Breaking News

ಬೇಡಿಕೆಗಳ ಈಡೇರಿಕೆಗೆ ಜೈನರಿಂದ ಸಿಎಂಗೆ ಮನವಿ

Spread the love

ಬೇಡಿಕೆಗಳ ಈಡೇರಿಕೆಗೆ ಜೈನರಿಂದ ಸಿಎಂಗೆ ಮನವಿ

ಯುವ ಭಾರತ ಸುದ್ದಿ ಬೆಳಗಾವಿ:
ಚಳಿಗಾಲದ ಅಧಿವೇಶನದ ಸಲುವಾಗಿ ಬೆಳಗಾವಿಗೆ ಆಗಮಿಸಿದಂತಹ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಜೈನ ಯುವ ಸಂಘಟನೆ ಪದಾಧಿಕಾರಿಗಳಿಂದ ಮನವಿ ಪತ್ರವನ್ನು ಸೋಮವಾರದಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಲ್ಲಿಸಲಾಯಿತು.
ಮನವಿ ಪತ್ರದಲ್ಲಿ ಸಮ್ಮೇದ ಶಿಖರಜಿಯನ್ನು ಪ್ರವಾಸಿ ತಾಣವಾಗಿಸುವ ನಿರ್ಧಾರವನ್ನು ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವುದು, ಜೈನ ಧರ್ಮೀಯರಿಗೆ ಮೀಸಲಾತಿ ಒದಗಿಸುವುದು, ಜೈನ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಪ್ರಾಚೀನ ಜೈನ ಬಸದಿಗಳು, ಶಾಸನಗಳು ಮತ್ತು ಅವುಗಳ ಸಂರಕ್ಷಣೆ ಮತ್ತು ನಿರ್ವಹಣೆ ಸೇರಿದಂತೆ ಇನ್ನೂ ಹಲವು ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು.

ಮುಖ್ಯಮಂತ್ರಿಗಳು ಮನವಿಗೆ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು. ಶಾಸಕ ಅಭಯ ಪಾಟೀಲ ಸೇರಿದಂತೆ ಜೈನ ಯುವ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

4 × 1 =