Breaking News

ವಿಧಾನಸಭಾ ಚುನಾವಣೆ ಕುರಿತು ಮಹತ್ವದ ಮಾಹಿತಿ

Spread the love

ವಿಧಾನಸಭಾ ಚುನಾವಣೆ ಕುರಿತು ಮಹತ್ವದ ಮಾಹಿತಿ

ಯುವ ಭಾರತ ಸುದ್ದಿ ಬೆಂಗಳೂರು :
ಮುಂದಿನ ಎರಡು ತಿಂಗಳ ಒಳಗೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಬಗ್ಗೆ ಚುನಾವಣಾ ಆಯೋಗ ಇದೀಗ ಬಿರುಸಿನ ಪ್ರಕ್ರಿಯೆ ನಡೆಸುತ್ತಿದೆ.

ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸುವ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಸುಳಿವು ನೀಡಿದೆ . ಈ ಬಗ್ಗೆ ಮನವಿ ಬಂದಿದ್ದು , ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ . ಚುನಾವಣೆ ಅಕ್ರಮ ತಡೆಯಲು ಬಿಗಿ ಕ್ರಮ ಕೈಗೊಳ್ಳಲಾಗಿದ್ದು , ATM ವಹಿವಾಟಿನ ಮೇಲೆ ನಿಗಾ ಇಡಲಾಗಿದೆ . ಮತದಾರರ ಸೆಳೆಯಲು ನೀಡುವ ಗಿಫ್ಟ್‌ಗಳಿಗೆ ಬ್ರೇಕ್ ಹಾಕಲಾಗಿದೆ . ಅಕ್ರಮಗಳ ಬಗ್ಗೆ ಸಿ – ವಿಸಿಲ್ ಆ್ಯಪ್‌ಗೆ ದೂರು ನೀಡಿ ಎಂದು ಆಯುಕ್ತರು ಮನವಿ ಮಾಡಿದ್ದಾರೆ .

ದಶಕಗಳ ಹಿಂದೆ ರಾಜ್ಯದಲ್ಲಿ ಎರಡು ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿತ್ತು. ಆದರೆ ಈ ಬಾರಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಒಂದೇ ಬಾರಿ ಇಡೀ ರಾಜ್ಯದಲ್ಲಿ ಚುನಾವಣೆ ನಡೆಸಲು ಆಯೋಗ ಸಿದ್ಧತೆ ನಡೆಸುತ್ತಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

3 × 5 =