Breaking News

ಮೊಬೈಲ್ ಕಳವು : ಪೊಲೀಸರಿಂದ ನಾಗರಿಕರಿಗೆ ಮಹತ್ವದ ಮಾಹಿತಿ !

Spread the love

ಮೊಬೈಲ್ ಕಳವು : ಪೊಲೀಸರಿಂದ ನಾಗರಿಕರಿಗೆ ಮಹತ್ವದ ಮಾಹಿತಿ !

ಯುವ ಭಾರತ ಸುದ್ದಿ ಬೆಳಗಾವಿ :
ಸಿಇಐಆರ್ ಸೌಲಭ್ಯವನ್ನು ಉಪಯೋಗಿಸಿಕೊಂಡು ಬೆಳಗಾವಿ ನಗರದಲ್ಲಿ ಕಳುವು / ಕಾಣೆಯಾದ / Mobile Snatching ಮೊಬೈಲ್‌ಗಳನ್ನು ಸಿಇಐಆರ್ ಸೌಲಭ್ಯದ ಮುಖಾಂತರ ಪತ್ತೆ ಹಚ್ಚಲಾಗುತ್ತಿದ್ದು , ಇಲ್ಲಿಯವರೆಗೆ 18 ಮೊಬೈಲ್‌ಗಳನ್ನು ಪತ್ತೆ ಹಚ್ಚಿದ್ದು ಸಾರ್ವಜನಿಕರಿಗೆ ಹಸ್ತಾಂತರಿಸಲಾಗಿರುತ್ತದೆ . ಸಾರ್ವಜನಿಕರಲ್ಲಿ ಕೋರುವುದೇನೆಂದರೆ ಇನ್ನು ಮುಂದೆ ಮೊಬೈಲ್ ಕಳುವು / ಕಾಣೆಯಾದ / Mobile Snatching ಆದ ಕೂಡಲೇ ಸಾರ್ವಜನಿಕರು ಹತ್ತಿರದ ಪೊಲೀಸ್ ಠಾಣೆಗಳಿಗೆ ಅಥವಾ ಕೆಎಸ್‌ಪಿ ( e – lost ) ಅಪ್ಲಿಕೇಷನ್ ಮುಖಾಂತರ ಪೋರ್ಟಲ್‌ನಲ್ಲಿ ಪ್ರಕರಣ ದಾಖಲಿಸುವುದು . ಸಿಇಐಆರ್‌ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಕೋರಲಾಗಿದೆ .

ಸದರಿ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಪಿಐ ಸಿಇಎನ್ ಪೊಲೀಸ್ ಠಾಣೆ ಜಾನ್ಸನ್ ಡಿಸೋಜಾ ಮತ್ತು ಅವರ ಸಿಬ್ಬಂದಿಗಳ ಕಾರ್ಯವನ್ನು ಪೊಲೀಸ್ ಆಯುಕ್ತರು ಮತ್ತು ಉಪ ಪೊಲೀಸ್ ಆಯುಕ್ತರು ಶ್ಲಾಘಿಸಿರುತ್ತಾರೆ .


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

4 × two =