Breaking News

ನಗರಸಭೆ ಸದಸ್ಯ ಗಿರೀಶ ಖೋತ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ

Spread the love

ಗೋಕಾಕ: ಕಳೆದ ಮೂರು ಬಾರಿ ಗೋಕಾಕ ನಗರಸಭೆ ಸದಸ್ಯರಾಗಿ, ಜನಸೇವಕರಾಗಿ ಸೇವೆ ಸಲ್ಲಿಸಿದ್ದ ಬಸವ ನಗರದ ನಿವಾಸಿ ಗಿರೀಶ ಖೋತ (೪೫) ಅಕಾಲಿಕ ಮರಣ ಹೊಂದಿದ್ದಾರೆ.
ಸೋಮವಾರದಂದು ಮಧ್ಯಾಹ್ನ ೩ ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ವಾರ್ಡ ನಂ೧೪ರಲ್ಲಿ ಮೂರು ಬಾರಿ ಸದಸ್ಯರಾಗಿ, ಜನಸೇವಕರಾಗಿ ಸೇವೆ ಸಲ್ಲಿಸಿದ್ದ ಗಿರೀಶ ಖೋತ ಅವರು ಬಸವ ನಗರದಲ್ಲಿ ಅಪಾರ ಸ್ನೇಹಿತರನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಗಿರೀಶ ನಿಧನಕ್ಕೆ ಸಚಿವ ರಮೇಶ ಜಾರಕಿಹೊಳಿ ಸಂತಾಪ

ನಗರದ ಸಚ್ಛಾರಿತ್ರ‍್ಯದ ರಾಜಕಾರಣಿಯಾಗಿದ್ದ ಗಿರೀಶ್ ಖೋತ ಅವರ ಅಕಾಲಿಕ ಮರಣದಿಂದ ನನ್ನ ಆತ್ಮೀಯ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
೩ನೇಯ ಬಾರಿಗೆ ಗೋಕಾಕ ನಗರಸಭೆಗೆ ಆಯ್ಕೆಯಾಗಿದ್ದ ಗಿರೀಶ ಖೋತ ಮಾದರಿ ಜನಪ್ರತಿನಿಧಿಯಾಗಿದ್ದರು. ಜನಾನುರಾಗಿ ಮತ್ತು ಸರಳ, ಸ್ನೇಹಜೀವಿಯಾಗಿದ್ದ ಇವರು ನನ್ನ ರಾಜಕಾರಣದ ಪ್ರತಿ ಹೆಜ್ಜೆಯಲ್ಲೂ ನನ್ನ ಜೊತೆಗಿದ್ದವರು. ಇವರ ಹಠಾತ್ ನಿಧನ ನನ್ನ ಮನಸ್ಸಿಗೆ ತೀವ್ರ ನೋವನ್ನು ತಂದಿದೆ ಎಂದು ಸಚಿವರು ಸಂತಾಪ ಸೂಚಿಸಿದ್ದಾರೆ.
ಗಿರೀಶ ಖೋತ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಮತ್ತು ಅಪಾರ ಕಾರ್ಯಕರ್ತರಿಗೆ ಇವರ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

one × five =