ಮಹದಾಯಿ: ಶಾ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿದ ಗೋವಾ !

Spread the love

ಮಹದಾಯಿ: ಶಾ ಭೇಟಿ ಮಾಡಿ ಆಕ್ಷೇಪ ವ್ಯಕ್ತಪಡಿಸಿದ ಗೋವಾ !

ಯುವ ಭಾರತ ಸುದ್ದಿ ದೆಹಲಿ :
ಕೆಲ ದಿನಗಳ ಹಿಂದಷ್ಟೇ ಮಹದಾಯಿ ನದಿ ನೀರು ಹಂಚಿಕೆ ಕುರಿತು ಕೇಂದ್ರ ಸರಕಾರ ಡಿಪಿಆರ್‌ ಗೆ ಕರ್ನಾಟಕಕ್ಕೆ ಅನುಮತಿ ನೀಡಿತ್ತು. ಇದಕ್ಕೆ ಗೋವಾದಲ್ಲಿ ತೀವ್ರ ವಿರೋಧ ಕಂಡುಬಂದಿತ್ತು. ಕೇಂದ್ರ ಸರಕಾರಕ್ಕೆ ಈ ಬಗ್ಗೆ ವಿರೋಧ ವ್ಯಕ್ತಪಡಿಸಬೇಕು ಎಂಬ ಬಗ್ಗೆ ತೀರ್ಮಾನಿಸಲಾಗಿತ್ತು. ಇದೀಗ ಕೊನೆಗೂ ಗೋವಾ ರಾಜ್ಯದ ಉನ್ನತ ಮಠದ ನಿಯೋಗ ಕೇಂದ್ರಕ್ಕೆ ದೂರು ಒಯ್ದು ತನ್ನ ಪ್ರತಿರೋಧ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿ ಪ್ರಮೋದ್ ಸಾವಂತ್ ನೇತ್ರತ್ವದಲ್ಲಿ ಗೋವಾ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಭೇಟಿಯಾಗಿದೆ.

ಮಹದಾಯಿ ಯೋಜನೆಗೆ ಕೇಂದ್ರ ಸರಕಾರ ಡಿ ಪಿ ಆರ್ ಸಲ್ಲಿಸಲು ಒಪ್ಪಿಗೆ ನೀಡಿರುವುದನ್ನು ಗೋವಾ ಆಕ್ಷೇಪಿಸಿದೆ.

ಈ ಸಂದರ್ಭದಲ್ಲಿ ಅಮಿತ್ ಶಾ ಅವರು ದೇಖೆಂಗೆ (ನೋಡೋಣ) ಎಂದು ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿದ್ದು ಗೋವಾದವರೇ ಆಗಿರುವ ಕೇಂದ್ರ ಸಚಿವ ಶ್ರೀಪಾದ ಎಸ್ಸೋ ನಾಯಕ್ ಅವರನ್ನು ಒಳಗೊಂಡ ನಿಯೋಗ ಮಹದಾಯಿ ನದಿ ನೀರಿನ ಯೋಜನೆಯಿಂದ ಗೋವಾದಲ್ಲಿ ನೀರಿನ ಕೊರತೆ ಕಾಣಿಸಿಕೊಳ್ಳಲಿದೆ. ಹೀಗಾಗಿ ಯೋಜನೆಗೆ ನೀಡಿರುವ ಅನುಮತಿ ಹಿಂಪಡೆಯುವಂತೆ ಆಗ್ರಹಿಸಿದ್ದು ಮಹದಾಯಿ ಪ್ರಾಧಿಕಾರ ರಚಿಸುವಂತೆಯೂ ಒತ್ತಾಯಿಸಿದೆ ಎನ್ನಲಾಗಿದೆ.


Spread the love

About Yuva Bharatha

Check Also

ಸ್ಕರ್ಟ್, ಶಾರ್ಟ್ಸ್ ಹಾಕಿದ್ರೆ ದೇವಸ್ಥಾನಕ್ಕೆ ಪ್ರವೇಶವಿಲ್ಲ

Spread the loveಸ್ಕರ್ಟ್, ಶಾರ್ಟ್ಸ್ ಹಾಕಿದ್ರೆ ದೇವಸ್ಥಾನಕ್ಕೆ ಪ್ರವೇಶವಿಲ್ಲ ಮುಂಬೈ : 18 ಪ್ರಸಿದ್ಧ ದೇವಸ್ಥಾನದಲ್ಲಿ ಇದೀಗ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. …

Leave a Reply

Your email address will not be published. Required fields are marked *

5 × five =