Breaking News

ಮುರಗೋಡ : ನಿವೃತ್ತ ಮುಖ್ಯ ಶಿಕ್ಷಕ ಡಿ.ವೈ. ಹೊಂಗಲ ಅವರಿಗೆ ಸನ್ಮಾನ

ಮುರಗೋಡ : ನಿವೃತ್ತ ಮುಖ್ಯ ಶಿಕ್ಷಕ ಡಿ.ವೈ. ಹೊಂಗಲ ಅವರಿಗೆ ಸನ್ಮಾನ ಮುರಗೋಡ : ಬದುಕಿನಲ್ಲಿ ಜನ ಹಿತ ಬಯಸುವಪ್ರವೃತ್ತಿಬೆಳೆಸಿಕೊಂಡು ಪ್ರಾಮಾಣಿಕವಾಗಿ ಕಾರ್ಯನಿಭಾಯಿಸಿದಲ್ಲಿ ಜನಮನ್ನಣೆ ಗಳಿಸಲು ಸಾಧ್ಯವಿದೆ ಎಂದು ಹಿರಿಯ ಶಿಕ್ಷಕ ಎಂ.ಕೆ. ಪಾಟೀಲ ಹೇಳಿದರು. ಸರಕಾರಿ ಹಿರಿಯ ಮಾದರಿ ಶಾಲೆಯಲ್ಲಿ ಶಿಕ್ಷಕ-ಶಿಕ್ಷಕಿಯರ ವೃಂದ ಹಾಗೂ ಶಿಷ್ಯ ಬಳಗದ ವತಿಯಿಂದ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಹಿಮಾಪ್ರಾ ಶಾಲೆಯಲ್ಲಿ ಕಾರ್ಯ ನಿರ್ವಹಿಸಿದ್ದ ಮುಖ್ಯ ಶಿಕ್ಷಕ ಡಿ.ವೈ. ಹೊಂಗಲ ಅವರು ನಿವೃತ್ತಿ ಹೊಂದಿದ್ದರ …

Read More »

ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಒದಗಿಸಲು ಅರ್ಜಿ ಆಹ್ವಾನ

ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಒದಗಿಸಲು ಅರ್ಜಿ ಆಹ್ವಾನ ಬೆಳಗಾವಿ : ಪ್ರಸಕ್ತ ಸಾಲಿನ ಇಲಾಖೆಯ ಎಸ್.ಎಸ್.ಎಲ್.ಸಿ.ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಲಿಪಿ ಒದಗಿಸುವ ಯೋಜನೆಯಡಿ ಬ್ರೈಲ್ ಲಿಪಿ ಕಿಟ್‌ಗಳನ್ನು ಒದಗಿಸಲು ಬೆಳಗಾವಿ ಜಿಲ್ಲೆಯ ಅಂಧ ವಿದ್ಯಾರ್ಥಿಗಳಿಂದ ಮರು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾಖಲಾತಿಗಳು: ವಿಕಲಚೇತನರ ಯು.ಡಿ.ಐ.ಡಿ. ಕಾರ್ಡ (ಕನಿಷ್ಠ ಶೇ.4೦ ರಷ್ಟು ಅಂಗವಿಕಲತೆ), ತಹಸೀಲ್ದಾರ್ ರವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ, ವ್ಯಾಸಂಗ ಮಾಡುತ್ತಿರುವ ಬಗ್ಗೆ ಶಾಲೆ/ …

Read More »

ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ವಿಕಲಚೇತನರಿಗೆ ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ ಬೆಳಗಾವಿ : ಪ್ರಸಕ್ತ ಸಾಲಿನ ಇಲಾಖೆಯ ಹೊಲಿಗೆ ಯಂತ್ರ ಯೋಜನೆಯಡಿ ಉಳಿಕೆ ಇರುವ ಹೊಲಿಗೆ ಯಂತ್ರಗಳನ್ನು ಅಕ್ಷರಸ್ಥರಾಗಿರುವ ಶ್ರವಣ ದೋಷವುಳ್ಳ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮರು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾಖಲಾತಿಗಳು : ವಿಕಲಚೇತನರ ಯು.ಡಿ.ಐ.ಡಿ. ಕಾರ್ಡ (ಕನಿಷ್ಠ ಶೇ.40 ರಷ್ಟು ಅಂಗವಿಕಲತೆ), ತಹಸೀಲ್ದಾರ್ ಅವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ, ವಿದ್ಯಾರ್ಹತೆ ಹೊಂದಿರುವ ಬಗ್ಗೆ ಪ್ರಮಾಣ ಪತ್ರ /ಟಿ.ಸಿ.ಆದಾಯ ಮತ್ತು …

Read More »

