Breaking News

ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ನಡ್ದಾ

ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ನಡ್ದಾ ಯುವ ಭಾರತ ಸುದ್ದಿ ಹುಬ್ಬಳ್ಳಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಎರಡು ದಿನಗಳ ಹುಬ್ಬಳ್ಳಿ ಪ್ರವಾಸದಲ್ಲಿದ್ದು ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಸಿದ್ದಾರೂಢ ಸ್ವಾಮೀಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಇತರ ನಾಯಕರು ಸಾಥ್ ನೀಡಿದ್ದಾರೆ. ನಡ್ಡಾ ಅವರು ಸಿದ್ಧಾರೂಢ ಮಠಕ್ಕೆ ಭೇಟಿ‌ ನೀಡಿ ಸಿದ್ಧಾರೂಢರು ಮತ್ತು ಗುರುನಾಥಾರೂಢರ ದರ್ಶನ ಪಡೆದರು. ನಂತರ …

Read More »

ಸವದತ್ತಿಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್ ವಶ

ಸವದತ್ತಿಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್ ವಶ ಯುವ ಭಾರತ ಸುದ್ದಿ ಬೆಳಗಾವಿ : ಸವದತ್ತಿ ಜೆಡಿಎಸ್ ಅಭ್ಯರ್ಥಿ ಸೌರಬ್ ಚೋಪ್ರಾ ಅವರಿಗೆ ಸೇರಿರುವ 42.92 ಲಕ್ಷ ಮೌಲ್ಯದ ಹೋಲಿಗೆ ಯಂತ್ರ ಮತ್ತು ಟಿಫಿನ್ ಬಾಕ್ಸ್ ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಗೋದಾಮಿನಲ್ಲಿದ್ದ ಈ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಚುನಾವಣಾ …

Read More »

ಮಹತ್ವದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನಕ್ಕೆ ಬೆಳಗಾವಿಗೆ ಬಂದ ಸಂತೋಷಜೀ !

ಮಹತ್ವದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನಕ್ಕೆ ಬೆಳಗಾವಿಗೆ ಬಂದ ಸಂತೋಷಜೀ ! ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ಬೆಳಗಾವಿ ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಏಪ್ರಿಲ್ 19 ರಂದು ಸಂಜೆ 5:00 ಅಯೋಧ್ಯಾ ನಗರ ಧರ್ಮನಾಥ ಭವನದಲ್ಲಿ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮುಖ್ಯ ವಕ್ತಾರರಾಗಿ ಆಗಮಿಸುತ್ತಿರುವುದು ವಿಶೇಷವಾಗಿದೆ. ಬೆಳಗಾವಿ ಮಹಾನಗರ, ಬೆಳಗಾವಿ ಗ್ರಾಮಾಂತರ ಚಿಕ್ಕೋಡಿ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಆಯೋಜಿತಗೊಂಡಿದೆ.

Read More »

ಸಚಿವ ಅಶೋಕ ವಿರುದ್ಧ ಸಂಸದ ಸುರೇಶ ಕಣಕ್ಕೆ

ಸಚಿವ ಅಶೋಕ ವಿರುದ್ಧ ಸಂಸದ ಸುರೇಶ ಕಣಕ್ಕೆ ಯುವ ಭಾರತ ಸುದ್ದಿ ಬೆಂಗಳೂರು : ಸಚಿವ ಅಶೋಕ್ ವಿರುದ್ಧ ಸಂಸದ ಡಿ.ಕೆ.ಸುರೇಶ್ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ. ಪದ್ಮನಾಭನಗರದಲ್ಲಿ ಬಿಜೆಪಿಯಿಂದ ಅಶೋಕ ಕಣಕ್ಕಿಳಿದಿದ್ದು ಅವರಗೆ ತಿರುಗೇಟು ನೀಡಲು ಸಂಸದ ಡಿ.ಕೆ. ಸುರೇಶ್ ಸಜ್ಜಾಗಿದ್ದಾರೆ. ಅಶೋಕ್ ಅವರನ್ನು ಬಿಜೆಪಿ ಕನಕಪುರದಲ್ಲಿ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣೆಗೆ ನಿಲ್ಲಿಸಿದೆ.

