Breaking News

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ

Spread the love

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟ

ಬೆಂಗಳೂರು:
ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೨ ನೇ ಸಾಲಿನ ಕನ್ನಡ ಕಾಯಕ ದತ್ತಿ ಪ್ರಶಸ್ತಿ ಪ್ರಕಟಿಸಲಾಗಿದೆ.
ರಾಜ್ಯದ ಗಡಿಜಿಲ್ಲೆ ಬೆಳಗಾವಿಯ ಅಥಣಿಯ ಶ್ರೀ ಪ್ರಭು ಚೆನ್ನಬಸವ ಸ್ವಾಮೀಜಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶಿವಾನಂದ ಕಳವೆ ಹಾಗೂ ಹೆಲನ್ ಮೈಸೂರು ಕೊಪ್ಪಳದ ಕೆ. ಇಮಾಮಸಾಬ ಅವರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಆವರು ಪರಿಷತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಿಗೆ ನೀಡುವ ಮಾಸಿಕ ಗೌರವ ಸಂಭಾವನೆಯನ್ನು ಪರಿಷತ್ತಿನಲ್ಲಿಯೇ ದತ್ತಿ ರೂಪದಲ್ಲಿ ಇಡಲಾಗಿದೆ.

ದತ್ತಿ ದಾನಿಗಳ ಆಶಯದಂತೆ ಕನ್ನಡ ಪರ ಹೋರಾಟ ಮಾಡುತ್ತ ನಾಡು ನುಡಿಗೆ ಸೇವೆ ಸಲ್ಲಿಸಿದವರು, ನೆಲ, ಜಲ ಕುರಿತು ಕೃತಿ ರಚಿಸಿದವರು ಹಾಗೂ ಕನ್ನಡ ರಂಗಭೂಮಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಈ ಮೂವರು ಗಣ್ಯರಿಗೆ ಕನ್ನಡ ಕಾಯಕ ದತ್ತಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.

ಪ್ರಶಸ್ತಿಯು ತಲಾ ೧೦,೦೦೦ (ಹತ್ತು ಸಾವಿರ) ರೂ. ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿಯ ಶ್ರೀ ಮೋಟಗಿ ಮಠದ ಶ್ರೀಗಳಾದ ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಅವರು ಗಡಿನಾಡಿನಲ್ಲಿ ಕನ್ನಡ ಉಳಿಸಿ ಬೆಳೆಸುವುದಕ್ಕಾಗಿ ಸಮಾಜಸೇವಾ ದೀಕ್ಷೆಯೊಂದಿಗೆ ಸಾಹಿತ್ಯ ರಚನೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದು. ‘ಅಥಣೀಶ’ ಎಂಬ ಕಾವ್ಯನಾಮದಲ್ಲಿ ಕೃತಿಗಳನ್ನು ರಚಿಸಿ ಪರಿಚಿತರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಿವಾನಂದ ಕಳವೆ ಅವರು ಪರಿಸರ ಸಂರಕ್ಷಣೆ ಕುರಿತು , ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕೇಂದ್ರದಲ್ಲಿ ವಿವಿಧ ಶಿಬಿರಗಳನ್ನು ಏರ್ಪಡಿಸುವುದರ ಜೊತೆ ಸಾಹಿತ್ಯ ಕೃಷಿಯಲ್ಲಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ರಂಗಭೂಮಿಯಲ್ಲಿ ಕಳೆದ ೫ ದಶಕಗಳಿಂದ ನಿರಂತರ ತೊಡಗಿಸಿಕೊಂಡ ಹೆಲನ್ ಮೈಸೂರು ಅವರು ಆಧುನಿಕ ರಂಗಭೂಮಿಯಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸಿ ಕನ್ನಡದ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದಾರೆ. ೨೦೨೨ನೇ ಸಾಲಿನ ʻಕನ್ನಡ ಕಾಯಕ ದತ್ತಿʼ ಪ್ರಶಸ್ತಿಗಾಗಿ ಅರ್ಹರನ್ನು ಆಯ್ಕೆ ಮಾಡಲಾಗಿದೆ ಎಂದು ನಾಡೋಜ ಡಾ. ಮಹೇಶ ಜೋಶಿ ಹೇಳಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ. ಭ ರಾಮಲಿಂಗಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ. ಬಿ. ಎಂ. ಪಟೇಲ್‌ಪಾಂಡು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

5 + 8 =