Breaking News

ಪಿಎಸ್‌ಐ ವಾಲಿಕಾರ ಅವರಿಗೆ ಅಭಿನಂದನೆಗಳ ಮಹಾಪೂರ.!

Spread the love

ಪಿಎಸ್‌ಐ ವಾಲಿಕಾರ ಅವರಿಗೆ ಅಭಿನಂದನೆಗಳ ಮಹಾಪೂರ.!


ಗೋಕಾಕ: ಗಣರಾಜ್ಯೋತ್ಸವ ಪೊಲೀಸ ಪಥ ಸಂಚಲನಕ್ಕೆ ಕನ್ನಡದಲ್ಲಿ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದಿರುವ ಗೋಕಾಕ ಶಹರ ಠಾಣೆ ಪಿಎಸ್‌ಐ ಕೆ.ವಾಲಿಕರ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಅಭಿನಂದನಾ ಪತ್ರ ಕಳುಹಿಸಿರುವ ಅವರು ಪೊಲೀಸ ಇಲಾಖೆಯಲ್ಲಿ ಕವಾಯತ್ತು ಪ್ರದರ್ಶನದಲ್ಲಿ ಕೆಲವ ಹಿಂದಿ ಮತ್ತು ಇಂಗ್ಲಿಷನಲ್ಲಿಯೆ ನಿರ್ದೇಶನ ನೀಡುತ್ತಿರುವ ಸಂದರ್ಭದಲ್ಲಿ ೭೩ನೇ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಗೋಕಾಕ ಶಹರ ಪೋಲಿಸ್ ಠಾಣೆಯ ಪಿಎಸ್‌ಐ ಕೆ.ವಾಲಿಕರ ಅವರು ಕನ್ನಡದಲ್ಲಿ ಆದೇಶ ನೀಡಿದ್ದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಗಮನಿಸಿ, ಅಖಂಡ ಕನ್ನಡದ ಮನಸ್ಸುಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಯನ್ನು ಸಲ್ಲಿಸಿ, ಇದು ಎಲ್ಲಾ ಪೊಲೀಸ ಅಧಿಕಾರಿಗಳಿಗೆ ಮಾದರಿಯಾಗಲಿ ಎಂದು ಪ್ರಾಧಿಕಾರ ಹಾರೈಸುತ್ತದೆ. ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕನ್ನಡ ಭಾಷೆ ಬಳಕೆ ಮತ್ತು ಅನುಷ್ಠಾನ ಆಡಳಿತ ವ್ಯವಸ್ಥೆಯಲ್ಲಿ ಕಟ್ಟು ನಿಟ್ಟಾಗಿ ಜಾರಿಗೊಳ್ಳಲಿ ಎಂದು ಆಶಿಸುತ್ತೇನೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಅಭಿನಂದನಾ ಪತ್ರವನ್ನು ಪಿಎಸ್‌ಐ ಕೆ.ವಾಲಿಕರ ಅವರಿಗೆ ಕಳುಹಿಸಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

nineteen − two =