Breaking News

ಸಮ್ಮೇದ್ ಶಿಖರ್ಜಿ ರಕ್ಷಣೆಗೆ ಜೈನರ ಮೊರೆ

Spread the love

ಸಮ್ಮೇದ್ ಶಿಖರ್ಜಿ ರಕ್ಷಣೆಗೆ ಜೈನರ ಮೊರೆ

ಯುವ ಭಾರತ ಸುದ್ದಿ ಬೆಳಗಾವಿ :
ಜೈನರ ಪವಿತ್ರ ಸ್ಥಳ ಸಮ್ಮೇದ್ ಶಿಖರ್ ರಕ್ಷಣೆ ಮಾಡುವಂತೆ ಒತ್ತಾಯಿಸಿ ಜೈನ ಬಾಂಧವರು ಬೆಳಗಾವಿಯಲ್ಲಿಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ರವಾನಿಸಿದರು.

20 ತೀರ್ಥಂಕರರು ಮತ್ತು 20 ಕೋಟಿ ಜೈನರು ಮೋಕ್ಷ ಪಡೆದಿರುವ ಪವಿತ್ರ ಸ್ಥಳ ಸಮ್ಮೇದ ಶಿಖರ್ ಆಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ಜಾರ್ಖಂಡ್ ಸರ್ಕಾರಗಳು ಯಾವುದೇ ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ಐತಿಹಾಸಿಕ ಸ್ಥಳವನ್ನು ಮಾರ್ಪಾಡು ಮಾಡಬಾರದು. ಯಥಾವತ್ ಸ್ವರೂಪವನ್ನು ಕಾಪಾಡಿಕೊಂಡು ಹೋಗುವಂತೆ ಮನವಿ ಮಾಡಿದರು. ಬೋಗಾರವೇಸ್ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಜೈನ ಬಾಂಧವರು ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ರವಾನೆ ಮಾಡಿದರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

fourteen + 1 =