Read More »

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ಮೋದಿ, ಷಾ, ಯೋಗಿ ಕರ್ನಾಟಕ ಪ್ರವಾಸ

ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ಮೋದಿ, ಷಾ, ಯೋಗಿ ಕರ್ನಾಟಕ ಪ್ರವಾಸ ಯುವ ಭಾರತ ಸುದ್ದಿ ಬೆಂಗಳೂರು : ಮಾಡು ಇಲ್ಲವೇ ಮಾಡಿ ಎನ್ನುವ ರೀತಿಯಲ್ಲಿ ಈ ಬಾರಿ ಚುನಾವಣೆಯನ್ನು ಬಿಜೆಪಿ ಪ್ರತಿಷ್ಠೆಯನ್ನಾಗಿ ಪರಿಗಣಿಸಿದೆ. ಲೋಕಸಭಾ ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಬಿಜೆಪಿ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ರಾಜ್ಯದಲ್ಲಿ ಚುನಾವಣೆ ಆರ್ಭಟ ತುಸು ಜೋರಾಗಿದೆ. ಕಮಲ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿಯ ರಾಷ್ಟ್ರೀಯ ನಾಯಕರು ಕರುನಾಡಿನತ್ತ …

Read More »

ಬೆಳಗಾವಿಗೆ ಇಂದು ಸಂತೋಷ್ ಜಿ

ಬೆಳಗಾವಿಗೆ ಇಂದು ಸಂತೋಷ್ ಜಿ ಯುವ ಭಾರತ ಸುದ್ದಿ ಬೆಳಗಾವಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಹೋಟೆಲ್ ಸಂಕಮ್ ಸಭಾಗ್ರಹದಲ್ಲಿ ಅವರು ಅತ್ರಪ್ತರ ಜೊತೆ ಮಾತುಕತೆ ನಡೆಸಲಿದ್ದಾರೆ. ವಿಧಾನಸಭಾ ಚುನಾವಣೆ ಸಂಬಂಧ ಟಿಕೆಟ್ ವಂಚಿತರಾದವರ ಜೊತೆ ಅವರು ಚರ್ಚಿಸಿ ಬಂಡಾಯ ಶಮನಕ್ಕೆ ಮುಂದಾಗಲಿದ್ದಾರೆ. ನಂತರ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಜೊತೆ ಮಾತುಕತೆ ನಡೆಸಲಿದ್ದು ಇಡೀ ದಿನ …

Read More »

ನಾಮಪತ್ರ, ಚುನಾವಣೆ ಬಗ್ಗೆ ಕುತೂಹಲ : ಚುನಾವಣೆ ವೇಳೆ ಕಾಣಿಸಿಕೊಂಡ ಸಿದ್ದರಾಮಯ್ಯ ಮೊಮ್ಮಗ !

ನಾಮಪತ್ರ, ಚುನಾವಣೆ ಬಗ್ಗೆ ಕುತೂಹಲ : ಚುನಾವಣೆ ವೇಳೆ ಕಾಣಿಸಿಕೊಂಡ ಸಿದ್ದರಾಮಯ್ಯ ಮೊಮ್ಮಗ ! ಯುವ ಭಾರತ ಸುದ್ದಿ ಮೈಸೂರು : ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಂಬದ ಮೂರನೇ ತಲೆಮಾರು ಇದೀಗ ರಾಜಕೀಯ ಪ್ರವೇಶ ಮಾಡುವ ಹಾದಿಯಲ್ಲಿದೆ. ರಾಕೇಶ್ ಅವರ ಪುತ್ರ ಧವನ್ ರಾಜಕೀಯ ತರಬೇತಿಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಅವರಿಗೂ ರಾಜಕೀಯದಲ್ಲಿ ಬಹಳ ಆಸಕ್ತಿ ಇತ್ತು. ಈ ಬಗ್ಗೆ ಪ್ರತಿಕ್ರಿಯೆ …

Read More »

ಕೈ ನಾಯಕನ ಸೆಳೆಯಲು ಮುಂದಾಯ್ತು ಕಮಲ ಪಕ್ಷ !

