ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಮತ ನೀಡಿ-ವಿಪ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ನಗರದ ಸೌಂದರ್ಯಕರಣದೊAದಿಗೆ ಮೂಲಭೂತ ಸೌಕರ್ಯಗಳನ್ನು ಜನತೆಗೆ ಕಲ್ಪಿಸಿ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡುವಂತೆ ವಿಧಾನ ಪರಿಷತ ಸದಸ್ಯ ಲಖನ್ ಜಾರಕಿಹೊಳಿ ಮನವಿ ಮಾಡಿದರು. ರವಿವಾರದಂದು ನಗರದ ವಾರ್ಡ ನಂ-೧೨, ೧೩, ೧೫, ೧೬ರಲ್ಲಿ ಮತಯಾಚನೆ ಮಾಡುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಿರುವ …
Read More »ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ
ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದೆ-ರಮೇಶ ಜಾರಕಿಹೊಳಿ ಗೋಕಾಕ: ಕಾಂಗ್ರೇಸ್ ಪಕ್ಷ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ ಮೂಲಕ ನಿಜವಾದ ಕೋಮುವಾದಿ ಪಕ್ಷವಾಗಿದೆ. ಈ ಹಿಂದೆ ಬ್ರೀಟಿಷರು ನಡೆಸಿದ ಒಡೆದು ಆಳುವ ನೀತಿಯನ್ನು ಕಾಂಗ್ರೇಸ್ ಪಕ್ಷ ಅನುಸರಿಸಿಕೊಂಡು ಬಂದಿದ್ದು ದಲಿರ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿಲ್ಲ. ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಬಿಜೆಪಿ ಪಕ್ಷವನ್ನು ಬೆಂಬಲಿಸುವAತೆ ಶಾಸಕ, ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಹೇಳಿದರು. …
Read More »ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿ -ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು
ಮಥುರಾ ಶ್ರೀ ಕೃಷ್ಣ ಜನ್ಮ ಭೂಮಿ -ಶಾಹಿ ಈದ್ಗಾ ವಿವಾದ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಯುವ ಭಾರತ ಸುದ್ದಿ ಅಲಹಾಬಾದ್ : ಮಥುರಾ ಕೃಷ್ಣ ಜನ್ಮ ಭೂಮಿ-ಶಾಹಿ ಈದ್ಗಾ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಸೋಮವಾರ ಶಾಹಿ ಈದ್ಗಾ ಟ್ರಸ್ಟ್ ಮತ್ತು ಉತ್ತರ ಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಸಿವಿಲ್ ನ್ಯಾಯಾಧೀಶರ ತೀರ್ಪಿನ ವಿರುದ್ಧ ಮತ್ತೊಮ್ಮೆ ವಿಚಾರಣೆ ನಡೆಸಿದ ನಂತರ ಆದೇಶ …
Read More »ಚುನಾವಣೆಯಲ್ಲಿ ದಾಖಲೆಯ ಗೆಲುವಿಗೆ ಭಗೀರಥ ಉಪ್ಪಾರ ಸಮಾಜದ ಒಗ್ಗಟ್ಟು ಪ್ರದರ್ಶನ : ಈ ಸಮಾಜಕ್ಕೆ ಸದಾ ಋಣಿಯಾಗಿರುವೆ-ಬಾಲಚಂದ್ರ ಜಾರಕಿಹೊಳಿ
ಚುನಾವಣೆಯಲ್ಲಿ ದಾಖಲೆಯ ಗೆಲುವಿಗೆ ಭಗೀರಥ ಉಪ್ಪಾರ ಸಮಾಜದ ಒಗ್ಗಟ್ಟು ಪ್ರದರ್ಶನ : ಈ ಸಮಾಜಕ್ಕೆ ಸದಾ ಋಣಿಯಾಗಿರುವೆ-ಬಾಲಚಂದ್ರ ಜಾರಕಿಹೊಳಿ ಯುವ ಭಾರತ ಸುದ್ದಿ ಮೂಡಲಗಿ: ಭಗೀರಥ ಉಪ್ಪಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವದು. ಸಮಾಜದ ಮಕ್ಕಳಿಗೆ ಶೈಕ್ಷಣಿಕ ಮತ್ತು ಉದ್ಯೋಗಕ್ಕಾಗಿ ಅವಶ್ಯವಿರುವ ಮೀಸಲಾತಿಯನ್ನು ನೀಡಲು ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಶಾಸಕ, ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ …
Read More »ಪ್ರಧಾನಿಗೆ ನಾಲಾಯಕ್ ಎಂದ ಖರ್ಗೆ ಪುತ್ರ
