Breaking News

ಗೋಕಾಕ : ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು

Spread the love

ಗೋಕಾಕ : ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು

ಯುವ ಭಾರತ ಸುದ್ದಿ ಗೋಕಾಕ :
ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹಾರೈಸಿದ ನಿಸರ್ಗಕವಿ, ರಸಋಷಿ, ಕುವೆಂಪುರವರು ಈ ದೇಶ ಕಂಡ ಅಪ್ರತಿಮ ರಾಷ್ಟ್ರಕವಿ ಎಂದು ಉಪನ್ಯಾಸಕ ಎಸ್.ಎಮ್.ಪೀರಜಾದೆ ಅವರು ಅಭಿಪ್ರಾಯ ಪಟ್ಟರು.
ಇಲ್ಲಿನ ಬಸವಜ್ಯೋತಿ ಐ ಟಿ ಐ ಸಂಸ್ಥೆಯಲ್ಲಿ ಗುರುವಾರದಂದು ರಾಷ್ಟ್ರಕವಿ ಕುವೆಂಪು ರವರ ಜನ್ಮ ದಿನಾಚರಣೆಯ ನಿಮಿತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು ಆ ಮತದ, ಈ ಮತದ, ಹಳೆ ಮತದ, ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕ್ಕೆ ಓ ಬನ್ನಿ ಸಹೋದರರೇ ವಿಶ್ವಪಥಕ್ಕೆ ಎಂದು ಸಾರಿದ ಕುವೆಂಪುರವರ ಜೀವನ ತತ್ವಗಳು ನಮಗೆ ಆದರ್ಶವಾಗಲಿ ಎಂದು ಆಶಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬಸವಜ್ಯೋತಿ ಐ ಟಿ ಐ ಸಂಸ್ಥೆಯ ಅಧ್ಯಕ್ಷ ಅಶೋಕ ಲಗಮಪ್ಪಗೋಳ ಕುವೆಂಪುರವರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸ್ವಾಭಿಮಾನ, ಆತ್ಮವಿಶ್ವಾಸ ಬಲದಿಂದ ತಮ್ಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಪರಶುರಾಮ ಗೋಲ್ಲರ, ವಿಠ್ಠಲ ತಹಶೀಲ್ದಾರ, ಸಂಸ್ಥೆಯ ಪ್ರಾಚಾರ್ಯ ಎಲ್.ಎಸ್.ಜಾಧವ, ಸಾಮ್ರಾಟ ಐ ಟಿ ಐ ಯಾದವಾಡ, ಸಂಸ್ಥೆಯ ಪ್ರಾಚಾರ್ಯ ವಿ.ಕೆ.ಮಿರ್ಜಿ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅರುಣ ಪೂಜೇರಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

4 × five =