Breaking News

ಹಿರಿಯ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ !

Spread the love

ಹಿರಿಯ ಶಾಸಕರಿಗೆ ಟಿಕೆಟ್ ಸಿಗುವುದು ಕಷ್ಟ !

ಯುವ ಭಾರತ ಸುದ್ದಿ ಬೆಂಗಳೂರು :
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯ 22 ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಬಹುತೇಕ ಅನುಮಾನ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ .

ಐದಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಕ್ಷೇತ್ರವನ್ನು ಬಿಟ್ಟುಕೊಡುವಂತೆ ದೂರವಾಣಿ ಕರೆ ಮೂಲಕ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ತನಗೆ ದೂರವಾಣಿ ಕರೆ ಬಂದಿದ್ದು ನಿಜ , ಹೊಸಬರಿಗೆ ಅವಕಾಶ ನೀಡುವಂತೆ ಕೋರಿದ್ದಾರೆ ಎಂದು ಸ್ವತಃ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ . ಇವರಲ್ಲದೆ ಮಾಜಿ ಸಚಿವರಾದ ಎಸ್.ಸುರೇಶ್ ಕುಮಾರ್ , ಆರ್.ಅಶೋಕ್ , ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರಿಷ್ಠರ ಸೂಚನೆ ನೀಡಲಾಗಿದೆ. ಎಸ್.ಎ.ರಾಮದಾಸ್ , ಬಿ.ಸಿ.ನಾಗೇಶ್‌ಗೂ ವರಿಷ್ಠರು ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಸೋಮಣ್ಣ ಮತ್ತು ಆನಂದ ಸಿಂಗ್ ಅವರ ಪುತ್ರರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಹಾಲಿ ಸಚಿವರಿಗೆ ಟಿಕೆಟ್ ಸಿಗುವುದು ಕಠಿಣ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five × 4 =