Breaking News

ಗಡ್ಡೆ ಸಹೋದರರಿಂದ ಎಚ್.ಎಂ. ರೇವಣ್ಣ, ಎಚ್. ವಿಶ್ವನಾಥಗೆ ಸತ್ಕಾರ

ಗಡ್ಡೆ ಸಹೋದರರಿಂದ ಎಚ್.ಎಂ. ರೇವಣ್ಣ, ಎಚ್. ವಿಶ್ವನಾಥಗೆ ಸತ್ಕಾರ ಬೆಳಗಾವಿ: ರಾಜ್ಯದ ಉದ್ದಗಲಕ್ಕೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ‌ ಪ್ರತಿಮೆ ನಿರ್ಮಿಸಲು ಶ್ರಮಿಸುತ್ತಿರುವ ಮಾಜಿ ಸಚಿವ, ಹಾಲುಮತ ಸಮಾಜದ ಮುಖಂಡ ಎಚ್.ಎಂ. ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರನ್ನು ಬೆಳಗಾವಿಯಲ್ಲಿ ಗಡ್ಡೆ ಸಹೋದರರು ಸತ್ಕರಿಸಿದರು. ನಗರದ ಭಡಕಲ್ ಗಲ್ಲಿಯಲ್ಲಿರುವ ಗಡ್ಡೆ ಸಹೋದರರ ಕಚೇರಿಗೆ ಶುಕ್ರವಾರ ಭೇಟಿ ನೀಡಿದ ಮಾಜಿ ಸಚಿವ ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ …

Read More »

ಸಂಚಲನ ಮೂಡಿಸಿದ ನೂತನ ಡಿಸಿಎಂ ಹೇಳಿಕೆ

ಸಂಚಲನ ಮೂಡಿಸಿದ ನೂತನ ಡಿಸಿಎಂ ಹೇಳಿಕೆ ಮುಂಬೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ನಂಬಿ ನಾನು ಇತರ ಬಂಡಾಯ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕರೊಂದಿಗೆ ಬಿಜೆಪಿ ಮತ್ತು ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡ ಅಜಿತ ಪವಾರ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರವು ಕಳೆದ ಒಂಬತ್ತು ವರ್ಷಗಳಿಂದ ದೇಶವನ್ನು ಮುನ್ನಡೆಸಲು ಪ್ರಯತ್ನಿಸುತ್ತಿದೆ. ಪಕ್ಷದಲ್ಲಿ ಯಾವುದೇ ಒಡಕು ಇಲ್ಲ …

Read More »

ಜಾತಿಮುಕ್ತ ಸಮಾಜ ಬಸವಣ್ಣನವರ, ವಚನ ಕ್ರಾಂತಿಯ ಆಶಯವಾಗಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿಮುಕ್ತ ಸಮಾಜ ಬಸವಣ್ಣನವರ, ವಚನ ಕ್ರಾಂತಿಯ ಆಶಯವಾಗಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜು 2: ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷಾದ ವ್ಯಕ್ತಪಡಿಸಿದರು. ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. *12 …

Read More »

ಮತ್ತೆ ಡಿಸಿಎಂ ಆದ ಮಹಾ ನಾಯಕ

ಮತ್ತೆ ಡಿಸಿಎಂ ಆದ ಮಹಾ ನಾಯಕ ಮುಂಬೈ: ನೆರೆಯ ಮಹಾರಾಷ್ಟ್ರದಲ್ಲಿ ರಾಜಕೀಯ ಪಲ್ಲಟ ಸಂಭವಿಸಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತೆ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು ಶಿವಸೇನೆ ಹಾಗೂ ಬಿಜೆಪಿ ಸರಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಬೆಳವಣಿಗೆ ದೇಶದ ರಾಜಕೀಯ ರಂಗದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಮಹಾರಾಷ್ಟ್ರ ಜನರಿಗೆ ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಬಹುದೊಡ್ಡ ಶಾಕ್ ಕೊಟ್ಟಿದ್ದಾರೆ. ಭಾನುವಾರ ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ. …

