Breaking News

ಪ್ರಧಾನಿ ಮೋದಿಗಾಗಿ ಅಭಿಮಾನಿಯಿಂದ ಉಡುಪಿ ಕೃಷ್ಣನಿಗೆ ವಜ್ರ ಕವಚ ಸೇವೆ

ಪ್ರಧಾನಿ ಮೋದಿಗಾಗಿ ಅಭಿಮಾನಿಯಿಂದ ಉಡುಪಿ ಕೃಷ್ಣನಿಗೆ ವಜ್ರ ಕವಚ ಸೇವೆ ಉಡುಪಿ : ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಬೇಕು ಹಾಗೂ ಅವರ ಆರೋಗ್ಯ ವೃದ್ಧಿಯಾಗಬೇಕು ಎಂದು ಪ್ರಾರ್ಥಿಸಿ, ಮೋದಿ ಅಭಿಮಾನಿಯೊಬ್ಬರು ಉಡುಪಿ ಶ್ರೀ ಕೃಷ್ಣ ದೇವರಿಗೆ ವಜ್ರಕವಚ ಸೇವೆ ಸಲ್ಲಿಸಿದ್ದಾರೆ. ದೇಶದ 21 ವಿರೋಧ ಪಕ್ಷಗಳು ಜೊತೆಗೂಡಿ ಮೋದಿ ಅವರನ್ನು ಸೋಲಿಸಲು ತಂತ್ರ ಹೆಣೆದಿವೆ. ಮೋದಿ ಅವರ ಆಡಳಿತದಲ್ಲಿ ದೇಶ ಸುಭದ್ರವಾಗುತ್ತಿದೆ. ಆದ್ದರಿಂದ ಮುಂದಿನ ಲೋಕಸಭಾ …

Read More »

ಬೆಳಗಾವಿ ಬಿ.ವಿ..ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜನೆ

ಬೆಳಗಾವಿ ಬಿ.ವಿ..ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ ಅಂತರ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾವಳಿ ಆಯೋಜನೆ ಬೆಳಗಾವಿ : ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹಾಗೂ ಕೆಎಲ್‌ಇ ಸಂಸ್ಥೆಯ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯಗಳ ವತಿಯಿಂದ ಮಂಗಳವಾರ ಅಂತರ ಕಾಲೇಜು ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು (ಪುರುಷ ಮತ್ತು ಮಹಿಳೆಯರು) ಆಯೋಜಿಸಿತ್ತು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಟೇಬಲ್ ಟೆನ್ನಿಸ್ ಸಂಸ್ಥೆ ಉಪಾಧ್ಯಕ್ಷರು ಮತ್ತು ಬೆಳಗಾವಿ ಜಿಲ್ಲಾ ಟೇಬಲ್ ಟೆನ್ನಿಸ್ ಸಂಸ್ಥೆ ಗೌರವ ಕಾರ್ಯದರ್ಶಿ …

Read More »

ಖಾನಾಪುರ : ಶಾಲಾ-ಕಾಲೇಜುಗಳಿಗೆ ಇಂದು ಸಹಾ ರಜೆ ಘೋಷಣೆ

ಖಾನಾಪುರ : ಶಾಲಾ-ಕಾಲೇಜುಗಳಿಗೆ ಇಂದು ಸಹಾ ರಜೆ ಘೋಷಣೆ ಖಾನಾಪುರ : ಖಾನಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣಕ್ಕೆ ಮಂಗಳವಾರ (ಜುಲೈ 25 ರಂದು) ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Read More »

ವ್ಯಾಪಕ ಮಳೆ: ಖಾನಾಪುರ, ಬೆಳಗಾವಿ, ಕಿತ್ತೂರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ವ್ಯಾಪಕ ಮಳೆ: ಖಾನಾಪುರ, ಬೆಳಗಾವಿ, ಕಿತ್ತೂರ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ …

Read More »

ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಗ್ರಂಥಾಲಯ ಆ್ಯಪ್ ಬಿಡುಗಡೆ!

