Breaking News

ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್

ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್ ಬೆಂಗಳೂರು: ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಈಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು ₹59,000 ಕೋಟಿ ವಾರ್ಷಿಕ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಅವರು ತಿಳಿಸಿದ್ದಾರೆ. ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ …

Read More »

ಅತಿವೃಷ್ಟಿ-ಬರಗಾಲ ನಿರ್ವಹಣೆ- ಪೂರ್ವಸಿದ್ಧತಾ ಸಭೆ : ಬಿತ್ತನೆ ಬೀಜ ದರ, ದಾಸ್ತಾನು ಮಾಹಿತಿ ಪ್ರದರ್ಶಿಸಲು ಡಿಸಿ ಸೂಚನೆ

ಅತಿವೃಷ್ಟಿ-ಬರಗಾಲ ನಿರ್ವಹಣೆ- ಪೂರ್ವಸಿದ್ಧತಾ ಸಭೆ : ಬಿತ್ತನೆ ಬೀಜ ದರ, ದಾಸ್ತಾನು ಮಾಹಿತಿ ಪ್ರದರ್ಶಿಸಲು ಡಿಸಿ ಸೂಚನೆ ಬೆಳಗಾವಿ : ಜಿಲ್ಲೆಯಲ್ಲಿ ಬೀಜ ವಿತರಣಾ ಕಾರ್ಯವನ್ನು ಆರಂಭಿಸಲಾಗಿದ್ದು, ಆಯಾ ವಿತರಣಾ ಕೇಂದ್ರಗಳಲ್ಲಿ ಬೀಜ ಲಭ್ಯತೆ, ದರ ಹಾಗೂ ದಾಸ್ತಾನು ಕುರಿತು ಸ್ಪಷ್ಟ ಮಾಹಿತಿಯನ್ನು ಬೀಜ ವಿತರಣಾ ಕೇಂದ್ರದ ಆವರಣದಲ್ಲಿ ಕಡ್ಡಾಯವಾಗಿ ದೊಡ್ಡದಾದ ಫ್ಲೆಕ್ಸ್ ಮೂಲಕ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿ, ಪ್ರವಾಹ ಹಾಗೂ ಬರಗಾಲ ನಿರ್ವಹಣೆಗೆ …

Read More »

ಭಾಗ್ಯಲಕ್ಷ್ಮೀ ಯೋಜನೆಗೆ ಕೊನೆಗೂ ಮಾರ್ಗಸೂಚಿ ಪ್ರಕಟ

ಭಾಗ್ಯಲಕ್ಷ್ಮೀ ಯೋಜನೆಗೆ ಕೊನೆಗೂ ಮಾರ್ಗಸೂಚಿ ಪ್ರಕಟ ಬೆಂಗಳೂರು : ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಜಿಎಸ್‌ಟಿ ರಿಟರ್ನ್ಸ್‌ ಸಲ್ಲಿಸುವವರಾಗಿದ್ದಲ್ಲಿ ಅವರು ಈ ಯೋಜನೆಗೆ ಅರ್ಹರಲ್ಲ ಎಂದು ಹೇಳಲಾಗಿದೆ. ‘ಗೃಹ ಲಕ್ಷ್ಮಿ’ಯ ಇತರ ನಿಯಮಗಳು ಹೀಗಿವೆ: ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಲ್‌ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ …

Read More »

ಮೇಲ್ಮನೆ ಚುನಾವಣೆಗೆ ದಿನಾಂಕ ಘೋಷಣೆ

ಮೇಲ್ಮನೆ ಚುನಾವಣೆಗೆ ದಿನಾಂಕ ಘೋಷಣೆ ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಸದಸ್ಯರ ರಾಜೀನಾಮೆಯಿಂದ ತೆರವಾಗಿರುವ ಮೂರು ಸ್ಥಾನಗಳ ಆಯ್ಕೆಗೆ, ಚುನಾವಣಾ ಆಯೋಗವು ಉಪ ಚುನಾವಣೆ ದಿನಾಂಕ ಪ್ರಕಟಿಸಿದೆ. ಬಾಬೂರಾವ್ ಚಿಂಚನಸೂರ, ಆರ್.ಶಂಕರ್‌ ಹಾಗೂ ಲಕ್ಷ್ಮಣ ಸವದಿ ಅವರು ಈ ಬಾರಿಯ ವಿಧಾನಸಭೆ ಚುನಾವಣೆಗೂ ಮುನ್ನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪರಿಷತ್‌ ಸದಸ್ಯರನ್ನು ವಿಧಾನಸಭೆ ಸದಸ್ಯರೇ ಮತದಾನದ ಮೂಲಕ ಆಯ್ಕೆ ಮಾಡಲಿದ್ದಾರೆ. ಚಿಂಚನಸೂರ …

Read More »

ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.!

ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.! ಗೋಕಾಕ: ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ ಹೋರಾಟ ಮಾಡುವ ಅವಶ್ಯ ಎಂದು ಹೊಸದುರ್ಗ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ಮಂಗಳವಾರದAದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ, ಉಪ್ಪಾರ ಸಮಾಜವು ಶೈಕ್ಷಣಿಕ, ಸಮಾಜಿಕ, …

Read More »

ವಡಗಾವಿ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ದೇವಿಯ ದಶಮಾನೋತ್ಸವ ಬುಧವಾರ ಆರಂಭ

ವಡಗಾವಿ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ದೇವಿಯ ದಶಮಾನೋತ್ಸವ ಬುಧವಾರ ಆರಂಭ ಬೆಳಗಾವಿ : ವಡಗಾವಿ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ದಶಮಾನೋತ್ಸವ ಜೂನ್ 7 ರಿಂದ 9 ರವರೆಗೆ ನಡೆಯಲಿದೆ. ವರ್ಷಾವಧಿ ಉತ್ಸವ ಉಡುಪಿ ಜಿಲ್ಲೆ ಉಚ್ಚಿಲದ ವಿಶ್ವನಾಥ ಜೋಯಿಸರ ನೇತೃತ್ವದಲ್ಲಿ ದಶಮಾನೋತ್ಸವವಾಗಿ ಈ ವರ್ಷ ವಿಶೇಷವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜೂನ್ 7 ರಂದು ಬೆಳಿಗ್ಗೆ 5 ಕ್ಕೆ …

Read More »

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಕರಾವಳಿ ಭಾಗದಲ್ಲಿ 4 ದಿನ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಗಂಟೆಗೆ 40ರಿಂದ …

Read More »

ಅಸ್ತಿತ್ವಕ್ಕೆ ಬರಲಿದೆಯೇ ಇನ್ನೊಂದು ಹೊಸ ಪಕ್ಷ ?

ಅಸ್ತಿತ್ವಕ್ಕೆ ಬರಲಿದೆಯೇ ಇನ್ನೊಂದು ಹೊಸ ಪಕ್ಷ ? ದೆಹಲಿ: ರಾಜಸ್ಥಾನ ಕಾಂಗ್ರೆಸ್‌ನ ಭಿನ್ನಮತೀಯ ನಾಯಕ ಸಚಿನ್‌ ಪೈಲಟ್‌ ಅವರು ತಮ್ಮ ತಂದೆ ರಾಜೇಶ್‌ ಪೈಲಟ್‌ ಅವರ ಪುಣ್ಯಸ್ಮರಣೆ ದಿನವಾದ ಜೂನ್‌ 11ರಂದು ಹೊಸ ಪಕ್ಷ ಪ್ರಗತಿಶೀಲ ಕಾಂಗ್ರೆಸ್‌ ಘೋಷಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಪೈಲಟ್‌ ಹೊಸ ಪಕ್ಷ ಸ್ಥಾಪನೆಗೆ ಚುನಾವಣಾ ನೀತಿ ತಜ್ಞ ಪ್ರಶಾಂತ್‌ ಕಿಶೋರ್‌ ಅವರ ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್‌ ಪೊಲಿಟಿಕಲ್‌ ಆ್ಯಕ್ಷನ್‌ ಕಮಿಟಿ (ಐಪಿಎಸಿ) …

Read More »

ವಾರ್ತಾ ಇಲಾಖೆ ಆಯುಕ್ತರಾಗಿ ಹೇಮಂತ ನಿಂಬಾಳ್ಕರ ನೇಮಕ

ವಾರ್ತಾ ಇಲಾಖೆ ಆಯುಕ್ತರಾಗಿ ಹೇಮಂತ ನಿಂಬಾಳ್ಕರ ನೇಮಕ ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಹೇಮಂತ ನಿಂಬಾಳಕರ್ ದಶಕಗಳ ಹಿಂದೆ ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಅವರ ಧರ್ಮಪತ್ನಿ ಡಾ. ಅಂಜಲಿ ನಿಂಬಾಳ್ಕರ್ ಖಾನಾಪುರ ಮತಕ್ಷೇತ್ರದ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿಯಾಗಿದ್ದಾರೆ.

Read More »

ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದಂತೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದಂತೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ. ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ …

Read More »