Read More »

ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕವಾಗಿ ದೊಡ್ಡ ದುರಂತ : ಕೋಡಿಮಠ ಶ್ರೀಗಳ ಭವಿಷ್ಯ

ಕರ್ನಾಟಕದಲ್ಲಿ ಜಲಪ್ರಳಯ, ಜಾಗತಿಕವಾಗಿ ದೊಡ್ಡ ದುರಂತ : ಕೋಡಿಮಠ ಶ್ರೀಗಳ ಭವಿಷ್ಯ ಹುಬ್ಬಳ್ಳಿ: ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ, ಜಲಪ್ರಳಯ ಸಂಭವಿಸಲಿದೆ. ವಿಪರೀತವಾಗಿ ಜಲಪ್ರಳಯದಿಂದ ಜಾಗತಿಕ ಮಟ್ಟದ ಒಂದೆರಡು ರಾಷ್ಟ್ರಗಳು ಮುಚ್ಚಿಹೋಗುತ್ತವೆ. ಪ್ರಕೃತಿ ಮುನಿದು ಸರಿಯಾಗುತ್ತದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಜಯ ದಶಮಿಯಿಂದ ಸಂಕ್ರಾತಿಯ ವರೆಗೆ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ. ಆಳುವವರು ಅರಿತುಕೊಳ್ಳಬೇಕು. ಇಲ್ಲದಿದ್ದರೇ ಅಪಾಯ ಸಂಭವಿಸಲಿದೆ ಎಂದು …

Read More »

ರೋಟರಿ ಕ್ಲಬ್ ಬೆಳಗಾವಿ ದಕ್ಷಿಣ ನೂತನ ಪದಾಧಿಕಾರಿಗಳ ಪದಗ್ರಹಣ ರವಿವಾರ

ರೋಟರಿ ಕ್ಲಬ್ ಬೆಳಗಾವಿ ದಕ್ಷಿಣ ನೂತನ ಪದಾಧಿಕಾರಿಗಳ ಪದಗ್ರಹಣ ರವಿವಾರ ಬೆಳಗಾವಿ : ರೋಟರಿ ಕ್ಲಬ್ ಬೆಳಗಾವಿ ದಕ್ಷಿಣ 2023-24 ನೇ ಸಾಲಿನ ನೂತನ ಪದಾಧಿಕಾರಗಳ ಪದಗ್ರಹಣ ಸಮಾರಂಭ ಇದೇ ರವಿವಾರ ದಿನಾಂಕ ಜುಲೈ 2 ನೇ ತಾರೀಖು ಉದಯಬಾಗ ನಲ್ಲಿರುವ ಫೌಂಡ್ರಿ ಕ್ಲಸ್ಟರ್ ಲಿ ಮುಂಜಾನೆ 10.30 ಕ್ಕೆ ನಡೆಯಲಿದೆ. ಅಧ್ಯಕ್ಷರಾಗಿ ವಿಜಯ್ ದರಗಶೆಟ್ಟಿ, ಕಾರ್ಯದರ್ಶಿಯಾಗಿ ಹೇಮಂತ್ ಕಾಮತ್, ಖಚಾಂಚಿಯಾಗಿ ನಾಗರಾಜ ನಾಶಿ ಮತ್ತು ನಿರ್ದೇಶಕರ ಮಂಡಳಿಯೊಂದಿಗೆ ಪದಗ್ರಹಣ …

Read More »

