Breaking News

ಕುಸಿತಗೊಂಡ ಮೆಳವಂಕಿ ಸೇತುವೆ ಮರುನಿರ್ಮಾಣಕ್ಕೆ 70ಲಕ್ಷ ರೂ, ನಾಳೆಯಿಂದಲೆ ಕಾಮಗಾರಿ ಚಾಲನೆ-ಬಾಲಚಂದ್ರ ಜಾರಕಿಹೊಳಿ..!!

Spread the love

ಕುಸಿತಗೊಂಡ ಮೆಳವಂಕಿ ಸೇತುವೆ ಮರುನಿರ್ಮಾಣಕ್ಕೆ 70ಲಕ್ಷ ರೂ, ನಾಳೆಯಿಂದಲೆ ಕಾಮಗಾರಿ ಚಾಲನೆ-ಬಾಲಚಂದ್ರ ಜಾರಕಿಹೊಳಿ..!!

ಯುವ ಭಾರತ ಸುದ್ದಿ,
ಗೋಕಾಕ್: ಸತತವಾಗಿ ಸುರಿಯುತ್ತಿರುವ ಮಳೆಯಿಂದ ಗೋಕಾಕ-ಕೌಜಲಗಿ ದಂಡಿನ ಮಾರ್ಗದಲ್ಲಿಯ ಮೆಳವಂಕಿ ಗ್ರಾಮದ ಬಳಿಯ ಸೇತುವೆ ಸೋಮವಾರ ಬೆಳಗಿನ ಜಾವ ಹಠಾತ್ತನೇ ಕುಸಿತಗೊಂಡು ದಂಡಿನ ಮಾರ್ಗ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಗೋಕಾಕದಿಂದ ಕೌಜಲಗಿವರೆಗಿನ ಸಂಪರ್ಕ ಕಲ್ಪಿಸುವ ದಂಡಿನ ಮಾರ್ಗದಲ್ಲಿ ಮೆಳವಂಕಿ ಸೇತುವೆ ಕುಸಿದಿದ್ದರಿಂದ ರಸ್ತೆ ಸಂಪರ್ಕ ಕಡಿತಗೊಂಡು, ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕಳೆದ ೧೯೮೫ರಲ್ಲಿ ಲೋಕೋಪಯೋಗಿ ಇಲಾಖೆಯಿಂದ ನಿರ್ಮಾಣಗೊಂಡಿರುವ ಈ ಸೇತುವೆಯು ಪ್ರತಿ ಸಾರಿ ಪ್ರವಾಹ ಬಂದಾಗಲೆಲ್ಲಾ ಸಂಪೂರ್ಣವಾಗಿ ಮುಳುಗಡೆಯಾಗುತ್ತಿತ್ತು. ಅಲ್ಲದೇ ಕಳೆದ ಹಲವಾರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೇತುವೆಯು ಶಿಥಿಲಗೊಂಡು ಬೆಳಗಿನ ಜಾವ ೬-೩೦ ಗಂಟೆಗೆ ಕುಸಿದು ಬಿದ್ದಿತು. ಸುದೈವಕ್ಕೆ ಆ ಸಮಯದಲ್ಲಿ ಯಾವುದೇ ವಾಹನ ಸಂಚಾರ ಇರಲಿಲ್ಲ. ಆದರೆ ೬ ಘಂಟೆಗೆ ಬಸ್ ಸಮೇತ ಕೆಲ ಖಾಸಗಿ ವಾಹನಗಳು ಸೇತುವೆ ಮೇಲಿಂದ ದಾಟಿರುವದು ಗಮನಿಸಬಹುದು. ಸೇತುವೆ ಕುಸಿತಗೊಂಡಿದ್ದರಿAದ ಮೆಳವಂಕಿ, ಹಡಗಿನಾಳ, ಕಲಾರಕೊಪ್ಪ ಗ್ರಾಮಗಳ ಸಂಚರಿಸಲು ತೊಂದರೆಯಾಗಿದೆ.
ಈ ಸೇತುವೆ ಕುಸಿತದ ವಿಷಯ ತಿಳಿದ ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೂಡಲೇ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು. ಶಾಸಕರ ಸೂಚನೆ ಮೇರೆಗೆ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬೆಳಗಾವಿ ಲೋಕೋಪಯೋಗಿ ಇಲಾಖೆಯ ಅಧಿಕ್ಷಕ ಅಭಿಯಂತರ ಪಿ.ವಾಯ್.ಪವಾರ, ಚಿಕ್ಕೋಡಿಯ ಕಾರ್ಯನಿರ್ವಾಹಕ ಅಭಿಯಂತರ ವಿ.ಎನ್.ಪಾಟೀಲ, ಎಇಇ ಆರ್.ಎ.ಗಾಣಿಗೇರ ಸೇರಿದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಸೇತುವೆ ನಿರ್ಮಾಣಕ್ಕೆ ತಕ್ಷಣ 70 ಲಕ್ಷ ರೂ. : ಈ ಸೇತುವೆ ಕುಸಿತದಿಂದ ಸಾರ್ವಜನಿಕರಿಗೆ ರಸ್ತೆ ಸಂಚಾರಕ್ಕೆ ತೊಂದರೆಯಾಗುವುದನ್ನು ತಪ್ಪಿಸಲು ಕೂಡಲೇ 70 ಲಕ್ಷ ರೂ.ಗಳನ್ನು ನೀಡುವದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಕೂಡಲೇ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ಹಹಿಸಿ ಬೈಪಾಸ್ ರಸ್ತೆ ನಿರ್ಮಿಸಿ ರೈತರಿಗೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು. ನಾಳೆಯಿಂದಲೇ ಕೆಲಸ ಆರಂಭಿಸುವAತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೇತುವೆ ಕುಸಿತದ ಸಂದರ್ಭದಲ್ಲಿ ಯಾವುದೇ ಅನಾಹುತಗಳು ಸಂಭವಿಸದೇ ಇರುವದು ದೇವರ ದಯೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

twelve − 10 =