ಹಿರೇಬೂದನೂರ : ಬಾಳುಮಾಮಾ ಜಾತ್ರೆ ಸಮಾರೋಪ

ಹಿರೇಬೂದನೂರ : ಬಾಳುಮಾಮಾ ಜಾತ್ರೆ ಸಮಾರೋಪ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀಸದ್ಗುರುಸಂತಬಾಳು ಮಾಮಾ ಜಾತ್ರೆ ಸಡಗರದಿಂದ ಸಮಾರೋಪಗೊಂಡಿತು. ಜಾತ್ರೆ ನಿಮಿತ್ತ ವಿಶೇಷ ಪೂಜೆ, ನಾಮಜಪ, ಡೊಳ್ಳಿನ ವಾಲಗ, ಮಹಾ ರುದ್ರಾಭಿಷೇಕ, ಮಂತ್ರಪಠಣ, ಸಹಸ್ರ ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಹಾ ಮಂಗಳಾರತಿ, ನೈವೇದ್ಯ, ತೀರ್ಥಪ್ರಸಾದ ವಿತರಣೆ, ಪಲ್ಲಕ್ಕಿ ಉತ್ಸವ, ಕುಂಭ ಮೇಳ, ಡೊಳ್ಳು ಕುಣಿತ, ಭಂಡಾರ ಎರಚಾಟ, ಡೊಳ್ಳಿನ ಪದ, ಟಗರಿನ ಕಾಳಗ, ಮಹಾಪ್ರಸಾದ ವಿತರಣೆ,ಸೇವೆಸಲ್ಲಿಸಿದ ಭಕ್ತರ ಸನ್ಮಾನ ಸೇರಿದಂತೆ ನಾನಾಧಾರ್ಮಿಕ …

Read More »

ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ಸಿಗಲಿ

ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ಸಿಗಲಿ ವಿಶ್ವಸಂಸ್ಥೆ : ಭಾರತ, ಬ್ರೆಜಿಲ್, ಜರ್ಮನಿ, ಜಪಾನ್ ಹಾಗೂ ಆಫ್ರಿಕಾ ದೇಶಗಳ ಪ್ರಾತಿನಿಧ್ಯಕ್ಕಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯ ಸ್ಥಾನಗಳನ್ನು ಹೆಚ್ಚಿಸುವಂತೆ ಬ್ರಿಟನ್‌ ಕರೆ ನೀಡಿದೆ. ಭದ್ರತಾ ಮಂಡಳಿಯ ಸುಧಾರಣೆಗೆ ಇದು ಸಕಾಲವೆಂದು ಹೇಳಿದೆ. ವಿಶ್ವಸಂಸ್ಥೆಯಲ್ಲಿನ ಬ್ರಿಟನ್‌ ಕಾಯಂ ಪ್ರತಿನಿಧಿ ಮತ್ತು ಭದ್ರತಾ ಮಂಡಳಿಯ ಜುಲೈ ತಿಂಗಳ ಅಧ್ಯಕ್ಷತೆ ವಹಿಸಿರುವ ರಾಯಭಾರಿ ಬಾರ್ಬರಾ ವುಡ್‌ವರ್ಡ್ ಅವರು, ಭದ್ರತಾ ಮಂಡಳಿಯ ಜುಲೈ …

Read More »

ಗುರುವಿನ ಮಾರ್ಗದರ್ಶನದಂತೆ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ

ಗುರುವಿನ ಮಾರ್ಗದರ್ಶನದಂತೆ ಜೀವನದಲ್ಲಿ ಮುನ್ನಡೆಯಬೇಕು: ಕಿರಣ ಜಾಧವ ಬೆಳಗಾವಿ : ಜೀವನದಲ್ಲಿ ಗುರುವಿಗೆ ವಿಶಿಷ್ಟವಾದ ಪ್ರಾಮುಖ್ಯತೆ ಇದೆ. ಆದ್ದರಿಂದಲೇ ಪ್ರತಿಯೊಬ್ಬರು ಗುರುವಿನ ಮಾರ್ಗದರ್ಶನ ಪಡೆದು ಯಶಸ್ಸಿನ ಶಿಖರವನ್ನೇರಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಕಿರಣ ಜಾಧವ ಹೇಳಿದರು. ಗಣಾಚಾರಿ ಗಲ್ಲಿಯ ಶ್ರೀ ದತ್ತ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದರು. ಗುರು ಪೂರ್ಣಿಮೆ ನಿಮಿತ್ತ ಶ್ರೀ ದತ್ತ ದೇವಸ್ಥಾನದಲ್ಲಿ ಪೂಜೆ, ಮಹಾ ಆರತಿ ನೆರವೇರಿಸಲಾಯಿತು. ಮಿತ್ರ ಮಂಡಲದ …

Read More »

ದಕ್ಷ, ಪ್ರಾಮಾಣಿಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಜಿಪಂ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ

