Breaking News

ನಾನು ಶೆಟ್ಟರ್ ರಂತೆ ಕಾಂಗ್ರೆಸ್ ಸೇರಿರಲಿಲ್ಲ : ಬಿಎಸ್ವೈ ಆಕ್ರೋಶ

Spread the love

ನಾನು ಶೆಟ್ಟರ್ ರಂತೆ ಕಾಂಗ್ರೆಸ್ ಸೇರಿರಲಿಲ್ಲ : ಬಿಎಸ್ವೈ ಆಕ್ರೋಶ

ಯುವ ಭಾರತ ಸುದ್ದಿ ಹುಬ್ಬಳ್ಳಿ :
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರು ಇತ್ತೀಚಿಗಷ್ಟೇ ಕಾಂಗ್ರೆಸ್ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ವಿರುದ್ಧ ಮತ್ತೆ ಕಿಡಿ ಕಾರಿದ್ದಾರೆ. ತಾನು ಬಿಜೆಪಿ ಜೊತೆಗಿನ ಮುನಿಸಿನಿಂದ ಕೆಜೆಪಿ ಕಟ್ಟಿದ್ದು ನನ್ನ ಜೀವನದ ಮಹಾ ಅಪರಾಧ. ನನ್ನ ಅಪರಾಧದಿಂದ 2013 ರಿಂದ 2018ರವರೆಗೆ ಕಾಂಗ್ರೆಸ್ ಆಡಳಿತ ನಡೆಸುವಂತಾಯಿತು. ಆದರೆ, ಜೀವನದಲ್ಲಿ ಮತ್ತೊಮ್ಮೆ ಇಂಥ ತಪ್ಪು ಮಾಡುವ ಪ್ರಶ್ನೆ ಎದುರಾಗದು. ಕೆಜೆಪಿ ಕಟ್ಟಿ ಅಪರಾಧ ಮಾಡಿದ ಬಗ್ಗೆ ರಾಜ್ಯದ ಜನತೆ ಬಳಿ ಕ್ಷಮೆ ಕೋರಿದ್ದೆ. ಆದರೆ ಶೆಟ್ಟರ್ ರೀತಿ ಕಾಂಗ್ರೆಸ್ ಸೇರಿರಲಿಲ್ಲ ಎಂದು ಕೆಂಡಾಮಂಡಲವಾದರು. ಶೆಟ್ಟರ ಅವರನ್ನು ಸೋಲಿಸುವಲ್ಲಿ ನಾವು ಯಶಸ್ವಿಯಾಗುತ್ತೇವೆ. ವಿಶ್ವಾಸದ್ರೋಹ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಅವರು ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದು ಮತ್ತೊಮ್ಮೆ ಬಿಜೆಪಿಗೆ ಬರುವ ಪ್ರಶ್ನೆಯೇ ಉದ್ಭವಿಸದು ಎಂದು ಸಿಡಿಮಿಡಿಗೊಂಡರು.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

18 + 1 =