Breaking News

ಕೆ.ಎಸ್. ಈಶ್ವರಪ್ಪ ಹಾಗೂ  ರಮೇಶ ಜಾರಕಿಹೊಳಿಯವರಿಗೆ ಇಂದೇ ಗುಡ್ ನ್ಯೂಸ್ ?

Spread the love

ಕೆ.ಎಸ್. ಈಶ್ವರಪ್ಪ ಹಾಗೂ  ರಮೇಶ ಜಾರಕಿಹೊಳಿಯವರಿಗೆ ಇಂದೇ ಗುಡ್ ನ್ಯೂಸ್ ?

ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ನಡೆವೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ.

ಇದು ಸಚಿವ ಸಂಪುಟ ಸೇರುವ ನಿರೀಕ್ಷೆಯಲ್ಲಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರಿಗೆ ಶುಭ ಸಂದೇಶ ರವಾನಿಸುವ ಸಂಕೇತ ಇದೆ. ಇವರಿಬ್ಬರು ಸೇರಿ ಆರು ಜನರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ. ಮುಖ್ಯಮಂತ್ರಿಗಳು ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜಯಪ್ರಕಾಶ್ ನಡ್ದಾ ಅವರನ್ನು ಭೇಟಿಯಾಗುವ ನಿರೀಕ್ಷೆ ಇದೆ. ಮುಂದಿನ ವಿಧಾನಸಭಾ ಚುನಾವಣೆ ಕಾರ್ಯತಂತ್ರದ ಬಗ್ಗೆಯೂ ಮುಖ್ಯಮಂತ್ರಿಗಳು ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಜನವರಿ ಮೊದಲ ವಾರ ಇಲ್ಲವೇ ಮಕರ ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆಯಾಗುವ ನಡೆಯಬಹುದು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

fourteen − 11 =