Breaking News

ಇಂಡಿ ಪಟ್ಟಣದ ಸ್ವಚ್ಚತೆಗೆ ಆದ್ಯತೆ ನೀಡಲಿ

Spread the love

ಇಂಡಿ ಪಟ್ಟಣದ ಸ್ವಚ್ಚತೆಗೆ ಆದ್ಯತೆ ನೀಡಲಿ

ಯುವ ಭಾರತ ಸುದ್ದಿ ಇಂಡಿ :
ಪಟ್ಟಣದ ಸ್ವಚ್ಚತೆಗೆ ಆಧ್ಯತೆ ನೀಡಬೇಕು. ವಾರದಲ್ಲಿ ಒಂದು ದಿನವಾದರೂ ಪ್ರತಿ ವಾರ್ಡಿನಲ್ಲಿ ಫಾಗಿಂಗ್ ಸಿಂಪಡಿಸಬೇಕು ಎಂದು ಆಗ್ರಹಿಸಿ ಪಟ್ಟಣದ ನಿವಾಸಿ ಅನೀಲಕುಮಾರ ಬಿರಾದಾರ ಶನಿವಾರ ಪುರಸಭೆ ಮುಖ್ಯಾಧಿಕಾರಿ ಲಕ್ಷ್ಮೀಶ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದಾಧ್ಯಂತ ಮಕ್ಕಳಿಗೆ ಸಂಕ್ರಾಮಿಕ ರೋಗಗಳು ಹರಡುತ್ತಿದ್ದು,ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಶಾಲಾ ಆವರಣದ ಸುತ್ತಲೂ ಸ್ವಚ್ಚತೆಗೆ ಕ್ರಮ ಕೈಗೊಳ್ಳಬೇಕು. ಚರಂಡಿಗಳ ಮೇಲೆ ಸೊಳ್ಳೆ ನಿಯಂತ್ರಣ ಡಿಡಿಟಿ ಹಾಗೂ ಫಾಗಿಂಗ್ ಹೊಗೆ ಸಿಂಪಡಿಸಬೇಕು.ಒಂದು ವೇಳೆ ತಕ್ಷಣ ಕ್ರಮ ಕೈಗೊಳ್ಳದೆ ಇದ್ದರೆ ವಾರ್ಡ ನಿವಾಸಿಗಳೊಂದಿಗೆ ಪುರಸಭೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

thirteen − 6 =