ಪ್ರತಿ ಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಿಂದ ಅಚ್ಚರಿ ಹೆಸರು

ಪ್ರತಿ ಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಿಂದ ಅಚ್ಚರಿ ಹೆಸರು ಬೆಂಗಳೂರು : ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಹೆಸರು ಇಷ್ಟರಲ್ಲೇ ಘೋಷಣೆಯಾಗುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಅಶ್ವತ ನಾರಾಯಣ, ಬಸನಗೌಡ ಪಾಟೀಲ ಯತ್ನಾಳ, ಅರವಿಂದ ಬೆಲ್ಲದ, ಸುನಿಲ್ ಕುಮಾರ್ ಹೆಸರು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದು ಬೊಮ್ಮಾಯಿ ಹೆಸರು ಅಂತಿಮವಾಗುವ ಸಾಧ್ಯತೆ …

Read More »

ಡಾ. ರಾಮಣ್ಣವರ ಅವರಿಗೆ ಕರುನಾಡು ಭೂಷಣ ಶ್ರೇಷ್ಠ ವೈದ್ಯ ಪ್ರಶಸ್ತಿ

ಡಾ. ರಾಮಣ್ಣವರ ಅವರಿಗೆ ಕರುನಾಡು ಭೂಷಣ ಶ್ರೇಷ್ಠ ವೈದ್ಯ ಪ್ರಶಸ್ತಿ ಬೆಳಗಾವಿ : ಕೆಎಲ್ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಶರೀರ ರಚನಾ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ.ಮಹಾಂತೇಶ ರಾಮಣ್ಣವರ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ದೇಹ ದಾನ ಹಾಗೂ ಅಂಗಾಂಗ ದಾನದ ಜಾಗೃತಿ ಬಗ್ಗೆ ಸಲ್ಲಿಸಿದ ಅತ್ಯುತ್ತಮ ಸೇವೆ ಪರಿಗಣಿಸಿ ದೇವರ ಹಿಪ್ಪರಗಿ ಡಾ. ರಮೇಶ ರಾಥೋಡ ಚಾರಿಟೇಬಲ್ ಟ್ರಸ್ಟ್ ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ …

Read More »

ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಸಂಪನ್ನ

ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ  ಉದ್ಯಮಶೀಲತೆ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಸಂಪನ್ನ ಬೆಳಗಾವಿ : ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯವು ‘ಉದ್ಯಮಶೀಲತೆ ಅಭಿವೃದ್ಧಿ’ ಕುರಿತು ವಿಶೇಷ ಉಪನ್ಯಾಸವನ್ನು ಆಯೋಜಿಸಿತ್ತು. ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ನಿಗಮ ನಿಯಮಿತದ ಶಾಖಾ ವ್ಯವಸ್ಥಾಪಕ ಆರ್.ಜೆ.ಎಸ್.ವಿ ರಾಮರಾವ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ಎಂಎಸ್‌ಎಂಇಗಳ ಪಾತ್ರದ ಕುರಿತು ವಿವರಿಸಿದರು. ಅವರು NSIC ಸ್ಥಾಪನೆ ಮತ್ತು ಕಾರ್ಯನಿರ್ವಹಣೆಯ …

Read More »

ಸ್ವಾತಂತ್ರ್ಯ ಸೇನಾನಿಗಳು ನಮಗೆ ಆರಾಧ್ಯರು : ಸತೀಶ ಜಾರಕಿಹೊಳಿ

ಸ್ವಾತಂತ್ರ್ಯ ಸೇನಾನಿಗಳು ನಮಗೆ ಆರಾಧ್ಯರು : ಸತೀಶ ಜಾರಕಿಹೊಳಿ ಬೆಳಗಾವಿ : ಸಂಗೊಳ್ಳಿ ರಾಯಣ್ಣನ ನಾಮಧೇಯ ಹೊಂದಿರುವ ಇದರ ಆವರಣದಲ್ಲಿ ಕ್ರಾಂತಿಕಾರಿ, ಪರಾಕ್ರಮಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವುದರ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಸಂಗೊಳ್ಳಿ ರಾಯಣ್ಣನ ಸಾಹಸ, ದೇಶಪ್ರೇಮ, ಅವನ ತ್ಯಾಗ, ಹೋರಾಟ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ …

Read More »