ಸಂತಿಬಸ್ತವಾಡ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂತಿ ಬಸ್ತವಾಡ : ಸಂತಿಬಸ್ತವಾಡ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಸುಭಾಷ ನಾಯಕ ಲೋಕೊಪಯೋಗಿ ಇಲಾಖೆಯ ಇಂಜಿನಿಯರ್ ಕಾರ್ಯ ನಿರ್ವಹಿಸಿದರು. ಅಧ್ಯಕ್ಷರಾಗಿ ಲಕ್ಷ್ಮೀ ಪರಶುರಾಮ ಚನ್ನಿಕುಪ್ಪಿ ಮತ್ತು ಮಲ್ಪೂರಿ ಕಲ್ಲಪ್ಪ ಜಿಡ್ಡಿಮನಿ ಉಪಾಧ್ಯಕ್ಷರಾಗಿ ಜಯ ಗಳಿಸಿದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಭಾರತೀಯ ಜನತಾ ಪಾರ್ಟಿಯ ಪ್ಯಾನಲ್ ನವರು ಆಯ್ಕೆ ಆದರು. ರಮೇಶ ಜಾರಕಿಹೊಳಿರವರ …
Read More »ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಗೋಕಾಕ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.!
ಅಂತರಾಜ್ಯ ಕಳ್ಳರನ್ನು ಬಂಧಿಸಲು ಸಫಲರಾದ ಪೋಲಿಸರು, 55.60ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ.! ಗೋಕಾಕ: ಕಳೆದ ವರ್ಷ ನಡೆದ ಗೋಕಾಕ ತಾಲೂಕಿನ ಹಲವೆಡೆ ನಡದ ಕಳ್ಳತನ ಪ್ರಕರಣ ಭೇದಿಸುವಲ್ಲಿ ಗೋಕಾಕ ವೃತ್ತ ಪೋಲಿಸರು ಸಫಲರಾಗಿದ್ದು, ಅಂತರಾಜ್ಯ ಕಳ್ಳರನ್ನು ಬಂಧಿಸಿ 55.60ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ 11-11-2022ರಂದು ವಿವೇಕಾನಂದ ನಗರದ ಪ್ರಕಾಶ ಲಕ್ಷö್ಮಣ ತೋಳಿನವರ ಹಾಗೂ 23-05-2023ರಂದು ತವಗ ಗ್ರಾಮದ ಶ್ರೀ ಬೀರೇಶ್ವರ ದೇವಸ್ಥಾನದಲ್ಲಿ ಚಿನ್ನಾಭರಣ ಕಳ್ಳತನ ನಡೆದಿತ್ತು. …
Read More »ಹದಗೆಟ್ಟ ವೇದಾಂತನ ಆರೋಗ್ಯ : ಸಹಾಯ ಮಾಡಲು ಪೋಷಕರ ಮೊರೆ
ಹದಗೆಟ್ಟ ವೇದಾಂತನ ಆರೋಗ್ಯ : ಸಹಾಯ ಮಾಡಲು ಪೋಷಕರ ಮೊರೆ ಬೆಳಗಾವಿ : ಸವದತ್ತಿ ತಾಲೂಕು ಮಬನೂರ ಗ್ರಾಮದ ಫಕೀರಪ್ಪ ಈರಪ್ಪ ನರಿ ಅವರ ಪುತ್ರ ವೇದಾಂತ್ ಫಕೀರಪ್ಪ ನರಿ ಅವರ ಆರೋಗ್ಯ ಹದಗೆಟ್ಟಿದೆ. ಇವರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕೆ ಧನಸಹಾಯ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ. ವೇದಾಂತ ಆರೋಗ್ಯದಲ್ಲಿ ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ತೊಂದರೆಯಾಗಿದೆ. ಮಗು ಬೆಂಗಳೂರಿನ ನಾರಾಯಣ ಹೃದಯಾಲಯ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಗು …
Read More »ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ
ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ದುರ್ಮರಣ ಬೆಳಗಾವಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ತಗುಲಿ ಯುವಕ ಮೃತಪಟ್ಟ ಘಟನೆ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ. ಆಕಾಶ ಶಿವದಾಸ್ ಸಂಕಪಾಳ (27) ಎಂಬ ಯುವಕ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ತಗುಲಿ ಮೃತ ಪಟ್ಟಿದ್ದಾನೆ ಎಂದು ಆತನ ತಂದೆ ಶಿವದಾಸ್ ಬಳವಂತ ನಿಪ್ಪಾಣಿ …
Read More »ಲಿಂಗರಾಜ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ : ಭಾರತ ಸಾರ್ವಭೌಮತ್ವಕ್ಕೆ ಧಕ್ಕೆ ಬಂದರೆ ಸಹಿಸಲಾರದು : ಚೆನ್ನಪ್ಪಗೋಳ
ಲಿಂಗರಾಜ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ : ಭಾರತ ಸಾರ್ವಭೌಮತ್ವಕ್ಕೆ ಧಕ್ಕೆ ಬಂದರೆ ಸಹಿಸಲಾರದು : ಚೆನ್ನಪ್ಪಗೋಳ ಬೆಳಗಾವಿ : ಭಾರತ ಇಲ್ಲಿಯವರೆಗೆ ಯಾವ ದೇಶದ ಮೇಲೆಯೂ ದಾಳಿ ಮಾಡಿಲ್ಲ. ಆದರೆ ತನ್ನ ಮೇಲೆ ದಾಳಿ ಮಾಡಿದ ವೈರಿಗಳನ್ನು ತಿರುಗಿ ನೋಡುವಂತೆ ಪಾಠ ಕಲಿಸಿದೆ ಎಂದು ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ.ಎಚ್.ಎಂ.ಚೆನ್ನಪ್ಪಗೋಳ ಹೇಳಿದರು. ಲಿಂಗರಾಜ ಕಾಲೇಜಿನಲ್ಲಿ ಎನ್ಸಿಸಿ ಹಾಗೂ ಎನ್ಎಸ್ಎಸ್ ಘಟಕದಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ ದಿವಸ್ದ 24 ನೇ …
