Breaking News

7 ರಂದು ಮಂಗಲ ಕಳಶ ಸ್ಥಾಪನೆ

Spread the love

7 ರಂದು ಮಂಗಲ ಕಳಶ ಸ್ಥಾಪನೆ

ಬೆಳಗಾವಿ :
ಪ್ರಸಕ್ತ ಸಾಲಿನ ಚಾರ್ತುಮಾಸ್ಯವನ್ನು ಬೆಳಗಾವಿಯಲ್ಲಿ ಆಚರಿಸಿಕೊಳ್ಳುತ್ತಿರುವ ಶ್ರೀ 108 ಪ್ರಸಂಗ ಸಾಗರಜಿ ಮುನಿಮಹಾರಾಜರ ವರ್ಷಾಯೋಗ ಮಂಗಲ ಕಳಶ ಸ್ಥಾಪನೆ ಕಾರ್ಯಕ್ರಮ ಜುಲೈ 7 ರಂದು ಬೆಳಗಾವಿ ಹಿಂದವಾಡಿಯ ಮಹಾವೀರ ಭವನದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.
ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ, ಉದ್ಯಮಿ ಗೋಪಾಲ ಜಿನಗೌಡ, ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಢಣ್ಣವರ ಉದ್ಯಮಿ ಸಚಿನ ಪಾಟೀಲ ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ ಜೈನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತರಬೇಕೆಂದು ಚಾರ್ತುಮಾಸ ಸಮಿತಿಯ ಅಧ್ಯಕ್ಷ, ಹಿರಿಯ ನ್ಯಾಯವಾದಿ ರವಿರಾಜ ಪಾಟೀಲ ಪ್ರಕಟಣೆಯಲ್ಲಿ ಕೋರಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

eighteen − 3 =