Breaking News

ಬೆಳಗಾವಿಯ ದೇಶಪಾಂಡೆಯವರಿಗೆ ಒಲಿದ ಕುಲಪತಿ ಹುದ್ದೆ

Spread the love

ಬೆಳಗಾವಿಯ ದೇಶಪಾಂಡೆಯವರಿಗೆ ಒಲಿದ ಕುಲಪತಿ ಹುದ್ದೆ

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ಗೋಗಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಕೆಲಸ ಮಾಡಿದ್ದ ಹಾಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಆನಂದ ಶರದ ದೇಶಪಾಂಡೆ ಅವರನ್ನು ರಾಜ್ಯ ಸರ್ಕಾರ ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಕೆಲ ತಿಂಗಳುಗಳ ಹಿಂದೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಹೊಸ ಕುಲಪತಿ ನೇಮಕ ವೇಳೆ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು. ಆದರೆ, ಇದೀಗ ರಾಜ್ಯ ಸರಕಾರ ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ಅವರನ್ನು ನೇಮಕಗೊಳಿಸಿದೆ.
ದೇಶಪಾಂಡೆ ಅವರು ಎಂ.ಟೆಕ್., ಪಿಎಚ್.ಡಿ. ಮತ್ತು 31 ವರ್ಷಗಳ ಅನುಭವವನ್ನು ಹೊಂದಿದ್ದು,
ಅವರು ಉತ್ಪಾದನೆ, ಸಿಎಡಿ / ಸಿಎಎಂ ಸಂಶೋಧನೆಯಲ್ಲಿ ಆಸಕ್ತಿ ಹೊಂದಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

eight + 8 =