Breaking News

ಅಂಬೇಡ್ಕರ್ ಶ್ರೇಷ್ಠ ನಾಯಕರಲ್ಲಿ ಒಬ್ಬರು-ರಮೇಶ ಜಾರಕಿಹೊಳಿ.!

Spread the love

ಅಂಬೇಡ್ಕರ್ ಶ್ರೇಷ್ಠ ನಾಯಕರಲ್ಲಿ ಒಬ್ಬರು-ರಮೇಶ ಜಾರಕಿಹೊಳಿ.!


ಗೋಕಾಕ: ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಮಾಜಿ ಸಚಿವ ಹಾಗು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿAದ ಹಮ್ಮಿಕೊಂಡ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.


ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸು ಕಾಣುತ್ತಾ ಕಷ್ಟದ ನಡುವೆಯೂ ಬೆಳೆದ ಅಂಬೇಡ್ಕರ್ ಅವರು ನಮ್ಮ ದೇಶದ ಅದ್ಭುತ ನಾಯಕರಲ್ಲಿ ಒಬ್ಬರಾಗಿ ರೂಪುಗೊಂಡರು. ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆ ಅಂಬೇಡ್ಕರ್ ಎಂದರು.
ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜದ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸಿದವರು ಅಂಬೇಡ್ಕರ್. ಶೋಷಿತರು, ಕಾರ್ಮಿಕರು, ಮಹಿಳೆಯರ ಉನ್ನತಿಗೆ ಹೋರಾಡಿದ, ಅಸಹಾಯಕರ ಧ್ವನಿಯಾದ, ಸಮಾನತೆಯ ಕನಸು ಕಂಡ, ಎಲ್ಲರ ಬದುಕಿಗೆ ಸ್ಫೂರ್ತಿಯಾದ ಮಹಾನ್ ನಾಯಕ ಡಾ. ಬಿ. ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಸದಸ್ಯರಾದ ಅಬ್ಬಾಸ ದೇಸಾಯಿ, ಸಿದ್ದಪ್ಪ ಹುಚ್ಚರಾಮಪ್ಪಗೋಳ, ಹರೀಶ ಬೂದಿಹಾಳ, ಬಾಬು ಮುಳಗುಂದ, ತಾಯವ್ವ ಸೋನೊನಿ, ಬಿಜೆಪಿ ಪದಾಧಿಕಾರಿಗಳಾದ ಲಕ್ಷö್ಮಣ ತಪಸಿ, ಬಸವರಾಜ ಹಿರೇಮಠ, ರಾಜೇಶ್ವರಿ ಒಡೆಯರ, ಮಂಜುನಾಥ ಮಾವರಕರ, ಮಲ್ಲಿಕಜಾನ ತಳವಾರ, ಸುರೇಶ ಪತ್ತಾರ, ಶ್ರೀರಂಗ ನಾಯ್ಕ, ಕಿರಣ ಡಮಾಮಗರ, ಲಕ್ಷಿö್ಮÃ ಪಾಟೀಲ, ಪವನ ಮಹಾಲಿಂಗಪೂರ, ಬಸವರಾಜ ಮೇತ್ರಿ, ಗೋವಿಂದ ಕಳ್ಳಿಮನಿ, ರವಿ ಕಡಕೋಳ, ಮಂಜುಳಾ, ಲಕ್ಷಿö್ಮÃ ಬಿಜಾಪುರ, ರತ್ನಾ ಪೂಜಾರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

one × 1 =