Breaking News

ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕವಾಗಿ ದೊಡ್ಡ ದುರಂತ : ಕೋಡಿಮಠ ಶ್ರೀಗಳ ಭವಿಷ್ಯ

Spread the love

ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕವಾಗಿ ದೊಡ್ಡ ದುರಂತ : ಕೋಡಿಮಠ ಶ್ರೀಗಳ ಭವಿಷ್ಯ


ಹುಬ್ಬಳ್ಳಿ:
ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ, ಜಲಪ್ರಳಯ ಸಂಭವಿಸಲಿದೆ. ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚಿಹೋಗುತ್ತವೆ. ಪ್ರಕೃತಿ ಮುನಿದು ಸರಿಯಾಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಜಯ ದಶಮಿಯಿಂದ ಸಂಕ್ರಾತಿಯ ವರೆಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ. ಆಳುವವರು ಅರಿತುಕೊಳ್ಳಬೇಕು. ಇಲ್ಲದಿದ್ದರೇ ಅಪಾಯ ಸಂಭವಿಸಲಿದೆ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕಕ್ಕೆ ಕೆಲವೊಂದು ಆಪತ್ತು ಇದೆ, ರಾಜ್ಯದಲ್ಲಿ ಮಳೆ ಸಾಕಷ್ಟು ಬರುತ್ತದೆ. ಜಲ ಪ್ರಳಯ ಸಂಭವಿಸಬಹುದು, ಪ್ರಕೃತಿ ಮುನಿದು ಸರಿಯಾಗುತ್ತದೆ, ಸಾವು ನೋವು ಸಂಭವಿಸಲಿದೆ. ಆದರೆ ದೈವ ಕೃಪೆಯಿಂದ ಇದರಿಂದ ಪಾರಾಗಬಹುದು. ಭಾರತದಲ್ಲಿ ಒಂದು ಘಟನೆ ಸಂಭವಿಸಲಿದೆ. ಇದನ್ನು ತಪ್ಪಿಸುವಂತಹದ್ದು ಆಳುವವರ ಕೈಯಲ್ಲಿದೆ ಎಂದು ಶ್ರೀಗಳು ಹೇಳಿದರು.

ವಿಪರೀತ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚಿಹೋಗುತ್ತವೆ. ಎಲ್ಲಿಯೋ ಆದ ಘಟನೆಯಿಂದಾಗಿ ವಾಯು ಮಾಲಿನ್ಯವಾಗಿ ಜನರು ಅಕಾಲಿಕ ಮರಣ ಹೊಂದುತ್ತಾರೆ. ಎಲ್ಲೋ ಹಾಕಿದ ಬಾಂಬ್ ನಮ್ಮ ರಾಷ್ಟ್ರದ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಪೂರೈಸುವ ಬಗ್ಗೆ ಮಾರ್ಮಿಕವಾಗಿ ಹೇಳಿದ ಅವರು, ಮೂಗು ಮತ್ತು ಬಾಯಿಯನ್ನು ಉದಾಹರಣೆಯಾಗಿ ನೀಡಿದರು. ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತದೆ, ಆದರೆ ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ..


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

seven + 18 =