Breaking News

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಗೋಡಾವನಕಟ್ಟಡದ ಅಡಿಗಲ್ಲು ಸಮಾರಂಭವನ್ನು -ಅಂಬಿರಾವ ಪಾಟೀಲ ನೆರವೇರಿಸಿದರು!!

Spread the love

 

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಗೋಡಾವನಕಟ್ಟಡದ ಅಡಿಗಲ್ಲು ಸಮಾರಂಭವನ್ನು -ಅಂಬಿರಾವ ಪಾಟೀಲ ನೆರವೇರಿಸಿದರು!!

ಯುವ ಭಾರತ ಸುದ್ದಿ  ಗೋಕಾಕ: ತಾಲೂಕಿನ     ಶಿಂದಿಕುರಬೇಟ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಆತ್ಮ ನಿರ್ಭರ ಭಾರತ ಯೋಜನೆ ಅಡಿಯಲ್ಲಿ ನಬಾರ್ಡನಿಂದ ಮಂಜೂರಾದ ಗೋಡಾವನ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲರಿಂದ ಸೋಮವಾರ ನೆರವೇರಿಸಲಾಯಿತು.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಬಲಾದಿ ಮಠದ ಶ್ರೀ ಗುರು ಚಕ್ರವರ್ತಿ ಕರಗಿರೀಶ ಸಂಗಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ವಹಿಸಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಮಂಜುನಾಥ ಗುಡಕೇತ್ರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ  ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಘಟಪ್ರಭಾ ವಿಭಾಗದ ಬ್ಯಾಂಕ ನೀರಿಕ್ಷಕರಾದ ಸನ್ನಿ ಪಾಟೀಲ, ಉಪಾದ್ಯಕ್ಷರಾದ ಬಡಪ್ಪ ಬಂಡಿವಡ್ಡರ, ಸದಸ್ಯರಾದ ಶ್ರೀಶೈಲ ಮಾನೇಪ್ಪಗೋಳ, ಸಿದಲಿಂಗ ನೇರ್ಲಿ, ಗಂಗಪ್ಪ ಖಂಡುಗೋಳ, ದಿನೇಶ ಕಡೆಲಿ, ಸಿದ್ದಪ್ಪ ಸತ್ತಿಗೆರಿ, ವಿಠ್ಠಲ ಜೋತೆನ್ನವರ, ಪರಸಪ್ಪ ಪಾಟೀಲ, ಕೆಂಪಣ್ಣಾ ದೇವರಮನಿ, ಶ್ರಿಮತಿ ಇಂದಿರಾ ಕಬ್ಬೂರ, ಕಸ್ತೂರಿ ಮಾನೆಪ್ಪಗೋಳ,  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಪರಕನಟ್ಟಿ  ಹಾಗೂ ಸಿಬ್ಬಂದಿ ವರ್ಗದವರು ಇದ್ದರು.ದೇ ಸಮಯದಲ್ಲಿ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲರನ್ನು ಸಹಕಾರಿ ಸಂಘದ ಪರವಾಗಿ ಆತ್ಮೀಯವಾಗಿ ಸತ್ಕರಿಸಲಾಯಿತು.


Spread the love

About Yuva Bharatha

Check Also

ಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.!

Spread the loveಅಭ್ಯರ್ಥಿ ಯಾರೇ ಆದರೂ ಕಾರ್ಯಕರ್ತರು ಅವರನ್ನು ಗೆಲ್ಲಿಸಿ-ಸಂಜಯ ಪಾಟೀಲ.! ಗೋಕಾಕ: ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮೂರನೇ …

Leave a Reply

Your email address will not be published. Required fields are marked *

two × 2 =