Breaking News

ಸವದತ್ತಿಯಲ್ಲಿ ಭೀಕರ ಸರಣಿ ಅಪಘಾತ : ಸಾವು

Spread the love

ಸವದತ್ತಿಯಲ್ಲಿ ಭೀಕರ ಸರಣಿ ಅಪಘಾತ : ಸಾವು

ಯುವ ಭಾರತ ಸುದ್ದಿ ಬೆಳಗಾವಿ :
ಲಾರಿ-ಬೈಕ್, ಕಾರು, ಆಟೋ ಮಧ್ಯೆ ಭೀಕರ ಸರಣಿ ರಸ್ತೆ ಅಪಘಾತ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದ ಎದುರು ಘಟನೆ ನಡೆದಿದೆ.

ಸವದತ್ತಿ ತಾಲೂಕಿನ ಕುರವಿನಕೊಪ್ಪ ಗ್ರಾಮದ ಬೈಕ್ ಸವಾರ ಸೋಮಲಿಂಗ ಹೂಗಾರ (33), ಸವದತ್ತಿ ತಾಲೂಕಿನ ಮದಿಗೇರಿ ಗ್ರಾಮದ ಕಾರ್ತಿಕ್ ಕುರಬಗಟ್ಟಿ (9) ಮೃತಟ್ಟಿದ್ದಾರೆ.

ಬೈಕ್ ಮೇಲಿದ್ದ ಇನ್ನಿಬ್ಬರಾದ ಮಂಜುಳಾ ಕುರಬಗಟ್ಟಿ (36), ಮಲ್ಲವ್ವ ಕುರಬಗಟ್ಟಿ (11),
ಗಂಭೀರ ಗಾಯಗೊಂಡಿದ್ದಾರೆ.

ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿದಕ್ಕೆ ದುರಂತ ಸಂಭವಿಸಿದೆ.

ಸವದತ್ತಿ ಪಟ್ಟಣದ ಕಡೆಗೆ ಬರುತ್ತಿದ್ದ ಬೈಕ್‌ಗೆ ಭೀಕರವಾಗಿ ಡಿಕ್ಕಿ ಹೊಡೆದ ಲಾರಿ
ಬಳಿಕ ರಸ್ತೆ ಪಕ್ಕ‌ ನಿಂತಿದ್ದ, ಕಾರು, ಆಟೋಗೂ ಡಿಕ್ಕಿ ಹೊಡೆದಿದೆ.

ಲಾರಿ ಚಕ್ರದ ಕೆಳಗೆ ಬೈಕ್ ಸವಾರನ ಮೃತದೇಹ ಸಿಲುಕಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

4 + 9 =