ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ದಾಖಲೆರಹಿತ ಎರಡು ಕೋಟಿ ನಗದು ವಶ ಯುವ ಭಾರತ ಸುದ್ದಿ ಬೆಳಗಾವಿ : ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ …
Read More »ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮೊದಲ ಸ್ಥಾನ
ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮೊದಲ ಸ್ಥಾನ ಯುವ ಭಾರತ ಸುದ್ದಿ ನವದೆಹಲಿ: ಜನರಿಗೆ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ. ಇಂಡಿಯಾ ಜಸ್ಟೀಸ್ 2022ರ ವರದಿಯ ಪ್ರಕಾರ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಮೊದಲ ಐದು ಸ್ಥಾನಗಳಲ್ಲಿ ದಕ್ಷಿಣದ ರಾಜ್ಯಗಳು ಇವೆ. ಒಂದು ಕೋಟಿಗೂ ಅಧಿಕ ಜನಸಂಖ್ಯೆ ಇರುವ ದೊಡ್ಡ ಹಾಗೂ ಮಧ್ಯಮ ರಾಜ್ಯಗಳ ಪೈಕಿ …
Read More »ಮತಕ್ಷೇತ್ರಗಳಿಗೆ ಇವಿಎಂ ರವಾನೆಗೆ ಕ್ರಮ: ಡಿಸಿ ನಿತೇಶ ಪಾಟೀಲ
ಮತಕ್ಷೇತ್ರಗಳಿಗೆ ಇವಿಎಂ ರವಾನೆಗೆ ಕ್ರಮ: ಡಿಸಿ ನಿತೇಶ ಪಾಟೀಲ ಯುವ ಭಾರತ ಸುದ್ದಿ ಬೆಳಗಾವಿ : ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಮತಕ್ಷೇತ್ರಗಳ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಕಂಪ್ಯೂಟರ್ ಆಧಾರಿತ ಪ್ರಥಮ ರ್ಯಾಂಡಮೈಜೇಷನ್(ಯಾದೃಚ್ಛಿಕ) ಪ್ರಕ್ರಿಯೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಏ.4) ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳ ಪ್ರಥಮ ರ್ಯಾಂಡಮೈಜೇಷನ್ ಪ್ರಕ್ರಿಯೆ ನಡೆಯಿತು. ಜಿಲ್ಲೆಯ ಹದಿನೆಂಟು ವಿಧಾನಸಭಾ ಮತಕ್ಷೇತ್ರಗಳಿಗೆ …
Read More »ನಂದಗಡದಲ್ಲಿ 40 ಲಕ್ಷ ರೂ. ಚಿನ್ನಾಭರಣ ವಶ
ನಂದಗಡದಲ್ಲಿ 40 ಲಕ್ಷ ರೂ. ಚಿನ್ನಾಭರಣ ವಶ ಯುವ ಭಾರತ ಸುದ್ದಿ ಬೆಳಗಾವಿ : ಖಾನಾಪುರ ತಾಲೂಕು ನಂದಗಡ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಳಿಯಾಳದಿಂದ ಕಕ್ಕೇರಿಗೆ ಕಾರಿನಲ್ಲಿ ಚಿನ್ನಾಭರಣ ಮತ್ತು ಬೆಳ್ಳಿ ಆಭರಣ ಸಾಗಿಸಲಾಗುತ್ತಿತ್ತು. 21.25 ಲಕ್ಷ ರೂ.395ಗ್ರಾಂ ಚಿನ್ನಾಭರಣ, 19 ಲಕ್ಷ ರೂಪಾಯಿ ಮೌಲ್ಯದ 28 ಕೆಜಿ ಬೆಳ್ಳಿ ಆಭರಣ ಮತ್ತು ಕಾರನ್ನು …
Read More »ಕಾಂಗ್ರೆಸ್ 2 ನೇ ಪಟ್ಟಿ ಇಂದೇ ಪ್ರಕಟ ?
