈ ಬಾರಿಯ ವಿಧಾನಸಭೆ ಚುನಾವಣೆಗೂ ಮುನ್ನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಪರಿಷತ್‌ ಸದಸ್ಯರನ್ನು ವಿಧಾನಸಭೆ ಸದಸ್ಯರೇ ಮತದಾನದ ಮೂಲಕ ಆಯ್ಕೆ ಮಾಡಲಿದ್ದಾರೆ.

ಚಿಂಚನಸೂರ ಅವರ ಅವಧಿ 2024ರ ಜೂನ್‌ 17ರ ವರೆಗೆ, ಶಂಕರ್‌ ಅವರ ಅವಧಿ 2026ರ ಜೂನ್‌ 30ರ ವರೆಗೆ ಮತ್ತು ಸವದಿ ಅವರ ಅವಧಿ 2028ರ ಜೂನ್‌ 14ರ ವರೆಗೆ ಇತ್ತು.

ಜೂನ್‌ 13ರಿಂದ 20ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 22ರಂದು ಹಿಂಪಡೆಯಬಹುದಾಗಿದೆ. 30ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

nine − 9 =