ವಿದ್ಯಾರ್ಥಿಗಳಿಗೆ, ವಿವಿ ಬಳಕೆದಾರರಿಗೆ ಮಾಹಿತಿ ಲಭ್ಯತೆಗೆ ಬಹಳ ಅನುಕೂಲ: ಡಾ.ಅಶೋಕ ಶೆಟ್ಟರ್ ಯುವ ಭಾರತ ಸುದ್ದಿ ಬೆಳಗಾವಿ: ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯವು ಗ್ರಂಥಾಲಯ ವಿಭಾಗದ ಹೊಸ ಮೊಬೈಲ್ ಅಪ್ಲಿಕೇಶನ್ ಆ್ಯಪ್ ಆರಂಭಿಸಿದ್ದು, ವಿದ್ಯಾರ್ಥಿಗಳಿಗೆ ಮತ್ತು ವಿವಿ ಬಳಕೆದಾರರಿಗೆ ಮಾಹಿತಿ ಲಭ್ಯತೆಗೆ ಬಹಳ ಅನುಕೂಲವಾಗಿದೆ ಎಂದು ಕೆಎಲ್‌ಇ. ಸಂಸ್ಥೆಯ ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ.ಅಶೋಕ ಶೆಟ್ಟರ್ ಹೇಳಿದರು. ನಗರದ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎಂ.ಎಸ್.ಶೇಷಗಿರಿ ಕಾಲೇಜು ಆಫ್ ಇಂಜನಿಯರಿಂಗ್ ಮತ್ತು …

Read More »

ಖಾನಾಪುರ: ಶಾಲೆಗಳಿಗೆ ಶನಿವಾರ(ಜು.22) ರಜೆ ಘೋಷಣೆ

ಖಾನಾಪುರ: ಶಾಲೆಗಳಿಗೆ ಶನಿವಾರ(ಜು.22) ರಜೆ ಘೋಷಣೆ ಬೆಳಗಾವಿ : ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಶನಿವಾರ (ಜು‌.22) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ. ಫಾಲ್ಸ್ ಭೇಟಿಗೆ ನಿರ್ಬಂಧ: ಖಾನಾಪುರ ತಾಲ್ಲೂಕಿನ ಚಿಕಲೆ, ಪಾರವಾಡ ಹಾಗೂ …

Read More »

ಸಿಬ್ಬಂಧಿಗಳನ್ನು ಸ್ವಂತ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಗುಜನಾಳ ಅರಣ್ಯ ಅಧಿಕಾರಿ ಅಮೃತ ಗುಂಡೋಸಿ!!

ಸಿಬ್ಬಂಧಿಗಳನ್ನು ಸ್ವಂತ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಗುಜನಾಳ ಅರಣ್ಯ ಅಧಿಕಾರಿ ಅಮೃತ ಗುಂಡೋಸಿ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಗುಜನಾಳ ವಲಯ ಅರಣ್ಯ ಇಲಾಖೆ ಸಿಬ್ಬಂಧಿಗಳನ್ನು ಬಲವಂತವಾಗಿ ಗುಜನಾಳ ಅರಣ್ಯ ವಲಯ ಅಧಿಕಾರಿ ತಮ್ಮ ಖಾಸಗಿ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಗುಜನಾಳ ಅರಣ್ಯ ಅಧಿಕಾರಿ ಅಮೃತ ಗುಂಡೋಸಿ ಗುಜನಾಳ ಅರಣ್ಯ ವಲಯ ಅಧಿಕಾರಿ ಅಮೃತ ಗುಂಡೋಸಿ ಕಳೆದ ಎರಡು ವರ್ಷಗಳಿಂದ ಗುಜನಾಳ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು …

Read More »