ಕೈ ನಾಯಕನ ಸೆಳೆಯಲು ಮುಂದಾಯ್ತು ಕಮಲ ಪಕ್ಷ ! ಯುವ ಭಾರತ ಸುದ್ದಿ ಬಾಗಲಕೋಟೆ : ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ಕಾಂಗ್ರೆಸ್ ನಾಯಕನನ್ನು ಸೆಳೆಯಲು ಕಮಲ ಪಕ್ಷ ಇದೀಗ ಮುಂದಾಗಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಎಸ್. ಆರ್. ಪಾಟೀಲ ಅವರನ್ನು ಬಿಜೆಪಿಗೆ ಸೆಳೆಯಲು ಮುಂದಾಗಿದೆ. ಈ ಬಗ್ಗೆ ಸಚಿವ ಮುರುಗೇಶ್ ನಿರಾಣಿ ಸ್ವತಹ ರಣಾಂಗಣಕ್ಕೆ ಇಳಿದಿದ್ದಾರೆ. ಪಾಟೀಲ ಅವರು ಎರಡು ದಿನ ಸಮಯ ಕೇಳಿದ್ದು ನಂತರ ತಮ್ಮ ನಿರ್ಧಾರ ಪ್ರಕಟಿಸುವುದಾಗಿ …

Read More »

ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ

ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ ಯುವ ಭಾರತ ಸುದ್ದಿ ಬೆಳಗಾವಿ : ಅಥಣಿಗೆ ಇಂದು ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಆಗಮಿಸುತ್ತಿದ್ದಾರೆ. ಅಥಣಿ ವಿಧಾನಸಭಾ ಮತಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಂಪತ್ ಕುಮಾರ್ ಶೆಟ್ಟಿ ಅವರ ನಾಮಪತ್ರ ಸಲ್ಲಿಕೆ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಆಗಮಿಸುತ್ತಿದ್ದು ಬೆಳಗ್ಗೆ 11ಕ್ಕೆ ಶ್ರೀ ಶಿವಾಜಿ ವೃತ್ತದಿಂದ ನಾಮಪತ್ರ ಸಲ್ಲಿಕೆ ಮೆರವಣಿಗೆ ಆರಂಭವಾಗಲಿದೆ.

Read More »

ಮುಖ್ಯಮಂತ್ರಿ ಕ್ಷೇತ್ರದಲ್ಲಿಂದು ನಡ್ದಾ, ಸುದೀಪ್ ಮೆರವಣಿಗೆ

ಮುಖ್ಯಮಂತ್ರಿ ಕ್ಷೇತ್ರದಲ್ಲಿಂದು ನಡ್ದಾ, ಸುದೀಪ್ ಮೆರವಣಿಗೆ ಯುವ ಭಾರತ ಸುದ್ದಿ ಹಾವೇರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದೇ ನಾಮಪತ್ರ ಸಲ್ಲಿಸಲಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಮತ್ತು ಖ್ಯಾತ ನಟ ಸುದೀಪ್ ಬೃಹತ್ ರ್ಯಾಲಿ ಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಶಿಗ್ಗಾವಿ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನಾಮಪತ್ರ ಸಲ್ಲಿಸಲಿದ್ದು ಶಿಗ್ಗಾವಿಯಲ್ಲಿ ಇಂದು ಕಮಲ ಕಲರವ ಮೊಳಗಲಿದೆ.

Read More »