Breaking News

ಕುಂಭಕರ್ಣ ನಿದ್ದೆ ವಿರುದ್ಧ ಪ್ರತಿಭಟನೆ !

Spread the love

ಕುಂಭಕರ್ಣ ನಿದ್ದೆ ವಿರುದ್ಧ ಪ್ರತಿಭಟನೆ !

ಯುವ ಭಾರತ ಸುದ್ದಿ ನಾಗಪುರ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾ ವಿಕಾಸ್ ಅಘಾಡಿ ನೇತೃತ್ವದಲ್ಲಿ ಇಂದು ಶಾಸಕರು ನಾಗಪುರ ವಿಧಿ ಮಂಡಲ ಎದುರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರಕಾರ ಗಡಿ ವಿಷಯದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಮುಂದಾಗುತ್ತಿಲ್ಲ. ಕರ್ನಾಟಕ ಸರಕಾರ ಈಗಾಗಲೇ ತನ್ನ ರಾಜ್ಯದ ಒಂದು ಇಂಚು ಭೂಮಿಯನ್ನು ಮಹಾರಾಷ್ಟ್ರಕ್ಕೆ ನೀಡುವುದಿಲ್ಲ ಎಂದು ಠರಾವ್ ಅಂಗೀಕರಿಸಿದೆ. ಆದರೆ, ಮಹಾರಾಷ್ಟ್ರ ಮಾತ್ರ ಕುಂಭಕರ್ಣ ನಿದ್ದೆಯಲ್ಲಿದೆ ಎಂದು ಮಹಾವಿಕಾಸ ಅಘಾಡಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.ಮಹಾರಾಷ್ಟ್ರ ಸರಕಾರ ಈ ಕೂಡಲೇ ಎಚ್ಚೆತ್ತು ಕರ್ನಾಟಕಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ಸರಕಾರ ವಿರುದ್ದ ಘೋಷಣೆ ಕೂಗಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

2 × four =