ಬೆಳಗಾವಿ ಲಿಂಗರಾಜ ಮಹಾವಿದ್ಯಾಲಯ : ಸಂಪೋಷಿತ ಪರಿಸರ ಅಭಿವೃದ್ಧಿ ಕುರಿತ ವಿಚಾರ ಸಂಕಿರಣ ಸಂಪನ್ನ

ಬೆಳಗಾವಿ ಲಿಂಗರಾಜ ಮಹಾವಿದ್ಯಾಲಯ : ಸಂಪೋಷಿತ ಪರಿಸರ ಅಭಿವೃದ್ಧಿ ಕುರಿತ ವಿಚಾರ ಸಂಕಿರಣ ಸಂಪನ್ನ ಬೆಳಗಾವಿ : ಜಾಗತಿಕ ತಾಪಮಾನಕ್ಕೆ ಮನುಷ್ಯ ಎಸಗುತ್ತಿರುವ ಮಿತಿಮೀರಿದ ಚಟುವಟಿಕೆಗಳೇ ನೇರ ಕಾರಣ ಎಂದು ಬೆಳಗಾವಿಯ ಖ್ಯಾತ ಪರಿಸರವಾದಿ ಶಿವಾಜಿ ಕಾಗಣೇಕರ ಕಳವಳ ವ್ಯಕ್ತಪಡಿಸಿದರು. ನಗರದ ಲಿಂಗರಾಜ ಮಹಾವಿದ್ಯಾಲಯದಲ್ಲಿ ಗುರುವಾರ ಸಮಾಜಶಾಸ್ತ್ರ ವಿಭಾಗ ಏರ್ಪಡಿಸಿದ್ದ ಸಂಪೋಷಿತ ಪರಿಸರ ಅಭಿವೃದ್ದಿ ಎಂಬ ಒಂದು ದಿನದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಮಾನವ ತನ್ನ ಉದ್ದೇಶಗಳ ಈಡೇರಿಕೆಗೆ …

Read More »

ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರಮಟ್ಟದ ಕಾರ್ಯಾಗಾರ ಯಶಸ್ವಿ

ಬೆಳಗಾವಿ ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರಮಟ್ಟದ ಕಾರ್ಯಾಗಾರ ಯಶಸ್ವಿ ಬೆಳಗಾವಿ : ಇಂದಿನ ಯುವ ನ್ಯಾಯವಾದಿಗಳು ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆಯ ಕ್ಷೇತ್ರದಲ್ಲಿ ಇರುವ ಉಜ್ವಲ ಅವಕಾಶಗಳನ್ನು ಸಮರ್ಥವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬೆಳಗಾವಿಯ ಅಂಗಡಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ನಿರ್ದೇಶಕ ಮತ್ತು ಪ್ರಾಚಾರ್ಯ ಡಾ. ಆನಂದ ದೇಶಪಾಂಡೆ ತಿಳಿಸಿದರು. ಶುಕ್ರವಾರ ನಗರದ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯ ಮತ್ತು ಕರ್ನಾಟಕ ಸರ್ಕಾರದ ವಿಶ್ವೇಶ್ವರಯ್ಯ ವ್ಯಾಪಾರ ಅಭಿವೃದ್ದಿ ಉತ್ತೇಜನ ಕೇಂದ್ರಗಳ …

Read More »

ಸೊಗಲದಲ್ಲಿ ಪಕ್ಷಿಧಾಮ ಪರಿಶೀಲನೆ: ಈಶ್ವರ ಖಂಡ್ರೆ

ಸೊಗಲದಲ್ಲಿ ಪಕ್ಷಿಧಾಮ ಪರಿಶೀಲನೆ: ಈಶ್ವರ ಖಂಡ್ರೆ ಬೆಂಗಳೂರು : ಬೆಳಗಾವಿ ಜಿಲ್ಲೆಯ ಪವಿತ್ರ ಪುಣ್ಯ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನದ ಬಳಿ ಇರುವ ಕಿರು ಪ್ರಾಣಿ ಸಂಗ್ರಹಾಲಯ ಜಿಂಕೆವನಕ್ಕೆ ಪುನಶ್ಚೇತನ ನೀಡುವ ಇಲ್ಲವೇ ಅದೇ ಜಾಗದಲ್ಲಿ ಪಕ್ಷಿಧಾಮ ನಿರ್ಮಿಸುವ ಕುರಿತಂತೆ ಪರಿಶೀಲಿಸುವ ಭರವಸೆಯನ್ನು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ. ಬೆಂಗಳೂರಿನ ತಮ್ಮ ಕಚೇರಿಯಲ್ಲಿಂದು ಭೇಟಿಯಾಗಿದ್ದ ಬೈಲಹೊಂಗಲ ಶಾಸಕ ಮಹಾಂತೇಶ ಶಿವಾನಂದ ಕೌಜಲಗಿ ನೇತೃತ್ವದ ನಿಯೋಗದೊಂದಿಗೆ …

Read More »