Breaking News

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ.!

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ.! ಯುವ ಭಾರತ ಸುದ್ದಿ  ಗೋಕಾಕ: ಕಳೆದ ಶುಕ್ರವಾರದಂದು ತಾಲೂಕಿನ ಕೊಳವಿ ಗ್ರಾಮದಲ್ಲಿ ಮಧ್ಯಾಹ್ನ ಸುರಿದ ಭಾರಿ ಮಳೆಯಲ್ಲಿ ಹಳ್ಳದ ಬ್ರೀಡ್ಜ್ ಮೇಲಿಂದ ದಾಟುವಾಗ ಕೊಚ್ಚಿ ಹೋಗಿದ್ದ ಯುವಕ ಶವ ರವಿವಾರದಂದು ಬೆಳಿಗ್ಗೆ ಪ್ತೆಯಾಗಿದೆ. ಹಳ್ಳದಲ್ಲಿ ಕೊಚ್ಚಿಹೊದ ಯುವಕ ಕೊಳವಿ ಗ್ರಾಮದ ದುಂಡಪ್ಪ ಬಸಪ್ಪ ಮಾಲದಿನ್ನಿ 25 ಹಳ್ಳದ ಪಕ್ಕದಲ್ಲಿರುವ ತನ್ನ ಜಮೀನಿಗೆ ಹೋಗುವ ಸಂದರ್ಭದಲ್ಲಿ ಬ್ರೀಡ್ಜ ಮೇಲಿಂದ ದಾಟುವಾಗ ಹಳ್ಳದಲ್ಲಿ ಏಕಾಏಕಿ …

Read More »

ನೀಟ್ ಪರೀಕ್ಷೆ-ಪೂಜಾ ಮುಧೋಳ ಉತ್ತಮ ಸಾಧನೆ.!

ನೀಟ್ ಪರೀಕ್ಷೆ-ಪೂಜಾ ಮುಧೋಳ ಉತ್ತಮ ಸಾಧನೆ.! ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟç ಮಟ್ಟದ ನೀಟ್ ಪರೀಕ್ಷೆಯಲ್ಲಿ ತಾಲೂಕಿನ ಬೆಟಗೇರಿ ಗ್ರಾಮದ ಕುಮಾರಿ ಪೂಜಾ ಸುರೇಶ ಮುಧೋಳ ಉತ್ತಮ ಸಾಧನೆ ಮಾಡಿದ್ದಾರೆ. ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ಅವರು ೭೨೦ರ ಪೈಕಿ ೫೬೮ ಅಂಕ ಪಡೆದುಕೊಂಡು, ಗೋಕಾಕ ತಾಲೂಕು ಹಾಗೂ ಬೆಟಗೇರಿಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಶಿಕ್ಷಣ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More »

ಶಾಸಕ ರಮೇಶ ಜಾರಕಿಹೊಳಿ ಅವರಿಂದ ರಮೇಶ ಪೂಜೇರಿಗೆ ಸನ್ಮಾನ.!

ಶಾಸಕ ರಮೇಶ ಜಾರಕಿಹೊಳಿ ಅವರಿಂದ ರಮೇಶ ಪೂಜೇರಿಗೆ ಸನ್ಮಾನ.! ಗೋಕಾಕ: ವೈದ್ಯಕೀಯ ಅರ್ಹತಾ ಪರೀಕ್ಷೆ(ನೀಟ್)ಯಲ್ಲಿ ತಾಲೂಕಿನ ಹಿರೇನಂದಿ ಗ್ರಾಮದ ರಮೇಶ ಬಡಕಪ್ಪ ಪೂಜೇರಿ ಅತ್ಯುತ್ತಮ ಸಾಧನೆ ಮಾಡಿರುವ ಹಿನ್ನಲೆ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಗೃಹ ಕಚೇರಿಯಲ್ಲಿ ರಮೇಶ ಪೂಜೇರಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಶಾಸಕರ ಆಪ್ತಸಹಾಯಕರಾದ ಸುರೇಶ ಸನದಿ, ಕಾಂತು ಎತ್ತಿನಮನಿ, ಹಿರೇನಂದಿ ಗ್ರಾಮ ಪಂಚಾಯತ ಸದಸ್ಯರು …

Read More »

ಮಮದಾಪೂರ ಗ್ರಾಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.!

ಮಮದಾಪೂರ ಗ್ರಾಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಂದ ರಮೇಶ ಜಾರಕಿಹೊಳಿ ಅವರಿಗೆ ಸನ್ಮಾನ.! ಗೋಕಾಕ: ತಾಲ್ಲೂಕಿನ ಮಮದಾಪೂರ ಗ್ರಾಮ ಪಂಚಾಯತಗೆ ನೂತನ ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ರಮೇಶ ಗಾಣಗಿ, ಉಪಾಧ್ಯಕ್ಷ ಲಕ್ಷ್ಮೀ ಅವರಾದಿ ಅವರು ಶಾಸಕ ರಮೇಶ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ನಂತರ ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ ಲಖನ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಶಾಸಕ ರಮೇಶ ಜಾರಕಿಹೊಳಿ ಮತ್ತು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ …

Read More »

ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಪತ್ರಿಕೋದ್ಯಮದ ಘನತೆಯನ್ನು ಹೆಚ್ಚಿಸುವಂತೆ ಸರ್ವೋತ್ತಮ ಜಾರಕಿಹೊಳಿ ಕರೆ.!

ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಪತ್ರಿಕೋದ್ಯಮದ ಘನತೆಯನ್ನು ಹೆಚ್ಚಿಸುವಂತೆ ಸರ್ವೋತ್ತಮ ಜಾರಕಿಹೊಳಿ ಕರೆ.! ಗೋಕಾಕ: ಸ್ವಾತಂತ್ರ‍್ಯ ಪೂರ್ವದಿಂದಲೂ ಕಾರ್ಯನಿರತ ಪತ್ರಕರ್ತರ ಸಂಘ ಜನರ ಧ್ವನಿಯಾಗಿ ಕಾರ್ಯನಿರ್ವಸುತ್ತಿದೆ ಎಂದು ಗೋಕಾಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲೂಕು ಘಟಕದ ಗೌರಾವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರದಿಂದ ಮಾನ್ಯತೆ ಪಡೆದ ಏಕೈಕ ಪತ್ರಕರ್ತರ ಸಂಘವಾಗಿ ನೈಜ ವರದಿಗಳೊಂದಿಗೆ ಜನರ ವಿಶ್ವಾಸಗಳಿಸಿದೆ. ಸಂಘದಿ0ದ …

Read More »

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ!!

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ!! ಗೋಕಾಕ್- ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ …

Read More »

ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ.!

ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಶಾಸಕ ರಮೇಶ ಜಾರಕಿಹೊಳಿ ಭೇಟಿ.! ಗೋಕಾಕ: ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ದಿ.ಉಮೇಶ ಕತ್ತಿ ಉತ್ತರ ಕರ್ನಾಟಕದ ಪ್ರಭಲ ಧ್ವನಿಯಾಗಿದ್ದವರು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಶ್ರಮಿಸಿದ ಉಮೇಶ ಕತ್ತಿಯವರನ್ನು ಕಳೆದುಕೊಂಡ ಈ ನಾಡು ಬಡವಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶನಿವಾರದಂದು ದಿ.ಉಮೇಶ ಕತ್ತಿ ಅವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ …

Read More »

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ!

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ! ಗೋಕಾಕ:   ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …

Read More »

ಭಾರಿ ಮಳೆಯಿಂದಾಗಿ ಹಳ್ಳದ‌ ನೀರಲ್ಲಿ‌ ಕೊಚ್ಚಿ ಹೋದ ಯುವಕ.!

ಭಾರಿ ಮಳೆಯಿಂದಾಗಿ ಹಳ್ಳದ‌ ನೀರಲ್ಲಿ‌ ಕೊಚ್ಚಿ ಹೋದ ಯುವಕ.!   ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನ ಕೊಳವಿ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಯಲ್ಲಿ ಯುವಕನೋರ್ವ ಕೊಚ್ಚಿ ಹೋದ ಘಟನೆ ಜರುಗಿದೆ. ದುಂಡಪ್ಪ ಮಾಲದಿನ್ನಿ 25 ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿರುವ ಯುವಕ ಎಂದು ಗುರುತಿಸಲಾಗಿದೆ. ಯುವಕ ದುಂಡಪ್ಪ ಹಳ್ಳದ ಪಕ್ಕದಲ್ಲಿರುವ ತಮ್ಮ ಜಮೀನಿಗೆ ಹಳ್ಳದ ಬ್ರೀಡ್ಜ ದಾಟುವಾಗ ಏಕಾಏಕಿ ಹಳ್ಳಕ್ಕೆ ಮಳೆಯ ನೀರು ಹರಿದು ಬಂದಿದ್ದು …

Read More »

ಟೇಕ್ವಾಂಡೊ ಚಾಂಪಿಯನ ಶೀಪ ವಿಜೇತ ಕ್ರೀಡಾಪಟುಗಳಿಗೆ ಶಾಸಕರಿಂದ ಸನ್ಮಾನ.!

ಟೇಕ್ವಾಂಡೊ ಚಾಂಪಿಯನ ಶೀಪ ವಿಜೇತ ಕ್ರೀಡಾಪಟುಗಳಿಗೆ ಶಾಸಕರಿಂದ ಸನ್ಮಾನ.! ಗೋಕಾಕ: ಬೆಂಗಳೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ಟೇಕ್ವಾಂಡೊ ಚಾಂಪಿಯನ ಶಿಫನಲ್ಲಿ ತಾಲೂಕಿನ ಘಟಪ್ರಭಾ ಪಟ್ಟಣದ ಕ್ರೀಡಾಪಟುಗಳು ಭಾಗವಹಿಸಿ ಪಂದ್ಯಾವಳಿಯಲ್ಲಿ ಒಂದು ಬಂಗಾರದ ಪದಕ ಹಾಗೂ ಆರು ಕಂಚಿನ ಪದಕಗಳನ್ನು ಮುಡಿಗೇರಿಸಿಕೊಂಡ ವಿಜೇತ ಟೇಕ್ವಾಂಡೊ ಕ್ರೀಡಾ ಪಟುಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಟಿ.ಆರ್ ಕಾಗಲ, ಲಕ್ಷ್ಮೀಕಾಂತ ಎತ್ತಿನಮನಿ, ಸುರೇಶ ಸನದಿ, ಗಂಗಾಧರ ಬಡಕುಂದ್ರಿ, …

Read More »