Breaking News

ಗಾಂಧಿಯವರು ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗತ್ತಿಗೆ ಹೊಸ ಬೆಳಕು ನೀಡಿದ್ದಾರೆ-ಜಾರಕಿಹೊಳಿ.!

ಗಾಂಧಿಯವರು ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗತ್ತಿಗೆ ಹೊಸ ಬೆಳಕು ನೀಡಿದ್ದಾರೆ-ಜಾರಕಿಹೊಳಿ.!   ಯುವ ಭಾರತ ಸುದ್ದಿ, ಗೋಕಾಕ: ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗತ್ತಿಗೆ ಹೊಸ ಬೆಳಕು ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕದಿಂದ ಆಯೋಜಿಸಲಾದ ೧೫೧ ನೇ ಮಹಾತ್ಮಾ ಗಾಂಧಿ …

Read More »

ಬಾಬ್ರಿ ಕಟ್ಟಡ ಕುರಿತು ತೀರ್ಪು – ಸತ್ಯಮೇವ ಜಯತೇ ಎಂದ ಸಚಿವ.ರಮೇಶ್ ಜಾರಕಿಹೊಳಿ‌..!!

ಬಾಬ್ರಿ ಕಟ್ಟಡ ಕುರಿತು ತೀರ್ಪು – ಸತ್ಯಮೇವ ಜಯತೇ ಎಂದ ಸಚಿವ.ರಮೇಶ್ ಜಾರಕಿಹೊಳಿ‌..!!   ಯುವ ಭಾರತ ಸುದ್ದಿ,  ಬಾಬ್ರಿ ಕಟ್ಟಡ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯವು ಇಂದು ನೀಡಿದ ತೀರ್ಪು ಐತಿಹಾಸಿಕವಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಬಣ್ಣಿಸಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ಮಾತನಾಡಿದ ಸಚಿವ ಜಾರಕಿಹೊಳಿ‌, ಸತ್ಯ ಎಂದಿಗೂ ಸತ್ಯವೇ, ಭಾರತೀಯ ಜನತಾ ಪಾರ್ಟಿ ಸಹಾ ಇದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿತ್ತು. …

Read More »

ಮೂಡಲಗಿ ತಾಲೂಕಾ ಪತ್ರಕರ್ತರ ಪತ್ರಿಭಟನೆ | ಸರ್ಕಾರದ ವಿರುದ್ದ ಕ್ರಮಕೈಗೊಳ್ಳುವಂತೆ ಮನವಿ ಸರ್ಕಾರದಿಂದ ಮಾಧ್ಯಮ ಕ್ಷೇತ್ರದ ಕಗ್ಗೊಲೆ ಖಂಡನೀಯ

ಮೂಡಲಗಿ : ಸಿಎಂ ಪುತ್ರನ ಬಂಡವಾಳ ಬಯಲು ಮಾಡಿದ ಹಿನ್ನಲೆ ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಪವರ ಟಿವಿ ಚಾನಲ್ ಬಂದ್ ಮಾಡಿದ ಘಟನೆ ಖಂಡಿಸಿ ಬುಧುವಾರದಂದು ಮೂಡಲಗಿ ತಾಲೂಕಾ ಪತ್ರಕರ್ತರ ಬಳಗದಿಂದ ಪಟ್ಟಣದ ಕಲ್ಮೇಶ್ವರ ಸರ್ಕಲ್‌ನಲ್ಲಿ ಸರ್ಕಾರದ ವಿರುದ್ದ ಪ್ರತಿಭಟಿಸಿ, ಕೆಲ ಸಮಯಗಳ ಕಾಲ ರಸ್ತೆ ಬಂದ್ ಮಾಡಿ ಸ್ಥಳೀಯ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಹಾಗೂ ಸಿಸಿಬಿ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ …

Read More »