Read More »ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ
ಬೆಳಗಾವಿ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ ಬೆಳಗಾವಿ : ಬೆಂಗಳೂರಿನ ಐಎಫ್ಐಎಂ ಕಾನೂನು ಶಾಲೆಯು ಏರ್ಪಡಿಸಿದ್ದ ರಾಷ್ಟ್ರೀಯ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಬೆಳಗಾವಿಯ ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಜೇತರಾಗಿ ಸಾಧನೆ ಮೆರೆದಿದ್ದಾರೆ. ದೇಶದಾದ್ಯಂತ 34 ಕ್ಕೂ ಹೆಚ್ಚು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಬೆಂಗಳೂರಿನ ಕ್ರೈಸ್ಟ್ ಯೂನಿವರ್ಸಿಟಿ ಮತ್ತು ಬೆಳಗಾವಿಯ ಆರ್ಎಲ್ ಕಾನೂನು ಕಾಲೇಜು ನಡುವೆ …
Read More »ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿ
ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿ ಬೆಳಗಾವಿ : ವಿದ್ಯಾರ್ಥಿಗಳು ತಮ್ಮ ಕ್ರೀಡಾ ಕೌಶಲವನ್ನು ಅಭಿವೃದ್ಧಿಪಡಿಸಲು ವಿಶ್ವವಿದ್ಯಾಲಯ ನೀಡುವ ಸೌಲಭ್ಯಗಳನ್ನು ಬಳಸಿಕೊಳ್ಳುವಂತೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ.ಜಗದೀಶ ಗಸ್ತಿ ಸಲಹೆ ನೀಡಿದರು. ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಮತ್ತು ಕೆಎಲ್ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯಗಳು ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಂಡ ಅಂತರ ಕಾಲೇಜು ಟೇಬಲ್ ಟೆನಿಸ್ …
Read More »ಪೊಲೀಸರಿಗೆ ಸಿಹಿ ಸುದ್ದಿ
ಪೊಲೀಸರಿಗೆ ಸಿಹಿ ಸುದ್ದಿ ಬೆಂಗಳೂರು : ತಮ್ಮ ಹುಟ್ಟುಹಬ್ಬ ದಿನ ಕುಟುಂಬದವರಿಗೆ ಸಮಯ ನೀಡಲಾಗದೆ ಪರದಾಡುತ್ತಿದ್ದ ಪೊಲೀಸರಿಗೆ ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಶುಭಸುದ್ದಿ ನೀಡಿದ್ದಾರೆ. ಸದ್ಯಕ್ಕೆ ಇದು ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವ್ಯಾಪ್ತಿಯಲ್ಲಿ ಜಾರಿಗೆ ಬರಲಿದೆ. ಇನ್ನು ಮುಂದೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲು ಒಂದು ದಿನ ರಜೆ ನೀಡುವ ನಿರ್ಧಾರಕ್ಕೆ ಬೆಂಗಳೂರು ಆಯುಕ್ತರು ಬಂದಿದ್ದು ಆಗಸ್ಟ್ 1 …
Read More »ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ
ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ಪ್ರತಿಪಕ್ಷ ನಾಯಕ ಬೆಂಗಳೂರು : ಸಿ.ಟಿ. ರವಿ ಪಕ್ಷದ ರಾಜ್ಯಾಧ್ಯಕ್ಷರಾಗಬೇಕು, ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಪಕ್ಷ ನಾಯಕರಾಗಬೇಕು ಎಂಬ ಚರ್ಚೆ ಬಿಜೆಪಿ ಸಭೆಯಲ್ಲಿ ಆಗಿದೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಚ್. ಡಿ. ಕುಮಾರಸ್ವಾಮಿ ಪ್ರತಿಪಕ್ಷ ನಾಯಕರಾಗುತ್ತಾರೆ ಎಂಬ ಸುದ್ದಿ ಇದೆಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕುಮಾರಸ್ವಾಮಿ …
Read More »ಗುಡ್ಡ ಕುಸಿತ, ಪ್ರವಾಹ ಮುನ್ಸೂಚನೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ
ಗುಡ್ಡ ಕುಸಿತ, ಪ್ರವಾಹ ಮುನ್ಸೂಚನೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ ಬೆಳಗಾವಿ : ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಖಾನಾಪುರ ಸೇರಿದಂತೆ ಜಿಲ್ಲೆಯ ಜನರು ಕೂಡ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್)ದ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಬೆಳಗಾವಿ ಜಿಲ್ಲೆಯ …
Read More »
YuvaBharataha Latest Kannada News