Breaking News

ಭಾರೀ ಸಂಚಲನ : ತೆರೆ ಮೇಲೆ ಬರುತ್ತಾ ಕಾಂತಾರ-2

ಭಾರೀ ಸಂಚಲನ : ತೆರೆ ಮೇಲೆ ಬರುತ್ತಾ ಕಾಂತಾರ-2 ಬೆಂಗಳೂರು : ನಟ , ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಸ್ಕ್ರಿಪ್ಟ್ ಅನ್ನು ಬಹುತೇಕ ಮುಗಿಸಿದ್ದಾರೆ. ಕಾಂತಾರ ಚಿತ್ರಕ್ಕೆ ಮಾತುಗಳನ್ನೂ ಹೆಣೆದಿರುವ ಅವರು ಸ್ಕ್ರಿಪ್ಟ್ ಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಇದೀಗ ಹೊರ ಬಿದ್ದಿದೆ.   ಇದರ ಜೊತೆ ಜೊತೆಗೆ ಶೂಟಿಂಗ್ ಸ್ಥಳಗಳನ್ನೂ ಅವರು ಹುಡುಕುತ್ತಿದ್ದು, ಈ ಎಲ್ಲವನ್ನೂ ಮುಗಿಸಿಕೊಂಡು ಆಗಸ್ಟ್ ನಲ್ಲಿ ಚಿತ್ರಕ್ಕೆ ಮುಹೂರ್ತ ಮಾಡಲಿದ್ದಾರೆ …

Read More »

ಮೋದಿ ಮತ್ತೆ ವಿಶ್ವದ ನಂಬರ್ ಒನ್ ಜನಪ್ರಿಯ ನಾಯಕ

ಮೋದಿ ಮತ್ತೆ ವಿಶ್ವದ ನಂಬರ್ ಒನ್ ಜನಪ್ರಿಯ ನಾಯಕ ದೆಹಲಿ : ಜಗತ್ತಿನ ವಿವಿಧ ಸಂಸ್ಥೆಗಳು ನಡೆಸಿರುವ ಸಮೀಕ್ಷೆಯಲ್ಲಿ ಆಗಾಗ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ನಾಯಕರಾಗಿ ಹೊರಹೊಮ್ಮುತ್ತಿದ್ದಾರೆ. ಇದೀಗ ಹೊರಬಂದ ಮಾಹಿತಿಯಂತೆ ಮೋದಿ ಅವರು ಮತ್ತೊಮ್ಮೆ ವಿಶ್ವ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆಯ ಗ್ಲೋಬಲ್ ಲೀಡರ್ ಶಿಪ್ ಅಪ್ರುವಲ್ ಸಮೀಕ್ಷೆ ಪ್ರಕಾರ ಶೇ.71ರಷ್ಟು ರೇಟಿಂಗ್ ಪಡೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ವಿಶ್ವದ ಜನಪ್ರಿಯ …

Read More »

ತಮಿಳು ವ್ಯಕ್ತಿ ಪ್ರಧಾನಿ : ಅಮಿತ್ ಶಾ

ತಮಿಳು ವ್ಯಕ್ತಿ ಪ್ರಧಾನಿ : ಅಮಿತ್ ಶಾ ಚೆನ್ನೈ: ಭವಿಷ್ಯದಲ್ಲಿ ತಮಿಳರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾನುವಾರ ಚೆನ್ನೈಗೆ ಭೇಟಿ ನೀಡಿದ್ದ ಅವರು ಬಿಜೆಪಿ ಮುಖಂಡರ, ಕಾರ್ಯಕರ್ತರ ಗೋಪ್ಯ ಸಭೆಯನ್ನು ಏರ್ಪಡಿಸಿದ್ದರು. ಈ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅವರು ‘ಭವಿಷ್ಯದಲ್ಲಿ ತಮಿಳರೊಬ್ಬರನ್ನು ಪ್ರಧಾನಿಯನ್ನಾಗಿ ಮಾಡಲಾಗುವುದೆಂದು’ ಹೇಳಿರುವುದಾಗಿ ಮೂಲಗಳು ತಿಳಿಸಿವೆ. 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಿಳುನಾಡಿನಲ್ಲಿ ಕನಿಷ್ಠ 20 ಸ್ಥಾನಗಳನ್ನು …

Read More »

ಖಾಸಗಿ ಬಸ್’ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ : ನಳಿನ್ ಕುಮಾರ್ ಕಟೀಲು