ಕಾಂಗ್ರೆಸ್ 2 ನೇ ಪಟ್ಟಿ ಇಂದೇ ಪ್ರಕಟ ? ಯುವ ಭಾರತ ಸುದ್ದಿ ಬೆಂಗಳೂರು: ಕಾಂಗ್ರೆಸ್ ಎರಡನೇ ಪಟ್ಟಿ ಮಂಗಳವಾರ ರಾತ್ರಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ ಬಿಡುಗಡೆ ಆಗದ ಕಾರಣ ಬುಧವಾರ ಬಿಡುಗಡೆ ಆಗುವ ಸಾಧ್ಯತೆಗಳಿವೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಿಇಸಿ ಸಭೆ ಬಳಿಕ ಮಾತನಾಡಿ, ಅಭ್ಯರ್ಥಿಗಳ ಪಟ್ಟಿ ಮೊದಲು ಪ್ರಕಟಿಸಿದ್ದೇ ಕಾಂಗ್ರೆಸ್ . ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಸಲಾಗಿದೆ. ನೀತಿ ಸಂಹಿತೆ …
Read More »ನ್ಯೂಯಾರ್ಕ್ ಕೋರ್ಟಿನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ
ನ್ಯೂಯಾರ್ಕ್ ಕೋರ್ಟಿನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ ಯುವ ಭಾರತ ಸುದ್ದಿ ನ್ಯೂಯಾರ್ಕ್ : ಅಮೆರಿಕದ ಮಾಜಿ ಅಧ್ಯಕ್ಷ ಮತ್ತು 2024 ರ ಶ್ವೇತಭವನದ ರೇಸ್ಗೆ ರಿಪಬ್ಲಿಕನ್ ನಾಮನಿರ್ದೇಶನದ ಮುಂಚೂಣಿಯಲ್ಲಿರುವ ನಾಯಕ ಡೊನಾಲ್ಡ್ ಟ್ರಂಪ್, ಅವರು ಮ್ಯಾನ್ಹ್ಯಾಟನ್ ನ್ಯಾಯಾಲಯದಲ್ಲಿ ಶರಣಾಗಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸುವ ಮುನ್ನ ಮ್ಯಾನ್ಹ್ಯಾಟನ್ ಜಿಲ್ಲಾ ಅಟಾರ್ನಿ ಕಚೇರಿಯಲ್ಲಿ ಬಂಧಿಸಲಾಯಿತು. ಕೋರ್ಟ್ನಲ್ಲಿ ಅವರು ಅಧಿಕಾರಿಗಳಿಗೆ ಶರಣಾದರು ಮತ್ತು ಅವರ ಮೇಲೆ ಪ್ರಕರಣ ದಾಖಲಿಸಲಾಯಿತು. ಪ್ರಕ್ರಿಯೆಗೊಳಿಸಿದ …
Read More »ಇವರೇ ಕಾಂಗ್ರೆಸ್ ಅಭ್ಯರ್ಥಿಗಳು ?
ಇವರೇ ಕಾಂಗ್ರೆಸ್ ಅಭ್ಯರ್ಥಿಗಳು ? ಯುವ ಭಾರತ ಸುದ್ದಿ ದೆಹಲಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆದಿದ್ದು, ಸಭೆಯಲ್ಲಿ ಎರಡನೇ ಪಟ್ಟಿ ಅಂತಿಮವಾಗಲಿದ್ದು, ಇಂದೇ ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ: ಹರಿಹರ-ರಾಮಪ್ಪ ಕಾರ್ಕಳ- ಉದಯ್ ಕುಮಾರ್ ಶೆಟ್ಟಿ ಗೋಕಾಕ – ಅಶೋಕ್ …
Read More »ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಸುಳ್ಳು ಸುದ್ದಿ !
ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಸುಳ್ಳು ಸುದ್ದಿ !
Read More »ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದವರು ಯಾರು ?
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದವರು ಯಾರು ? ಯುವ ಭಾರತ ಸುದ್ದಿ ಬೆಂಗಳೂರು : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಬಿಡುಗಡೆ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ . ಈಗ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ . ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ .
Read More »ಆಟೋಗಳ ಮೇಲೆ ರಾಜಕಾರಣಿಗಳ ಫೋಟೋ ಹಾಕಿದವರಿಗೆ ಶಾಕ್
ಆಟೋಗಳ ಮೇಲೆ ರಾಜಕಾರಣಿಗಳ ಫೋಟೋ ಹಾಕಿದವರಿಗೆ ಶಾಕ್ ಯುವ ಭಾರತ ಸುದ್ದಿ ಬೆಂಗಳೂರು : ನೀತಿ ಸಂಹಿತೆ ಹಿನ್ನೆಲೆ ಬೆಂಗಳೂರಿನಲ್ಲಿ ಆರ್ಟಿಒ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದಾರೆ . ಪಕ್ಷದ ಚಿಹ್ನೆ , ರಾಜಕಾರಣಿ ಫೋಟೋ ಅಂಟಿಸಿರುವ ಆಟೋಗಳ ಮೇಲೆ ನಿಗಾ ಇಡಲಾಗುತ್ತಿದೆ . ಆಟೋಗಳ ಮೇಲೆ ರಾಜಕಾರಣಿಗಳ ಭಾವಚಿತ್ರ , ಪಕ್ಷಗಳ ಚಿಹ್ನೆ ಇದ್ರೆ ದಂಡ ಹಾಕಲಾಗುತ್ತಿದೆ . ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಆರ್ ಟಿ …
Read More »