Breaking News

ಮೋದಿಯವರ ನಾಯಕತ್ವ, ಬದ್ಧತೆ, ದೂರದೃಷ್ಟಿ ರಾಷ್ಟçಕ್ಕೆ ಸ್ಫೂರ್ತಿಯಾಗಿದೆ.-ರಾಜೇಂದ್ರ ಗೌಡಪ್ಪಗೋಳ.!

Spread the love

ಮೋದಿಯವರ ನಾಯಕತ್ವ, ಬದ್ಧತೆ, ದೂರದೃಷ್ಟಿ ರಾಷ್ಟçಕ್ಕೆ ಸ್ಫೂರ್ತಿಯಾಗಿದೆ.-ರಾಜೇಂದ್ರ ಗೌಡಪ್ಪಗೋಳ.!

ಗೋಕಾಕ: ನಿಜವಾದ ನಾಯಕ ತನ್ನ ಮುಂದಿರುವ ಜನರನ್ನು ಮುಂದೆ ಕರೆದೊಯ್ಯಲು ಒಂದು ಬಲವಾದ ದೃಷ್ಟಿ ಹೊಂದಿರಬೇಕು ಪ್ರಧಾನಮಂತ್ರಿ ನರೇಂದ್ರ ಮೋದಿಯವರಲ್ಲಿ ಆ ದೃಷ್ಟಿಕೋನವಿದೆ ಎಂದು ಬಿಜೆಪಿ ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಹೇಳಿದರು.
ಅವರು, ಶನಿವಾರದಂದು ನಗರದ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಿAದ ಸೇವಾ ಪಾಕ್ಷೀಕ ಕಾರ್ಯಕ್ರಮದಡಿ ಪ್ರಧಾನಿ ನರೇಂದ್ರ ಮೋದಿಯವರ ೭೨ನೇ ಜನ್ಮ ದಿನಾಚರಣೆ ಮತ್ತು ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ, ಬದ್ಧತೆ, ದೂರದೃಷ್ಟಿ ರಾಷ್ಟçಕ್ಕೆ ಸ್ಫೂರ್ತಿಯಾಗಿದೆ. ವಿಶ್ವದ ಪ್ರಭಾವಿ ನಾಯಕರಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರಿಗೆ ಬಿಜೆಪಿ ನಾಯಕರು, ಕಾರ್ಯಕರ್ತರಷ್ಟೇ ಅಲ್ಲ, ಅದರ ಹೊರತಾಗಿಯೂ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ ಹೀಗಾಗಿ ಮೋದಿಯವರು ವಿಶ್ವದ ಅಗ್ರಗಣ್ಯ ನಾಯಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದರು.
ಕಾರ್ಯಕ್ರಮವನ್ನು ಯುವ ನಾಯಕ, ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಭಾರತಮಾತೇಯ ಭಾವಚಿತ್ರಕ್ಕೆ ಮತ್ತು ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವದರೊಂದಿಗೆ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಶಾಸಕರ ಆಪ್ತ ಸಹಾಯಕ ಸುರೇಶ ಸನದಿ, ಬಿಜೆಪಿ ಮುಖಂಡರುಗಳಾದ ಶಾಮಾನಂದ ಪೂಜೇರಿ, ಶಕೀಲ ಧಾರವಾಡಕರ, ಚಿದಾನಂದ ದೇಮಶೆಟ್ಟಿ, ಲಕ್ಕಪ್ಪ ತಹಶೀಲದಾರ, ಪ್ರಮೋದ ಜೋಶಿ, ಲಕ್ಷö್ಮಣ ತಳ್ಳಿ, ಯುವ ಮೋರ್ಚಾ ಪದಾಧಿಕಾರಿಗಳಾದ ಆನಂದ ಅತ್ತುಗೋಳ, ವಿರೇಂದ್ರ ಎಕ್ಕೇರಿಮಠ, ಅಶೋಕ ಸಣ್ಣಶೆಟ್ಟಿ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ರಾಜೇಶ್ವರಿ ಒಡೆಯರ, ರೇಣುಕಾ ಚೌಗಲಾ, ಮಂಜುಳಾ ಗೋರಗುದ್ದಿ, ಶ್ರೀದೇವಿ ತಡಕೋಡ, ಸವಿತಾ ಪಾಟೀಲ, ಗೀತಾ ಕಂಬಾರ, ಪಾರ್ವತಿ ಹಳ್ಳೂರ, ವಿಜಯಲಕ್ಷಿö್ಮÃ ಬಿಜಾಪೂರೆ, ಸವಿತಾ ಪಟ್ಟಣಶೆಟ್ಟಿ, ಮಾಲತಿ ಪಟ್ಟಣಶೆಟ್ಟಿ, ರತ್ನಾ ಪೂಜೇರಿ, ಶಾಲಾಬಾಯಿ ಕೌಜಲಗಿ, ಭಾರತಿ ಅಂಗಡಿ, ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

eleven − seven =