Breaking News

ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ

Spread the love

ರೈತರು ಹೇಡಿಗಳೆಂದ ಬಿ.ಸಿ. ಪಾಟೀಲ ಹೇಳಿಕೆ ತಪ್ಪು: ಎಂಪಿ ಈರಣ್ಣ ಕಡಾಡಿ..!!

ಯುವ ಭಾರತ ಸುದ್ದಿ ಬೆಳಗಾವಿ: ಕೃಷಿ ಸಚಿವ ಬಿ.ಸಿ.ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ನೀಡಿರುವ ಹೇಳಿಕೆ ತಪ್ಪು ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.

ಶುಕ್ರವಾರ ನಗರದ ಚನ್ನಮ್ಮ ವೃತ್ತದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೃಷಿ ಸಚಿವ ಬಿ.ಸಿ.ಪಾಟೀಲ ರೈತರ ಬಗ್ಗೆ ಅಪಾರ ಕಾಳಜಿ‌ ಹೊಂದಿದ್ದಾರೆ. ಮಾತಿನ ಭರದಲ್ಲಿ ಅವರು ಆತ್ಮಹತ್ಯೆ ಮಾಡಿಕೊಳ್ಳಲು ರೈತರು ಹೇಡಿಗಳೆಂದು ಹೇಳಿಕೆ ನೀಡಿರುವುದು ಸರಿಯಲ್ಲ ಎಂದರು.

ನಾಳೆಯ ಕರ್ನಾಟಕ ಬಂದ್ ವಿಫಲವಾಗಲಿದೆ. ಕರ್ನಾಟಕ ಬಂದ್ ಯಾವುದೇ ರೀತಿ ಯಶಸ್ವಿ ಆಗುವುದಿಲ್ಲ. ಕನ್ನಡ ಪರ ಸಂಘಟನೆಗಳ ಬಂದಗೆ ಜನರ ಬೆಂಬಲ ಸಿಕ್ಕಿಲ್ಲ ಎಂದ ಅವರು, ನಾಳೆ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ಯಶಸ್ವಿ ಆಗಿ ನಡೆಯಲಿದೆ. ಕರ್ನಾಟಕ ಬಂದ್ ವಿಫಲವಾಗಲಿದೆ.ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಮೀಟಿಂಗ್ ನಡೆಯಲಿದೆ. ಇದರಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ಆಗಲಿದೆ. ಬೆಳಗಾವಿ ಲೋಕಸಭೆ, ಮಸ್ಕಿ, ಬಸವ ಕಲ್ಯಾಣ ಉಪ ಚುನಾವಣೆ ಬಗ್ಗೆ ಆಗಲಿದೆ. ಬಿಜೆಪಿ ಪಕ್ಷದಲ್ಲಿಯೂ ಆಂತರಿಕ ಪ್ರಜಾಪ್ರಭುತ್ವವಿದೆ. ಹೀಗಾಗಿ ರಸ್ತೆಯಲ್ಲಿ ಪಕ್ಷದ ನಾಯಕರು ನೀಡುತ್ತಿರುವ ಹೇಳಿಕೆ ಗೆ ಕಡಿವಾಣ ಹಾಕಬಹುದು ಎಂದರು.
ಯಾವುದೇ ರೀತಿಯಲ್ಲಿ ಸಿಎಂ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಇಲ್ಲ. ಸಚಿವ ಸಂಪುಟ ನಾನಾ ಕಾರಣಗಳಿಂದ ವಿಳಂಬವಾಗಿದೆ. ಸಂಪುಟ ವಿಸ್ತರಣೆ ಅಥವಾ ರಚನೆ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

nine − 1 =