ಖಾಸಗಿ ಬಸ್’ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ : ನಳಿನ್ ಕುಮಾರ್ ಕಟೀಲು ಬೆಂಗಳೂರು: ಖಾಸಗಿ ಬಸ್’ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಿದ್ದರೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪುರಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ಗಳು ಹೆಚ್ಚು ಸಂಚರಿಸುತ್ತವೆ. ಖಾಸಗಿ ಬಸ್ಗಳಲ್ಲಿ ಮಹಿಳೆಯರಿಗೆ …

Read More »

ಪ್ರತ್ಯೇಕ ಮಂಡಳಿ ರಚನೆ: ದ್ವಾರಕನಾಥ್ ನೇತೃತ್ವದ ಅಲೆಮಾರಿ ಮುಖಂಡರಿಂದ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮನವಿ

ಪ್ರತ್ಯೇಕ ಮಂಡಳಿ ರಚನೆ: ದ್ವಾರಕನಾಥ್ ನೇತೃತ್ವದ ಅಲೆಮಾರಿ ಮುಖಂಡರಿಂದ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಬೆಂಗಳೂರು: ಅಲೆಮಾರಿ ಜನಾಂಗಕ್ಕೆ ಸೇರಿದ 93 ಸಮುದಾಯಗಳ ಜನರಿಗೆ ಸರಿಯಾಗಿ ಗುರುತು ಇಲ್ಲವಾಗಿದ್ದು, ಸರ್ಕಾರ ಇವರ ಸಮಸ್ಯೆ ಬಗೆಹರಿಸಿ ಅವರ ರಕ್ಷಣೆಗೆ ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಡಾ. ಸಿಎಸ್ ದ್ವಾರಕನಾಥ್ ಅವರ ನೇತೃತ್ವದ ಅಲೆಮಾರಿ ಸಮುದಾಯದ ಮುಖಂಡರ ನಿಯೋಗವು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ …

Read More »

ಶಾಲೆ ಬಿಡುವ ಮಕ್ಕಳ ಸಂಖ್ಯೆ ಎಷ್ಟು ?

ಶಾಲೆ ಬಿಡುವ ಮಕ್ಕಳ ಸಂಖ್ಯೆ ಎಷ್ಟು ? ನವದೆಹಲಿ: 2021-22ರಲ್ಲಿ ಪ್ರೌಢಶಿಕ್ಷಣ ಹಂತದಲ್ಲಿ ಶಾಲೆ ಬಿಟ್ಟಮಕ್ಕಳ ರಾಷ್ಟ್ರೀಯ ಸರಾಸರಿ ಸೇ.12.6ರಷ್ಟಿದ್ದರೆ, ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಈ ಪ್ರಮಾಣ ಇನ್ನೂ ಅಧಿಕವಾಗಿದೆ ಎಂದು ವರದಿಯೊಂದು ತಿಳಿಸಿದೆ. ಆದರೆ ಇದ್ದಿದ್ದರಲ್ಲಿ ಖುಷಿಯ ವಿಷಯವೆಂದರೆ 2020-21ಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಶಾಲೆ ಬಿಡುವ ಮಕ್ಕಳ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. 2023-24ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಜಾರಿಯ ಕುರಿತು ಚರ್ಚಿಸಲು ಹಮ್ಮಿಕೊಂಡಿದ್ದ ಶಿಕ್ಷಣ ಇಲಾಖೆ ವ್ಯಾಪ್ತಿಗೆ …

Read More »

ಶಕ್ತಿ ಯೋಜನೆಯಡಿ ಮುಂಗಡ ಆಸನ ಕಾಯ್ದಿರಿಸಲು ಅವಕಾಶ

ಶಕ್ತಿ ಯೋಜನೆಯಡಿ ಮುಂಗಡ ಆಸನ ಕಾಯ್ದಿರಿಸಲು ಅವಕಾಶ ಬೆಂಗಳೂರು : ರಾಜ್ಯಾದ್ಯಂತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ ಯೋಜನೆ’ಗೆ ಭಾನುವಾರ ವಿಧ್ಯುಕ್ತವಾಗಿ ಚಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ಶಕ್ತಿ ಯೋಜನೆಯ ಸೌಲಭ್ಯವನ್ನು ಪ್ರತಿನಿತ್ಯ 41.81 ಲಕ್ಷ ಮಹಿಳೆಯರು (11.58 ಲಕ್ಷ ಪಾಸ್‌ ಪ್ರಯಾಣಿಕರು ಸೇರಿದಂತೆ) ಪಡೆಯಲಿದ್ದಾರೆ ಎಂದು …