ಪ್ರಧಾನಿಗೆ ನಾಲಾಯಕ್ ಎಂದ ಖರ್ಗೆ ಪುತ್ರ ಯುವ ಭಾರತ ಸುದ್ದಿ ಚಿತ್ತಾಪುರ : ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ನಾಲಾಯಕ್ ಎಂದು ಮೂದಲಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಆಗಿದ್ದಾರೆ. ನರೇಂದ್ರ ಮೋದಿ ಸೇಡಂ ಮತ್ತು ಮಳಖೇಡಕ್ಕೆ ಬಂದಾಗ ಬಂಜಾರ ಸಮಾಜದವರಿಗೆ ನಿಮ್ಮ ಸಮಾಜದ ಮಗ ದೆಹಲಿಯಲ್ಲಿದ್ದಾನೆ ಎಂದು ಹೇಳಿದ್ದರು. ಆದರೆ ಈಗ …
Read More »ಮೋದಗಾ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಮೋದಗಾ ಶ್ರೀ ಸಿದ್ದೇಶ್ವರ ಜಾತ್ರೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಮೋದಗಾ ಗ್ರಾಮದ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಮತ್ತು ರಥೋತ್ಸವದಲ್ಲಿ ಕಾಂಗ್ರೆಸ್ ಪಕ್ಷದವರು ರಾಜಾರೋಷವಾಗಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ. ಜಾತ್ರೋತ್ಸವಕ್ಕೆ ಆಗಮಿಸಿದ್ದ ವಿಧಾನಪರಿಷತ್ ಸದಸ್ಯ ಹಾಗೂ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ ಅವರ …
Read More »ಬುಧವಾರ ಮೋದಿ ಮತ್ತೆ ಕರುನಾಡಿಗೆ
ಬುಧವಾರ ಮೋದಿ ಮತ್ತೆ ಕರುನಾಡಿಗೆ ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಮೇ 3 ರಂದು ಕರಾವಳಿಗೆ ಆಗಮಿಸುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೋದಿ ಅವರು ಈ ಸಲ ಪ್ರಧಾನಿಯಾಗಿ ಮಾತ್ರ ಬರುತ್ತಿಲ್ಲ. ವಿಶ್ವದ ನಂಬರ್ ಒನ್ ನಾಯಕರಾಗಿ ಬರುತ್ತಿದ್ದಾರೆ. ಹೀಗಾಗಿ ಭಾರಿ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದು ಈ …
Read More »ಶೆಟ್ಟರ್, ಸವದಿ ಪಕ್ಷ ಬಿಟ್ಟ ಬಗ್ಗೆ ಕೊನೆಗೂ ಸತ್ಯ ಬಯಲಿಗೆಳೆದ ಅಮಿತ್ ಶಾ !
ಶೆಟ್ಟರ್, ಸವದಿ ಪಕ್ಷ ಬಿಟ್ಟ ಬಗ್ಗೆ ಕೊನೆಗೂ ಸತ್ಯ ಬಯಲಿಗೆಳೆದ ಅಮಿತ್ ಶಾ ! ಬೆಂಗಳೂರು : ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಪಕ್ಷ ಬಿಟ್ಟ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಘಟನೆಯ ಸಂಪೂರ್ಣ ವಿವರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಗಳಿಗೆ ವಿಶೇಷ ಸಂದರ್ಶನ ನೀಡಿದ ಅವರು, ಶೆಟ್ಟರ್ ಹಾಗೂ ಸವದಿ …
Read More »ಬೆಳಗಾವಿಯಲ್ಲಿ ಭೀಕರ ಕೊಲೆ
ಬೆಳಗಾವಿಯಲ್ಲಿ ಭೀಕರ ಕೊಲೆ ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಭಾನುವಾರ ರಾತ್ರಿ ಯುವಕನನ್ನು ಮಹಿಳೆ ಒಬ್ಬಳು ಭೀಕರವಾಗಿ ಚುಚ್ಚಿ ಕೊಲೆಗೈದಿದ್ದಾಳೆ. ಹಳೆ ಪಿ.ಬಿ. ರಸ್ತೆಯ ಕೀರ್ತಿ ಹೋಟೆಲ್ ಬಳಿ ಘಟನೆ ನಡೆದಿದೆ. ತಾರಿಹಾಳ ಗ್ರಾಮದ ನಾಗರಾಜ ಭೀಮಶಿ ಪಾಟೀಲ (28)ಮೃತ ಯುವಕ. ರಾತ್ರಿ 2:00 ರ ಸುಮಾರಿಗೆ ಕೈಯಲ್ಲಿ ಚಾಕು ಹಿಡಿದು ಮದ್ಯಪಾನ ಮಾಡಿ ಹೋಗುತ್ತಿದ್ದ ಮಹಿಳೆಯನ್ನು ಬೈಕ್ ಸವಾರ ಯುವಕ ಪ್ರಶ್ನಿಸಿದ್ದಾನೆ. ಆಗ ಮಹಿಳೆ ಚಾಕುವಿನಿಂದ …
Read More »ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಕರ್ನಾಟಕ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಸೇರಿ ಹಲವು ನಾಯಕರು ಇದ್ದರು. …
Read More »
YuvaBharataha Latest Kannada News