ವಸೂಲಿ ಮಾಡಿದ ಹಣದ ಜೊತೆ ಪರಾರಿಯಾದ ಸ್ಪಂದನಾ ಮೈಕ್ರೋ ಪೈನಾನ್ಸ್ ಸಿಬ್ಬಂದಿ

ಗೋಕಾಕದಲ್ಲಿರುವ ಸ್ಪಂದನಾ ಮೈಕ್ರೋ ಫೈನಾನ್ಸ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿ ಮೂಲತ ರಾಮದುರ್ಗ ತಾಲೂಕಿನ ಪಕೀರಪ್ಪಾ ಕುರಿ ಎಂಬಾತನು ಕೊಣ್ಣೂರಲ್ಲಿನ ಇಪ್ಪತೈದು ಗ್ರಾಹಕರಿಂದ ತಿಂಗಳಿಗೊಮ್ಮೆ ತುಂಬುವ ಹಣವನ್ನು ಅಂದಾಜು 2 ಲಕ್ಷ ರೂ, ಹಣವನ್ನು ದೊಚಿಕೊಂಡು ಗೋಕಾಕದಲ್ಲಿನ‌ ಕಚೇರಿಗೆ ಹಣ ತುಂಬದೆ ಪರಾರಿಯಾಗಿದ್ದಾನೆ, ಪ್ರತಿ ಹದಿನೈದು ದಿನಕೊಮ್ಮೆ ಸ್ಪಂದನಾ ಮೈಕ್ರೋ ಪೈನಾನ್ಸ್ ಕಂಪನಿಯಿಂದ ತೆಗೆದುಕೊಂಡ ಹಣವನ್ನು ತುಂಬಿಸಿಕೊಳ್ಳಲು ಮ್ಯಾನೆಜರ ಕಳಿಸಿದ್ದಾರೆಂದು ಹೇಳಿದ್ದಲ್ಲದೆ ಈಗ ಕೊರಾನಾ ಹೆಚ್ಚಾಗುತಿದ್ದರಿಂದ ಯಾರು ಕಚೇರಿಗೆ ಬರಬಾರದೆಂದು …

Read More »

ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ

ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್‍ಸಿ …

Read More »

ರಾಜಸ್ಥಾನಿ ಹಠಾವೋ ಗೋಕಾಕ ಬಚಾವೋ.! ಅ.೫ ರಂದು ಗೋಕಾಕ ಬಂದ್.!

ಗೋಕಾಕ: ರಾಜಸ್ಥಾನಿ ವ್ಯಾಪಾರಸ್ಥರು ಕಳೆದ ಹಲವಾರು ವರ್ಷಗಳಿಂದ ಗೋಕಾಕ ನಗರದಲ್ಲಿ ಕೋಮುಗಲಭೆಗಳಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತ ಬಂದಿದ್ದು, ಹೊರ ರಾಜ್ಯದ ರಾಜಸ್ಥಾನಿ ವ್ಯಾಪಾರಿಗಳ ಪರವಾನಿಗೆ ರದ್ದುಗೊಳಿಸಿ ಅವರವರ ರಾಜ್ಯಗಳಿಗೆ ಕಳುಹಿಸಿಕೊಡಲು ಸರ್ಕಾರಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಅ.೫ ರಂದು ಗೋಕಾಕ ಸಂಪೂರ್ಣ ಬಂದ್‌ಗೆ ಕರೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ಡಿಎಸ್‌ಎಸ್ನ ಬೆಳಗಾವಿ ಜಿಲ್ಲಾ ಸಂಚಾಲಕ ರಮೇಶ. ಮಾದರ ಅವರು ಮಾತನಾಡಿ ಗೋಕಾಕ, ಮೂಡಲಗಿ ತಾಲೂಕಿನ ವಿವಿಧ …

Read More »

ಸಂಗೀತ ಸಾರ್ವಭೌಮ, ಗಾನ ಗಾರುಡಿಗ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರಿಗೆ ಇಲ್ಲಿಯ ಕಲಾವಿದರ ಬಳಗ,ಅಭಿಮಾನಿಗಳು ಕಲ್ಮೇಶ್ವರ ವೃತ್ತದಲ್ಲಿ ಶ್ರದ್ಧಾಂಜಲಿ ಅರ್ಪಿಸಿದರು