Read More »

ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಚಾಲನೆ

ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ಬೆಂಗಳೂರು: ಕಾಂಗ್ರೆಸ್‌ ಪಕ್ಷ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ಯೋಜನೆ ‘ಶಕ್ತಿ’ಗೆ ಭಾನುವಾರ ಚಾಲನೆ ನೀಡಲಾಯಿತು.   ವಿಧಾನಸೌಧದ ಎದುರು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಯನ್ನು ಉದ್ಘಾಟಿಸಿದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಉಸ್ತುವಾರಿ ಸಚಿವರು ಯೋಜನೆಗೆ ಚಾಲನೆ ಕೊಟ್ಟರು. ಡಿಸಿಎಂ ಡಿ.ಕೆ ಶಿವಕುಮಾರ್‌, ಸಚಿವರಾದ ಕೆ.ಜೆ ಜಾರ್ಜ್‌, …

Read More »

ಖ್ಯಾತ ಸಾಹಿತಿ ಪ.ರಾ.ಶಾಸ್ತ್ರಿ ಅಭಿನಂದನೆ: ಆಹ್ವಾನ ಪತ್ರಿಕೆ ಅನಾವರಣ

  ಬೆಳ್ತಂಗಡಿ : ಸಮಾಜದ ವಿವಿಧ ಸ್ತರಗಳಲ್ಲಿ ಅಡಗಿರುವ ಸಾಧಕ ಪ್ರತಿಭೆಗಳನ್ನು ಹುಡುಕಿ ಲೋಕಕ್ಕೆ ಪರಿಚಯಿಸುವ ಕಾರ್ಯ ನಡೆಸುತ್ತಿರುವವರು ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರು. ಸಹಸ್ರಾರು ಮಂದಿ ಅವರ ಲೇಖನದ ಮೂಲಕ ಹೊಸಜಗತ್ತನ್ನು ನೋಡಿದ್ದಾರೆ. ಕೃಷಿ, ಶಿಕ್ಷಣ ಹೀಗೆ ಎಲ್ಲ ಕ್ಷೇತ್ರದ ಜನರಿಗೂ ಅನುಕೂಲವಾದ ಲೇಖನಗಳನ್ನು ಬರೆದಿದ್ದಾರೆ ಎಂದು ಕಟ್ಟದಬೈಲು ಶಾಲಾ ಮುಖ್ಯಶಿಕ್ಷಕ, ರಾಜ್ಯಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಡ್ವರ್ಡ್ ಡಿಸೋಜಾ ಹೇಳಿದರು. ಅವರು ಶನಿವಾರ ಇಲ್ಲಿನ ಸುವರ್ಣ ಆರ್ಕೇಡ್ ನಲ್ಲಿ …

Read More »

ಬೆಳಗಾವಿ ಕಡೆ ಹೊರಟ್ಟಿದ್ದ ಕಾರು ಅಪಘಾತ : ಮೂವರ ಸಾವು

ಬೆಳಗಾವಿ ಕಡೆ ಹೊರಟ್ಟಿದ್ದ ಕಾರು ಅಪಘಾತ : ಮೂವರ ಸಾವು ಧಾರವಾಡ: ಭಾನುವಾರ ಬೆಳಿಗಿನ ಜಾವ ಲಾರಿ ಹಾಗೂ ಕಾರ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಮೂವರು ಸಾವಿಗೀಡಾಗಿರುವ ಘಟನೆ ಧಾರವಾಡದ ರಾಷ್ಟ್ರೀಯ ಹೆದ್ದಾರಿ 4ರ ಹಳಿಯಾಳ ಸೇತುವೆ ಬಳಿ ನಡೆದ ವರದಿಯಾಗಿದೆ. ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರಲ್ಲಿ ಒಬ್ಬರನ್ನು ಬಿಂದುಗೌಡ (35) ಹಾಗೂ ಮತ್ತೊಬ್ಬರನ್ನು ಬಾಪುಗೌಡ (36) ಎಂದು ಗುರುತಿಸಲಾಗಿದೆ. ಇನ್ನೋರ್ವ ವ್ಯಕ್ತಿಯ ಗುರುತು …

Read More »