ದಕ್ಷ, ಪ್ರಾಮಾಣಿಕ ಅಧಿಕಾರಿ ಬಸವರಾಜ ಹೆಗ್ಗನಾಯಕ ಜಿಪಂ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕಾರ ಬೆಳಗಾವಿ: ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಆಗಿರುವ ಬಸವರಾಜ ಹೆಗ್ಗನಾಯಕ ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಆಡಳಿತ ವಿಭಾಗದ ಉಪಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು. ವಿಜಯನಗರ ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿಯಾಗಿ ವರ್ಗಾವಣೆಗೊಂಡ ಭೀಮಪ್ಪ ಲಾಳಿ ಅವರ ಜಾಗಕ್ಕೆ ಬಸವರಾಜ ಹೆಗ್ಗನಾಯಕ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲಾ ಪಂಚಾಯತ್‌ನಲ್ಲಿ ಅಭಿವೃದ್ಧಿ ವಿಭಾಗದಲ್ಲಿ ಉಪಕಾರ್ಯದರ್ಶಿಯಾಗಿ ಬಸವರಾಜ ಹೆಗ್ಗನಾಯಕ …

Read More »

ಅಕ್ಕತಂಗೇರಹಾಳದಲ್ಲಿ ಜೋಡಿ ಕೊಲೆ

ಅಕ್ಕತಂಗೇರಹಾಳದಲ್ಲಿ ಜೋಡಿ ಕೊಲೆ ಬೆಳಗಾವಿ : ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಕತಂಗೇರಹಾಳದಲ್ಲಿ ಮಂಗಳವಾರ ಜೋಡಿ ಕೊಲೆ ನಡೆದಿದೆ. ಅಕ್ಕತಂಗೇರಹಾಳ ಗ್ರಾಮದ ಮಲ್ಲಿಕಾರ್ಜುನ ಜಗದಾರ(40) ಹಾಗೂ ರೇಣುಕಾ ಮಾಳಗಿ (42) ಹತ್ಯೆಗೀಡಾದವರು. ಕೊಲೆಗೈದ ವ್ಯಕ್ತಿ ಯಲ್ಲಪ್ಪ ಮಾಳಗಿ(45) ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಗೆ ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಅಕ್ರಮ ಸಂಬಂಧ ಶಂಕಿಸಿ ಪತಿ ಯಲ್ಲಪ್ಪ ಮನೆಯಲ್ಲಿದ್ದ ರೇಣುಕಾಳನ್ನು ಕೊಲೆ ಮಾಡಿದ್ದಾನೆ. ನಂತರ ಅಲ್ಲಿಂದ ಮಲ್ಲಿಕಾರ್ಜುನ ಮನೆಗೆ ಹೋಗಿದ್ದಾನೆ. …

Read More »

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರವ

ಸಿಪಿಐ ಶ್ರೀಶೈಲ ಬ್ಯಾಕೋಡ್‌ಗೆ ಐರನ್ ಮ್ಯಾನ್ ಗೌರವ ಗೋಕಾಕ : ಖಜಕಿಸ್ತಾನದಲ್ಲಿ ನಡೆದ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೂಡಲಗಿ ಪೊಲೀಸ್ ಠಾಣೆಯ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರು ಐರನ್ ಮ್ಯಾನ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯ ಮೊದಲ ಅಧಿಕಾರಿ ಹಾಗೂ ನಾಡಿನ ಹೆಮ್ಮೆಯ ಅಧಿಕಾರಿಯಾಗಿ ರಾಜ್ಯ ಪೊಲೀಸ್ ಇಲಾಖೆಯ ಕೀರ್ತಿ ಇಮ್ಮಡಿಗೊಳಿಸಿದ್ದಾರೆ. ಸುಮಾರು ೬೪ ದೇಶದ ಸ್ಪರ್ಧಿಗಳಲ್ಲಿ ಸಿಪಿಐ ಶ್ರೀಶೈಲ ಕೂಡ ಭಾಗವಹಿಸಿ ಸ್ಪರ್ಧೆಯಲ್ಲಿ ೩.೮ …

Read More »

ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದ ಸಾರ್ವಜನಿಕ ಗ್ರಂಥಾಲಯ : ಫಿಲಿಫೈನ್ಸ್‌ನ 39 ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭದಲ್ಲಿ ಡಾ.ಸತೀಶ್‌ಕುಮಾರ

ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದ ಸಾರ್ವಜನಿಕ ಗ್ರಂಥಾಲಯ : ಫಿಲಿಫೈನ್ಸ್‌ನ 39 ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಸೌರಭದಲ್ಲಿ ಡಾ.ಸತೀಶ್‌ಕುಮಾರ ಬೆಳಗಾವಿ : ನಮ್ಮ ಕರ್ನಾಟಕ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ಅತೀ ಕಡಿಮೆ ಅವಧಿಯಲ್ಲಿ ಸುಮಾರು ೩.೫೦ ಕೋಟಿ ಜನ ಓದುಗರು ನೋಂದಣಿಯಾಗಿ ದಾಖಲೆ ನಿರ್ಮಿಸಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್‌ಕುಮಾರ ಹೊಸಮನಿ ಹೇಳಿದರು. ಫಿಲಿಫೈನ್ಸ್‌ನ ಬರ್ಜ್ಯಾಯ್ ಬ್ಯಾಂಕ್ವೆಟ್ ಹಾಲ್, …

Read More »