ಮೂಡಲಗಿ:- ಶುಕ್ರವಾರ ನಿಧನರಾದ ಸಂಗೀತ ಸಾರ್ವಭೌಮ, ಗಾನ ಗಾರುಡಿಗ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರಿಗೆ ಇಲ್ಲಿಯ ಕಲಾವಿದರ ಬಳಗ,ಅಭಿಮಾನಿಗಳು ಕಲ್ಮೇಶ್ವರ ವೃತ್ತದಲ್ಲಿ ಶ್ರದ್ಧಾಂಜಲಿ ಅರ್ಪಿಸಿದರು. ಭಜನಾ ಕಲಾವಿದ ಶಿವಪುತ್ರಯ್ಯ ಮಠಪತಿ ಸ್ವಾಮಿ ಪೂಜೆ ಸಲ್ಲಿಸಿದರು. ಜಾನಪದ ಕಲಾವಿದ,ಚಲನ ಚಿತ್ರ ಗಾಯಕ ಶಬ್ಬೀರ ಡಾಂಗೆ ಮಾತನಾಡಿ ಕಂಚಿನ ಕಂಠದಿಂದ 14ಭಾಷೆಗಳಲ್ಲಿ ಹಿಡಿತ ಸಾಧಿಸಿ ಗಾನ ಗಾರುಡಿಗ ಎಸ್.ಪಿ.ಬಾಲಸುಬ್ರಮಣ್ಯಂ ಅವರ ಅಗಲಿಕೆಯಿಂದ ಜಗತ್ತಿನ ಸಂಗೀತ ಲೋಕಕ್ಕೆ ತುಂಬ ಹಾನಿಯಾಗಿದೆ.ಎಸ್.ಪಿ. ಅವರು ಮೇರು ಕಲಾವಿದರಾಗಿದ್ದರೂ ಯುವ ಕಲಾವಿದರಿಗೆ …

Read More »

ಗೋಕಾಕ್  ಬಿಜೆಪಿ ಕಾರ್ಯಕರ್ತರಿಂದ ಶ್ರದ್ಧಾಂಜಲಿ ಸಭೆ.!!

 ಗೋಕಾಕ್  ಬಿಜೆಪಿ ಕಾರ್ಯಕರ್ತರಿಂದ ಶ್ರದ್ಧಾಂಜಲಿ ಸಭೆ.!!     ಯುವ  ಭಾರತ ಸುುದ್ದಿ,ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರಿಗೆ ಹಿರಿಯ ಅಣ್ಣನಂತೆ ನಿಂತು ಮಾರ್ಗದರ್ಶನ ನೀಡುತ್ತಿದ್ದ ಸಂಸದರು ಹಾಗೂ ಕೇಂದ್ರ ರೇಲ್ವೆ ಸಚಿವರಾದ ಸುರೇಶ ಅಂಗಡಿ ಅವರ ನಿಧನ ಜಿಲ್ಲೆ ಜನತೆಗೆ ತೀವ್ರ ಅಘಾತ ಉಂಟು ಮಾಡಿದೆ ಎಂದು ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ ಹೇಳಿದರು. ಅವರು, ಗುರುವಾರದಂದು ನಗರದ ಸಚಿವ ರಮೇಶ …

Read More »

ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿಂದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭ್ರಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿ 2019 …

Read More »

ಗೋಕಾಕ‌ ಬಿಜೆಪಿ ಪಕ್ಷದಿಂದ ಅಂಗವಿಕಲರಿಗೆ ಹಾಗೂ ವೃದ್ಧರಿಗೆ ಪರಿತರ ವಿತರಣೆ.!

ಗೋಕಾಕ‌ ಬಿಜೆಪಿ ಪಕ್ಷದಿಂದ ಅಂಗವಿಕಲರಿಗೆ ಹಾಗೂ ವೃದ್ಧರಿಗೆ ಪರಿತರ ವಿತರಣೆ.! ಯುವ ಭಾರತ ಸುದ್ದಿ,   ಗೋಕಾಕ್: ಭಾರತೀಯ ಜನತಾ ಪಾರ್ಟಿ‌ ಗೋಕಾಕ ನಗರ ಘಟಕದಿಂದ ಸೇವಾ ಸಪ್ತಾಹ, ಪಂಡಿತ ದೀನದಯಾಳ ಹಾಗೂ ಗಾಂಧೀಜಿ ಜಯಂತಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಅಂಗವಿಕಲರಿಗೆ ಹಾಗೂ ವೃದ್ದರಿಗೆ ಪರಿತರ ವಿತರಣಾ ಕಾರ್ಯಕ್ರಮ ಸೋಮವಾರದಂದು ಜರುಗಿತು. ಇಲ್ಲಯ ಶ್ರೀ ಮೆರಕನಟ್ಟಿ ಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು …

Read More »